AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu and Kashmir Politics: ಆಜಾದ್​ ಜತೆ ಪಕ್ಷ ತೊರೆದಿದ್ದ ಜಮ್ಮು ಕಾಶ್ಮೀರದ ಮಾಜಿ ಡಿಸಿಎಂ ತಾರಾಚಂದ್ ಸೇರಿ 17 ಮುಖಂಡರು ಮತ್ತೆ ಕಾಂಗ್ರೆಸ್​ ತೆಕ್ಕೆಗೆ

ಗುಲಾಂ ನಬಿ ಆಜಾದ್ ಜತೆ ಪಕ್ಷ ತೊರೆದಿದ್ದ ಜಮ್ಮು ಕಾಶ್ಮೀರದ ಮಾಜಿ ಡಿಸಿಎಂ ತಾರಾಚಂದ್ ಸೇರಿ 17 ಮುಖಂಡರು ಮತ್ತೆ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ.

Jammu and Kashmir Politics: ಆಜಾದ್​ ಜತೆ ಪಕ್ಷ ತೊರೆದಿದ್ದ ಜಮ್ಮು ಕಾಶ್ಮೀರದ ಮಾಜಿ ಡಿಸಿಎಂ ತಾರಾಚಂದ್ ಸೇರಿ 17 ಮುಖಂಡರು ಮತ್ತೆ ಕಾಂಗ್ರೆಸ್​ ತೆಕ್ಕೆಗೆ
ಕಾಂಗ್ರೆಸ್
TV9 Web
| Edited By: |

Updated on: Jan 06, 2023 | 3:21 PM

Share

ಗುಲಾಂ ನಬಿ ಆಜಾದ್ ಜತೆ ಪಕ್ಷ ತೊರೆದಿದ್ದ ಜಮ್ಮು ಕಾಶ್ಮೀರದ ಮಾಜಿ ಡಿಸಿಎಂ ತಾರಾಚಂದ್ ಸೇರಿ 17 ಮುಖಂಡರು ಮತ್ತೆ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್ ಮತ್ತು ಮಾಜಿ ಪಿಸಿಸಿ ಮುಖ್ಯಸ್ಥ ಪೀರ್ಜಾದಾ ಮೊಹಮ್ಮದ್ ಸಯೀದ್ ಸೇರಿದಂತೆ ಡೆಮಾಕ್ರಟಿಕ್ ಆಜಾದ್ ಪಾರ್ಟಿಯ (ಡಿಎಪಿ) ಹದಿನೇಳು ಮಾಜಿ ನಾಯಕರು ಇಂದು ಕಾಂಗ್ರೆಸ್ ತೆಕ್ಕೆಗೆ ಮರಳಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ನಾಯಕರನ್ನು ಸ್ವಾಗತಿಸಿ, ಎರಡು ವಾರಗಳ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರವೇಶಿಸಲಿರುವ ಭಾರತ್ ಜೋಡೋ ಯಾತ್ರೆಗೆ ಮುಂಚಿತವಾಗಿ ಅವರು ತಮ್ಮ ಮನೆಗೆ ಮರಳುತ್ತಿರುವುದು ಪಕ್ಷಕ್ಕೆ ಸಂತೋಷದ ದಿನವಾಗಿದೆ ಎಂದು ಹೇಳಿದರು.

ಭಾರತ್ ಜೋಡೋ ಯಾತ್ರೆಯು ದೇಶದಲ್ಲಿ ದೊಡ್ಡ ಆಂದೋಲನವಾಗಿ ಮಾರ್ಪಟ್ಟಿದೆ ಮತ್ತು ಅದಕ್ಕಾಗಿಯೇ ಈ ಎಲ್ಲಾ ನಾಯಕರು ಮತ್ತೆ ಕಾಂಗ್ರೆಸ್ ತೆಕ್ಕೆಗೆ ಬರಲು ನಿರ್ಧರಿಸಿದ್ದಾರೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಮತ್ತಷ್ಟು ಓದಿ: ಜನವರಿ 30ರಂದು ಶ್ರೀನಗರದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಭಾರತ್ ಜೋಡೋ ಯಾತ್ರೆ ಮುಕ್ತಾಯ

ಯಾತ್ರೆಯು ಜಮ್ಮು ಮತ್ತು ಕಾಶ್ಮೀರವನ್ನು ಪ್ರವೇಶಿಸುತ್ತಿರುವಾಗ, ಅಖಂಡ ಭಾರತವನ್ನು ಬಯಸುವ ಮತ್ತು ಕಾಂಗ್ರೆಸ್ ಸಿದ್ಧಾಂತವನ್ನು ಹೊಂದಿರುವ ಎಲ್ಲಾ ಜನರು ಪಕ್ಷಕ್ಕೆ ಸೇರಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ, ಅವರು ಎರಡು ತಿಂಗಳ ಕಾಲ ರಜೆಯ ಮೇಲೆ ಹೋಗಿದ್ದರು ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಮರಳಲು ಡಿಎಪಿ ಮುಖ್ಯಸ್ಥ ಗುಲಾಂ ನಬಿ ಆಜಾದ್ ಅವರೊಂದಿಗೆ ಯಾವುದೇ ಮಾತುಕತೆ ನಡೆಯುತ್ತಿದೆಯೇ ಎಂಬ ಪ್ರಶ್ನೆ ಉತ್ತರಿಸಲು ನಿರಾಕರಿಸಿದ್ದಾರೆ.

ಯಾತ್ರೆಗೆ ಆಜಾದ್ ಅವರನ್ನು ಆಹ್ವಾನಿಸಲಾಗಿದೆಯೇ ಎಂಬ ಬಗ್ಗೆ ಅವರು,  ಮಾತನಾಡಿ, ಕಾಂಗ್ರೆಸ್ ಸಿದ್ಧಾಂತದಲ್ಲಿ ನಂಬಿಕೆ ಇರುವವರು ಭಾರತ್ ಜೋಡೋ ಯಾತ್ರೆಗೆ ಸೇರಲು ಸ್ವಾಗತ” ಎಂದು ಹೇಳಿದರು. ಎಲ್ಲಾ ಸಮಾನ ಮನಸ್ಕ ಪಕ್ಷಗಳಿಗೆ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದೇವೆ ಎಂದ ಅವರು, ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಸಯೀದ್ ಅವರು ಯಾತ್ರೆಯಲ್ಲಿ ಪಾಲ್ಗೊಂಡು ಶ್ರೀನಗರದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಪಾದಯಾತ್ರೆ ನಡೆಸಲಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಗುರುವಾರ ಸಂಜೆ ಉತ್ತರ ಪ್ರದೇಶದಿಂದ ಹರ್ಯಾಣಕ್ಕೆ ಮರುಪ್ರವೇಶಿಸಿದೆ. ಯಾತ್ರೆಯು ಕರ್ನಾಲ್, ಕುರುಕ್ಷೇತ್ರ ಮತ್ತು ಅಂಬಾಲಾ ಮೂಲಕ ಸಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ