AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರದ್ದೋ ಒತ್ತಡಕ್ಕೆ ಮಣಿದು ಪೂರ್ಣಿಮಾ ಶ್ರೀನಿವಾಸ್​​​​ ಕಾಂಗ್ರೆಸ್​ ಸೇರಿದ್ದಾರೆ: ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ

ನಮ್ಮ ಪಕ್ಷದ ಮೇಲೆ ಪೂರ್ಣಿಮಾ ಯಾವುದೇ ಅಸಮಾಧಾನ ಹೇಳಿಲ್ಲ. ಹೋಗುವವರಿಗೆ, ಬರುವವರಿಗೆ ಸ್ವಾತಂತ್ರ್ಯವಿದೆ. ಪೂರ್ಣಿಮಾ ಶ್ರೀನಿವಾಸ್ ಮೇಲೆ ಏನೋ ಒತ್ತಡವಿದೆ. ಆ ಒತ್ತಡದಿಂದಾಗಿ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಶ್ರೀನಿವಾಸ್ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಒತ್ತಡ ಹಾಕಿರಬಹುದು ಎಂದು ಬಿಜೆಪಿ ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಯಾರದ್ದೋ ಒತ್ತಡಕ್ಕೆ ಮಣಿದು ಪೂರ್ಣಿಮಾ ಶ್ರೀನಿವಾಸ್​​​​ ಕಾಂಗ್ರೆಸ್​ ಸೇರಿದ್ದಾರೆ: ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ
ಬಿಜೆಪಿ ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 21, 2023 | 3:00 PM

Share

ಬೆಂಗಳೂರು, ಅಕ್ಟೋಬರ್​​​​​​ 21: ನಮ್ಮ ಪಕ್ಷದ ಮೇಲೆ ಪೂರ್ಣಿಮಾ ಯಾವುದೇ ಅಸಮಾಧಾನ ಹೇಳಿಲ್ಲ. ಹೋಗುವವರಿಗೆ, ಬರುವವರಿಗೆ ಸ್ವಾತಂತ್ರ್ಯವಿದೆ. ಪೂರ್ಣಿಮಾ ಶ್ರೀನಿವಾಸ್ ಮೇಲೆ ಏನೋ ಒತ್ತಡವಿದೆ. ಆ ಒತ್ತಡದಿಂದಾಗಿ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ಬಿಜೆಪಿ ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೂರ್ಣಿಮಾಗೆ ಪತಿ ಶ್ರೀನಿವಾಸ್​ರಿಂದ ಒತ್ತಡ ಹೆಚ್ಚಿತ್ತು ಅನ್ನಿಸುತ್ತೆ. ಪತಿಯ ರಾಜಕೀಯ ಬೆಳವಣಿಗೆಗೆ ಈ ರೀತಿ ನಿರ್ಧಾರ ತೆಗೆದುಕೊಂಡಿರಬಹುದು. ಶ್ರೀನಿವಾಸ್ ಮೇಲೆ ಡಿಸಿಎಂ ಡಿ.ಕೆ.‌ಶಿವಕುಮಾರ್ ಒತ್ತಡ ಹಾಕಿರಬಹುದು ಎಂದು ಹೇಳಿದ್ದಾರೆ.

ಪೂರ್ಣಿಮಾಗೆ ತಂದೆ ಬಗ್ಗೆ ಗೊತ್ತಿದ್ದರೆ ಪಾಪ ಅವರು ಹೋಗುತ್ತಿರಲಿಲ್ಲ. ನನ್ನ ಎಕ್ಕಡ ಕೂಡ ಕಾಂಗ್ರೆಸ್​ಗೆ ಹೋಗುವುದಿಲ್ಲ ಎಂದು ಹೇಳಿದ್ದರು. ಇದೆಲ್ಲಾ ಮಾಜಿ ಶಾಸಕಿ ಪೂರ್ಣಿಮಾಗೆ ಗೊತ್ತಾಗಲಿಲ್ವಾ ಎಂದು ಪ್ರಶ್ನಿಸಿದ್ದಾರೆ.

ಡಿಸಿಎಂ‌ ಅನ್ನುವುದಕ್ಕಿಂತ ಆಪರೇಷನ್ ಮಂತ್ರಿ ಅನ್ನುವುದು ಸೂಕ್ತ

ಕಾಂಗ್ರೆಸ್​ನಲ್ಲಿನ ಬೇಗುದಿ ಯಾವಾಗ ಬ್ಲಾಸ್ಟ್ ಆಗುತ್ತದೋ ಗೊತ್ತಿಲ್ಲ. ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಒಳಗೊಳಗೆ ಕೊತ ಕೊತ ಕುದಿಯುತ್ತಿದೆ. ಯಾವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಹೋಗುತ್ತೋ ಗೊತ್ತಿಲ್ಲ. ಅದಕ್ಕೆ ಈ‌ ರೀತಿಯ ಅಪರೇಷನ್ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್​ಗೆ ಕೊಟ್ಟಿರುವ ಹುದ್ದೆ ನಿಭಾಯಿಸಲು ಆಗುತ್ತಿಲ್ಲ. ಆಪರೇಷನ್​ಗಾಗಿ ಜೆಡಿಎಸ್, ಬಿಜೆಪಿಯವರ ಮನೆಗೆ ಅವರೇ ಹೋಗುತ್ತಾರೆ ಡಿಸಿಎಂ‌ ಅನ್ನೋದಕ್ಕಿಂತ ಆಪರೇಷನ್ ಮಂತ್ರಿ ಅನ್ನೋದು ಸೂಕ್ತ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಹಿರಿಯೂರು ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

ಬಿಜೆಪಿಯ ಹಿರಿಯ ಮುಖಂಡರಾದ ಮಾಜಿ ಶಾಸಕ, ಹಿಂದುಳಿದ ವರ್ಗಗಳ ಕಾಂಗ್ರೆಸ್ ಮುಖಂಡ ಎ. ಕೃಷ್ಣಪ್ಪ ಅವರ ಪುತ್ರಿ ಪೂರ್ಣಿಮಾ ಕೃಷ್ಣಪ್ಪ ಮತ್ತು ಅಳಿಯ ಶ್ರೀನಿವಾಸ್, ಕೆ. ನರಸಿಂಹ ನಾಯಕ್ 750 ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಅಧಿಕೃತವಾಗಿ ನಿನ್ನೆ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಸಮ್ಮುಖದಲ್ಲಿ ಸೇರ್ಪಡೆ ಆಗಿದ್ದಾರೆ.

ಎ.ಕೃಷ್ಣಪ್ಪ ಪುತ್ರಿ ಪೂರ್ಣಿಮಾಗೆ ಟಿಕೆಟ್​ ತಪ್ಪಲು ನಾನೂ ಸ್ವಲ್ಪ ಕಾರಣ: ಸಿಎಂ ಸಿದ್ದರಾಮಯ್ಯ

ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಎ.ಕೃಷ್ಣಪ್ಪ ಪುತ್ರಿ ಪೂರ್ಣಿಮಾಗೆ ಟಿಕೆಟ್​ ತಪ್ಪಲು ನಾನೂ ಸ್ವಲ್ಪ ಕಾರಣ. ಟಿಕೆಟ್ ತಪ್ಪಿಸಿದ್ದು ನಾನೇ ಅಂತಾ ಗೊತ್ತಿದ್ರೂ ಸಿಟ್ಟು ಮಾಡಿಕೊಂಡಿಲ್ಲ. ಭೈರತಿ ಬಸವರಾಜಗೆ ಟಿಕೆಟ್​ ಕೊಡಿಸಲು ಹೋಗಿ ಇವರಿಗೆ ತಪ್ಪಿತು. ಬಿಜೆಪಿ ಶಾಸಕರಾದರೂ ಕಾಂಗ್ರೆಸ್ ರಕ್ತ ಪೂರ್ಣಿಮಾರಲ್ಲಿ ಹರಿಯುತ್ತಿತ್ತು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ