AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ ಕಾಮಗಾರಿಯೇ ಬೆಂಗಳೂರಿನ ಈ ಪರಿಸ್ಥಿತಿಗೆ ಕಾರಣ: ಮಾಜಿ ಸಿಎಂ ಕುಮಾರಸ್ವಾಮಿ ಆರೋಪ

ಬೆಂಗಳೂರಿನಲ್ಲಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾದ ಹಿನ್ನೆಲೆ ಮಾಜಿ ಸಿಎಂ ಕುಮಾರಸ್ವಾಮಿ ಸಿಟಿ ರೌಂಡ್ಸ್ ಹೊಡೆದಿದ್ದಾರೆ. ನಂತರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕಳಪೆ ಕಾಮಗಾರಿಯೇ ಬೆಂಗಳೂರಿನ ಈ ಪರಿಸ್ಥಿತಿಗೆ ಕಾರಣ: ಮಾಜಿ ಸಿಎಂ ಕುಮಾರಸ್ವಾಮಿ ಆರೋಪ
ಮಳೆ ಹಾನಿ ಪ್ರದೇಶಗಳಿಗೆ ಎಚ್.ಡಿ.ಕುಮಾರಸ್ವಾಮಿ ಭೇಟಿ
TV9 Web
| Updated By: Rakesh Nayak Manchi|

Updated on:May 22, 2022 | 2:35 PM

Share

ಬೆಂಗಳೂರು: ಫ್ಲ್ಯಾಟ್​ಗಳಿಗೆ ಮಳೆ ನೀರು ನುಗ್ಗಿ ಜನ ಲಾಡ್ಜ್​​ಗಳಲ್ಲಿ ಇರುವಂತಾಗಿದ್ದು, ಇದಕ್ಕೆ ಕಾರಣ ಕಳಪೆ ಕಾಮಗಾರಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (H.D.Kumaraswami) ಆರೋಪಿಸಿದ್ದಾರೆ. ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಪಂತರಪಾಳ್ಯದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲೂ ನಿರಂತರ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಸಿಎಂ ಆಗಿದ್ದ ಜಿಲ್ಲೆಯಲ್ಲೇ ಈ ರೀತಿಯ ಸಮಸ್ಯೆ ಇದೆ. ಸರ್ಕಾರ ನಮ್ಮ‌ ಕಷ್ಟಕ್ಕೆ ಸ್ಪಂದಿಸಿಲ್ಲವೆನ್ನುವ ಅಸಮಾಧಾನ ಜನರಿಗಿದೆ ಎಂದರು.

ಬೆಂಗಳೂರಿನಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದೆ. ಈ ಹಿನ್ನೆಲೆ ಕುಮಾರಸ್ವಾಮಿ ಅವರು ಸಿಟಿ ರೌಂಡ್ಸ್ ಹೊಡೆದಿದ್ದಾರೆ. ಸಚಿವ ಮುನಿರತ್ನ ಕ್ಷೇತ್ರವಾಗಿರುವ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಕುಮಾರಸ್ವಾಮಿ ಪ್ರದಕ್ಷಿಣೆ ಹಾಕಿದ್ದಾರೆ. ಸಚಿವ ವಿ.ಸೋಮಣ್ಣ ಕ್ಷೇತ್ರದ ಗಂಗಾಗೊಂಡನಹಳ್ಳಿಯಲ್ಲೂ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಹೆಚ್​ಡಿಕೆ ಈಗಲಾದ್ರೂ ಬೆಂಗಳೂರು ಸುತ್ತಾಡಲಿ. ಹೀಗಲಾದರೂ ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯ ಸುಧಾರಿಸಲಿ : ವಿ.ಸೋಮಣ್ಣ ವ್ಯಂಗ್ಯ

ಬೆಂಗಳೂರಿನಲ್ಲಿ ಸಚಿವರಿಗೆ ವಲಯವಾರು ಉಸ್ತುವಾರಿ ನೀಡಿದ್ದಾರೆ. ಆದರೆ, ಉಸ್ತುವಾರಿ ಸಚಿವರು ಮುಖ್ಯಮಂತ್ರಿಯವರ ಜೊತೆ ವಿದೇಶ ಪ್ರವಾಸದಲ್ಲಿದ್ದಾರೆ. ಸಿಎಂ ಇದ್ದಾಗಲೇ ಇಂಥ ಪರಿಸ್ಥಿತಿ ಇದೆ. ಸಿಎಂ ಇಲ್ಲದಿದ್ದರೆ ಸಚಿವರು ಏನ್ ಕೆಲಸ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ರಾಜರಾಜೇಶ್ವರಿನಗರದಲ್ಲಿ ಮುನಿರತ್ನ ಅವರು 3 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಡಾ.ಅಶ್ವತ್ಥ್​​ ನಾರಾಯಣ ಕ್ಷೇತ್ರಕ್ಕೆ ಎಷ್ಟು ಅನುದಾನ‌ ಹೋಗಿದೆ? ಎಲ್ಲಾ ಕಡೆ ಕಳಪೆ‌ ಕಾಮಗಾರಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ ಅವರು ದಾವೋಸ್​ಗೆ ಹೋಗಿದ್ದಾರೆ. ಯಾವ ಮುಖ ಇಟ್ಟುಕೊಂಡು ಬಂಡವಾಳ ಹೂಡಿ ಅಂತ ಕೇಳುತ್ತಾರೆ? ಬೊಮ್ಮಾಯಿಯವರು ಕಣ್ಣೊರೆಸುವ ತಂತ್ರವನ್ನು ಮಾಡುತ್ತಿದ್ದಾರೆ. ಕಳಪೆ ಕಾಮಗಾರಿ ನಡೆಸಿರುವ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಅನುದಾನ ಬಿಡುಗಡೆ ಎಂಬ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.

ಹಲವು ಬಾರಿ ದೆಹಲಿಗೆ ದಂಡೆತ್ತಿ ಹೋದ ಸಿಎಂ

ಆದಷ್ಟು ಬೇಗ ನಗರದ ಸಮಸ್ಯೆಗಳನ್ನು ಬಗೆಹರಿಸಬೇಕು. ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಯಾವುದೇ ಕೆಲಸಗಳು ಆಗದೇ ಇದ್ದಲ್ಲಿ ಸಂಪೂರ್ಣ ಮಾಹಿತಿಯೊಂದಿಗೆ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ ಎಂದು ಎಚ್ಚರಿಕೆ ನೀಡಿದರು. ಅಲ್ಲದೆ, ಮುಖ್ಯಮಂತ್ರಿ ಈಗಾಗಲೇ ಏಳು‌ಬಾರಿ ದೆಹಲಿಗೆ ದಂಡೆತ್ತಿ ಹೋಗಿದ್ದಾರೆ. ಆದರೂ ಯಾವುದೇ ಕೆಲಸ ಆಗಿಲ್ಲ ಎಂದರು.

‘ರಿಪಬ್ಲಿಕ್ ಆಫ್ ಯಲಹಂಕ’ದ ಮಹಾದರ್ಶನ

ನಿನ್ನೆ ಬ್ಯಾಟರಾಯನಪುರ, ಹೆಬ್ಬಾಳ, ಯಲಹಂಕ ವಿಧಾನಸಭೆ ಕ್ಷೇತ್ರಗಳನ್ನು ವೀಕ್ಷಣೆ ಮಾಡಿದ್ದೆ. ಈ ವೇಳೆ ‘ರಿಪಬ್ಲಿಕ್ ಆಫ್ ಯಲಹಂಕ’ದ ಮಹಾದರ್ಶನವೇ ಆಯಿತು ಎಂದು ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.

ಕೆಂಪೇಗೌಡರು ಸರ್ವ ಜನಾಂಗದವರನ್ನು ಸಮಭಾವದಿಂದ ಕಂಡಿದ್ದರು. ನಾಡಪ್ರಭು ಕೆಂಪೇಗೌಡರು ಸರ್ವ ಜನಾಂಗದ ತೋಟ ನಿರ್ಮಿಸಿದ್ದರು. ಪ್ರಭುಗಳು ಕಟ್ಟಿದ ಬೆಂಗಳೂರಿನ ಯಲಹಂಕದಲ್ಲಿ ಅಭಿವೃದ್ಧಿ ವಿಚಾರದಲ್ಲಿ ನಿರ್ದಿಷ್ಟವಾಗಿ ಒಂದು ಸಮುದಾಯವನ್ನೇ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿ, ಅವರು ವಾಸಿಸುವ ಬಡಾವಣೆಯನ್ನು ಕಡೆಗಣಿಸಿ ಅವರನ್ನು ಟಾರ್ಗೆಟ್‌ ಮಾಡಲಾಗಿದೆ ಎಂದರು.

ಯಲಹಂಕದ ಕೋಗಿಲು ಕ್ರಾಸ್‌ ಬಳಿಯ ಕೇಂದ್ರೀಯ ಅಪಾರ್ಟ್ʼಮೆಂಟ್ʼಗೆ ಭೇಟಿ ನೀಡಿ ಮಳೆಹಾನಿ ವೀಕ್ಷಣೆ ಮಾಡುವ ವೇಳೆ ನೈಜ ಸಂತ್ರಸ್ತರೇ ಅಹವಾಲು ಹೇಳಿಕೊಳ್ಳಲು ಮುಂದೆ ಬಾರದೇ ಇರುವುದು ನನ್ನನ್ನು ಚಕಿತಗೊಳಿಸಿತು ಎಂದು ಸರಣಿ ಟ್ವೀಟ್​ಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: ಮದುವೆ ದಿಬ್ಬಣದ ಕ್ರೂಸರ್​ ಅಪಘಾತದಲ್ಲಿ 9 ಜನ ಸಾವು ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ ಬೊಮ್ಮಾಯಿ

ಇದನ್ನೂ ಓದಿ: ನಳಿನ್ ಕುಮಾರ ಕಟೀಲ್​ರನ್ನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರೆಂದರು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್

ಮತ್ತಷ್ಟು ಸುದ್ದಿಗಳಿಗಾಗಿ ಲಿಂಕ್ ಕ್ಲಿಕ್ ಮಾಡಿ

Published On - 2:35 pm, Sun, 22 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ