AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಯೋಜನೆಯಡಿ ಗೃಹಜ್ಯೋತಿ ಯೋಜನೆಗೆ ವಿದ್ಯುತ್​ ಪೂರೈಕೆ: ಪ್ರಲ್ಹಾದ್ ಜೋಶಿ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಇದೀಗ, ಕೇಂದ್ರದ ಒನ್​ ಗ್ರಿಡ್​​ ಒನ್​ ನೇಷನ್​ ಯೋಜನೆಯಡಿಯೇ ಗೃಹಜ್ಯೋತಿ ಯೋಜನೆಗೆ ವಿದ್ಯುತ್​ ಪೊರೈಕೆಯಾಗುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರದ ಯೋಜನೆಯಡಿ ಗೃಹಜ್ಯೋತಿ ಯೋಜನೆಗೆ ವಿದ್ಯುತ್​ ಪೂರೈಕೆ: ಪ್ರಲ್ಹಾದ್ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಶಿವಕುಮಾರ್ ಪತ್ತಾರ್
| Edited By: Rakesh Nayak Manchi|

Updated on: Aug 05, 2023 | 8:15 PM

Share

ಹುಬ್ಬಳ್ಳಿ, ಆಗಸ್ಟ್ 5: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗೃಹಜ್ಯೋತಿ ಯೋಜನೆಗೆ (Gruha Jyothi Scheme) ಕೇಂದ್ರ ಬಿಜೆಪಿ ಸರ್ಕಾರದ ಒನ್​ ಗ್ರಿಡ್​​ ಒನ್​ ನೇಷನ್​ ಯೋಜನೆಯಡಿ ವಿದ್ಯುತ್​ ಪೊರೈಕೆಯಾಗುತ್ತಿದೆ ಎಂದು ಕೇಂದ್ರ ಗಣಿ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಯೋಜನೆಯಡಿ ವಿದ್ಯುತ್ ಪಡೆದು ನಾವೇ ವಿದ್ಯುತ್ ಕೊಡುತ್ತಿದ್ದೇವೆಂದು ಕಾಂಗ್ರೆಸ್ (Congress) ನಾಯಕರು ದುರಂಹಕಾರದಿಂದ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿರುವುದು​ ಜನ ವಿರೋಧಿ, ಸುಳ್ಳು ಹೇಳುವ ಸರ್ಕಾರ. ಗೃಹಜ್ಯೋತಿ ಯೋಜನೆ ಜಾರಿಗೂ ಮೊದಲೇ ವಿದ್ಯುತ್​ ದರ ಹೆಚ್ಚಿಸಿದೆ ಎಂದು ಆರೋಪಿಸಿದ ಪ್ರಲ್ಹಾದ್ ಜೋಶಿ, ಕಾಂಗ್ರೆಸ್​ ಸರ್ಕಾರದಿಂದ ಅಭಿವೃದ್ಧಿ ಮರೀಚಿಕೆಯಾಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್​ಗೆ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ ಕಾರ್ಯಕ್ರಮಕ್ಕೆ ಅಜಯ್ ಸಿಂಗ್ ಗೈರು, ರೆಬಲ್ ಪಟ್ಟಿಗೆ ಮತ್ತೊಬ್ಬ ಕೈ ಶಾಸಕ?

ಇದಕ್ಕೂ ಮುನ್ನ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದರು. ರಾಜ್ಯ ಸರ್ಕಾರದ ಪ್ರತಿಯೊಂದು ಹುದ್ದೆಯನ್ನೂ ಹರಾಜು ಹಾಕಲಾಗುತ್ತಿದ್ದು, ಯಾರು ಹೆಚ್ಚು ಹಣ ಕೊಡುತ್ತಾರೋ ಅವರಿಗೆ ಪೋಸ್ಟಿಂಗ್ ನೀಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರವಾಗಿರುವ ಕಾರಣದಿಂದಲೇ ಸ್ವಪಕ್ಷದ ಶಾಸಕರು ಬಂಡಾಯ ಏಳುತ್ತಿದ್ದಾರೆ ಎಂದಿದ್ದರು.

ಬಸ್​ನಲ್ಲಿ ಉಚಿತ ಪ್ರಯಾಣ ನೀಡುತ್ತಿದ್ದೇವೆ ಎನ್ನುತ್ತಿದ್ದಾರೆ. ಬಸ್​ ಓಡಾಡಲು ಉತ್ತಮ ರಸ್ತೆ ಬೇಕು. ಆದರೆ ಮಳೆಯಿಂದಾಗಿ ರಸ್ತೆಗಳು ಹಾನಿಗೊಳಗಾಗಿದ್ದರೂ ದುರಸ್ತಿಗೆ ಅನುದಾನ ಕೊಡುತ್ತಿಲ್ಲ. ರಸ್ತೆ ಅಭಿವೃದ್ಧಿ ಮಾತ್ರವಲ್ಲದೆ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ಶಾಸಕರಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಜೋಶಿ ಆರೋಪಿಸಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More