AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu and Kashmir Politics: ಆಜಾದ್​ ಜತೆ ಪಕ್ಷ ತೊರೆದಿದ್ದ ಜಮ್ಮು ಕಾಶ್ಮೀರದ ಮಾಜಿ ಡಿಸಿಎಂ ತಾರಾಚಂದ್ ಸೇರಿ 17 ಮುಖಂಡರು ಮತ್ತೆ ಕಾಂಗ್ರೆಸ್​ ತೆಕ್ಕೆಗೆ

ಗುಲಾಂ ನಬಿ ಆಜಾದ್ ಜತೆ ಪಕ್ಷ ತೊರೆದಿದ್ದ ಜಮ್ಮು ಕಾಶ್ಮೀರದ ಮಾಜಿ ಡಿಸಿಎಂ ತಾರಾಚಂದ್ ಸೇರಿ 17 ಮುಖಂಡರು ಮತ್ತೆ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ.

Jammu and Kashmir Politics: ಆಜಾದ್​ ಜತೆ ಪಕ್ಷ ತೊರೆದಿದ್ದ ಜಮ್ಮು ಕಾಶ್ಮೀರದ ಮಾಜಿ ಡಿಸಿಎಂ ತಾರಾಚಂದ್ ಸೇರಿ 17 ಮುಖಂಡರು ಮತ್ತೆ ಕಾಂಗ್ರೆಸ್​ ತೆಕ್ಕೆಗೆ
ಕಾಂಗ್ರೆಸ್
TV9 Web
| Edited By: |

Updated on: Jan 06, 2023 | 3:21 PM

Share

ಗುಲಾಂ ನಬಿ ಆಜಾದ್ ಜತೆ ಪಕ್ಷ ತೊರೆದಿದ್ದ ಜಮ್ಮು ಕಾಶ್ಮೀರದ ಮಾಜಿ ಡಿಸಿಎಂ ತಾರಾಚಂದ್ ಸೇರಿ 17 ಮುಖಂಡರು ಮತ್ತೆ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್ ಮತ್ತು ಮಾಜಿ ಪಿಸಿಸಿ ಮುಖ್ಯಸ್ಥ ಪೀರ್ಜಾದಾ ಮೊಹಮ್ಮದ್ ಸಯೀದ್ ಸೇರಿದಂತೆ ಡೆಮಾಕ್ರಟಿಕ್ ಆಜಾದ್ ಪಾರ್ಟಿಯ (ಡಿಎಪಿ) ಹದಿನೇಳು ಮಾಜಿ ನಾಯಕರು ಇಂದು ಕಾಂಗ್ರೆಸ್ ತೆಕ್ಕೆಗೆ ಮರಳಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ನಾಯಕರನ್ನು ಸ್ವಾಗತಿಸಿ, ಎರಡು ವಾರಗಳ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರವೇಶಿಸಲಿರುವ ಭಾರತ್ ಜೋಡೋ ಯಾತ್ರೆಗೆ ಮುಂಚಿತವಾಗಿ ಅವರು ತಮ್ಮ ಮನೆಗೆ ಮರಳುತ್ತಿರುವುದು ಪಕ್ಷಕ್ಕೆ ಸಂತೋಷದ ದಿನವಾಗಿದೆ ಎಂದು ಹೇಳಿದರು.

ಭಾರತ್ ಜೋಡೋ ಯಾತ್ರೆಯು ದೇಶದಲ್ಲಿ ದೊಡ್ಡ ಆಂದೋಲನವಾಗಿ ಮಾರ್ಪಟ್ಟಿದೆ ಮತ್ತು ಅದಕ್ಕಾಗಿಯೇ ಈ ಎಲ್ಲಾ ನಾಯಕರು ಮತ್ತೆ ಕಾಂಗ್ರೆಸ್ ತೆಕ್ಕೆಗೆ ಬರಲು ನಿರ್ಧರಿಸಿದ್ದಾರೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಮತ್ತಷ್ಟು ಓದಿ: ಜನವರಿ 30ರಂದು ಶ್ರೀನಗರದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಭಾರತ್ ಜೋಡೋ ಯಾತ್ರೆ ಮುಕ್ತಾಯ

ಯಾತ್ರೆಯು ಜಮ್ಮು ಮತ್ತು ಕಾಶ್ಮೀರವನ್ನು ಪ್ರವೇಶಿಸುತ್ತಿರುವಾಗ, ಅಖಂಡ ಭಾರತವನ್ನು ಬಯಸುವ ಮತ್ತು ಕಾಂಗ್ರೆಸ್ ಸಿದ್ಧಾಂತವನ್ನು ಹೊಂದಿರುವ ಎಲ್ಲಾ ಜನರು ಪಕ್ಷಕ್ಕೆ ಸೇರಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ, ಅವರು ಎರಡು ತಿಂಗಳ ಕಾಲ ರಜೆಯ ಮೇಲೆ ಹೋಗಿದ್ದರು ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಮರಳಲು ಡಿಎಪಿ ಮುಖ್ಯಸ್ಥ ಗುಲಾಂ ನಬಿ ಆಜಾದ್ ಅವರೊಂದಿಗೆ ಯಾವುದೇ ಮಾತುಕತೆ ನಡೆಯುತ್ತಿದೆಯೇ ಎಂಬ ಪ್ರಶ್ನೆ ಉತ್ತರಿಸಲು ನಿರಾಕರಿಸಿದ್ದಾರೆ.

ಯಾತ್ರೆಗೆ ಆಜಾದ್ ಅವರನ್ನು ಆಹ್ವಾನಿಸಲಾಗಿದೆಯೇ ಎಂಬ ಬಗ್ಗೆ ಅವರು,  ಮಾತನಾಡಿ, ಕಾಂಗ್ರೆಸ್ ಸಿದ್ಧಾಂತದಲ್ಲಿ ನಂಬಿಕೆ ಇರುವವರು ಭಾರತ್ ಜೋಡೋ ಯಾತ್ರೆಗೆ ಸೇರಲು ಸ್ವಾಗತ” ಎಂದು ಹೇಳಿದರು. ಎಲ್ಲಾ ಸಮಾನ ಮನಸ್ಕ ಪಕ್ಷಗಳಿಗೆ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದೇವೆ ಎಂದ ಅವರು, ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಸಯೀದ್ ಅವರು ಯಾತ್ರೆಯಲ್ಲಿ ಪಾಲ್ಗೊಂಡು ಶ್ರೀನಗರದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಪಾದಯಾತ್ರೆ ನಡೆಸಲಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಗುರುವಾರ ಸಂಜೆ ಉತ್ತರ ಪ್ರದೇಶದಿಂದ ಹರ್ಯಾಣಕ್ಕೆ ಮರುಪ್ರವೇಶಿಸಿದೆ. ಯಾತ್ರೆಯು ಕರ್ನಾಲ್, ಕುರುಕ್ಷೇತ್ರ ಮತ್ತು ಅಂಬಾಲಾ ಮೂಲಕ ಸಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ