AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರಂತಹ ರಾಜಕಾರಣಿ ಆಧಾರರಹಿತ ಸುಳ್ಳು ಹೇಳುತ್ತಿರುವುದು ನಾಚಿಕೆಗೇಡು: ಪಿಣರಾಯಿ ವಿಜಯನ್ ಕಿಡಿ

ಹೆಚ್​ಡಿ ದೇವೇಗೌಡರ ಇತ್ತೀಚಿನ ಹೇಳಿಕೆಯಿಂದ ನನಗೆ ಸಂಪೂರ್ಣ ಆಶ್ಚರ್ಯವಾಗಿದೆ! ಜೆಡಿಎಸ್-ಬಿಜೆಪಿ ಮೈತ್ರಿಕೂಟವನ್ನು ಬೆಂಬಲಿಸುವ ಕಲ್ಪನೆಯನ್ನು ಸಹ ನಾನು ಮಾಡುವುದಿಲ್ಲ. ಅಂಥದ್ದೊಂದು ಭಾವನೆ ಯಾವುದೇ ರೀತಿಯ ಭ್ರಮೆಗಿಂತ ಕಡಿಮೆಯದ್ದಲ್ಲ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ದೇವೇಗೌಡರಂತಹ ರಾಜಕಾರಣಿ ಆಧಾರರಹಿತ ಸುಳ್ಳು ಹೇಳುತ್ತಿರುವುದು ನಾಚಿಕೆಗೇಡು: ಪಿಣರಾಯಿ ವಿಜಯನ್ ಕಿಡಿ
ಪಿಣರಾಯಿ ವಿಜಯನ್ & ಹೆಚ್​ಡಿ ದೇವೇಗೌಡ
Follow us
TV9 Web
| Updated By: Ganapathi Sharma

Updated on: Oct 20, 2023 | 6:28 PM

ಬೆಂಗಳೂರು, ಅಕ್ಟೋಬರ್ 20: ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿ ವಿಚಾರವಾಗಿ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಅವರು ನೀಡಿರುವ ಹೇಳಿಕೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇವೇಗೌಡರಂತಹ ಪಳಗಿದ ರಾಜಕಾರಣಿ ಈ ರೀತಿ ಆಧಾರರಹಿತ ಸುಳ್ಳುಗಳನ್ನು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್​ ಮಾಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಕೇರಳ ಮುಖ್ಯಮಂತ್ರಿ ಒಪ್ಪಿದ್ದಾರೆಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಗುರುವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

‘ಹೆಚ್​ಡಿ ದೇವೇಗೌಡರ ಇತ್ತೀಚಿನ ಹೇಳಿಕೆಯಿಂದ ನನಗೆ ಸಂಪೂರ್ಣ ಆಶ್ಚರ್ಯವಾಗಿದೆ! ಜೆಡಿಎಸ್-ಬಿಜೆಪಿ ಮೈತ್ರಿಕೂಟವನ್ನು ಬೆಂಬಲಿಸುವ ಕಲ್ಪನೆಯನ್ನು ಸಹ ನಾನು ಮಾಡುವುದಿಲ್ಲ. ಅಂಥದ್ದೊಂದು ಭಾವನೆ ಯಾವುದೇ ರೀತಿಯ ಭ್ರಮೆಗಿಂತ ಕಡಿಮೆಯದ್ದಲ್ಲ. ದೇವೇಗೌಡರಂತಹ ಪಳಗಿದ ರಾಜಕಾರಣಿ ಈ ರೀತಿ ಆಧಾರರಹಿತ ಸುಳ್ಳುಗಳನ್ನು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಿಪಿಐ(ಎಂ) ಎಂದಿಗೂ ಸಂಘ ಪರಿವಾರದ ವಿರುದ್ಧದ ಹೋರಾಟದಲ್ಲಿ ಅಚಲ ಮತ್ತು ಮಣಿಯದ ಶಕ್ತಿಯಾಗಿದೆ. ನಮ್ಮ ನಿಲುವಿನಲ್ಲಿ ಅಸ್ಪಷ್ಟತೆಗೆ ಅವಕಾಶವಿಲ್ಲ’ ಎಂದು ಪಿಣರಾಯಿ ವಿಜಯನ್ ಎಕ್ಸ್​ ಪೋಸ್ಟ್​​​ನಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿ ಜತೆಗಿನ ಮೈತ್ರಿಗೆ ಜೆಡಿಎಸ್​​ನ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು, ಪಕ್ಷದ ರಾಜ್ಯಾಧ್ಯಕ್ಷ ತಾವು. ತಮ್ಮ ಸಮ್ಮತಿ ಇಲ್ಲದೆ ಮೈತ್ರಿ ಸಾಧ್ಯವಿಲ್ಲ. ನಾವು ಬಿಜೆಪಿ ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಕ್ರಮ ಕೈಗೊಂಡಿದ್ದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ, ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆಗೊಳಿಸಿದ್ದರು.

ಇದನ್ನೂ ಓದಿ: ಯಾವ ಸಭೆಯಲ್ಲೂ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರದ ಸಿಎಂ ಇಬ್ರಾಹಿಂ: ಶಾಸಕ ಎ ಮಂಜು ಬಿಚ್ಚಿಟ್ರು ಹೊಸ ರಹಸ್ಯ

ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಅವರು, ಮೈತ್ರಿ ವಿಚಾರವಾಗಿ ಹಲವು ವಿಚಾರಗಳನ್ನು ಉಲ್ಲೇಖಿಸಿದ್ದರು. ಇದೇ ವೇಳೆ ಕೇರಳ ಮುಖ್ಯಮಂತ್ರಿಗಳ ಬಗ್ಗೆಯೂ ಪ್ರಸ್ತಾಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ