Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಸುಪ್ರೀಂಕೋರ್ಟ್​​​ನ ಮೊರೆ ಹೋಗಬೇಕು; ಹೆಚ್​ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ​ ಕಾನೂನು ಹೋರಾಟ ಮುಂದುವರಿಸಲಿದ್ದಾರೆ. ಇದೇನು ತಲೆಕೆಡಿಸಿಕೊಳ್ಳಬೇಕಾದ ವಿಷಯವಲ್ಲ. ಹೈಕೋರ್ಟ್​​ ತೀರ್ಪನ್ನು ನಾವೆಲ್ಲರೂ ಗೌರವಿಸಬೇಕು. ‘ಸುಪ್ರೀಂ’ನಲ್ಲಿ ‌ಪ್ರಜ್ವಲ್‌ ರೇವಣ್ಣ ಪರ ತೀರ್ಪು ಬರುವ ವಿಶ್ವಾಸವಿದೆ. ಪ್ರಜ್ವಲ್​ ರೇವಣ್ಣ ಸಂಸದರಾಗಿಯೇ ಉಳಿದುಕೊಳ್ಳುತ್ತಾರೆ ಎಂದು ಎಂ​ಎಲ್​ಸಿ ಪ್ರಜ್ವಲ್​ ರೇವಣ್ಣ ಹೇಳಿದರು.

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಸುಪ್ರೀಂಕೋರ್ಟ್​​​ನ ಮೊರೆ ಹೋಗಬೇಕು; ಹೆಚ್​ಡಿ ದೇವೇಗೌಡ
ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ
Follow us
ಮಂಜುನಾಥ ಕೆಬಿ
| Updated By: ವಿವೇಕ ಬಿರಾದಾರ

Updated on: Sep 02, 2023 | 1:59 PM

ಹಾಸನ: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ (Prajwal Revanna) ಅನರ್ಹವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​​ ​ತೀರ್ಪಿನ ಪ್ರತಿ ನೋಡದೆ ಮಾತನಾಡಲು ಆಗುವುದಿಲ್ಲ. ಮಾಜಿ ಪ್ರಧಾನಿಯಾಗಿ ಆದೇಶ ನೋಡದೆ ಮಾತನಾಡೋದು ಸರಿಯಲ್ಲ. ಸ್ವಾಭಾವಿಕವಾಗಿ ಸುಪ್ರೀಂಕೋರ್ಟ್​​​ನ ಮೊರೆ ಹೋಗಬೇಕಾಗುತ್ತದೆ. ಈ ಬಗ್ಗೆ ಚರ್ಚೆ ಮಾಡುವುದಕ್ಕೆ ಪ್ರಜ್ವಲ್ ರೇವಣ್ಣ​​ ಬೆಂಗಳೂರಿಗೆ ಹೋಗಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ (HD Devegowda) ಹೇಳಿದರು.

ಪ್ರಜ್ವಲ್ ರೇವಣ್ಣ​ ಕಾನೂನು ಹೋರಾಟ ಮುಂದುವರಿಸಲಿದ್ದಾರೆ: ಸೂರಜ್​ ರೇವಣ್ಣ

ಪ್ರಜ್ವಲ್ ರೇವಣ್ಣ​ ಕಾನೂನು ಹೋರಾಟ ಮುಂದುವರಿಸಲಿದ್ದಾರೆ. ಇದೇನು ತಲೆಕೆಡಿಸಿಕೊಳ್ಳಬೇಕಾದ ವಿಷಯವಲ್ಲ. ಹೈಕೋರ್ಟ್​​ ತೀರ್ಪನ್ನು ನಾವೆಲ್ಲರೂ ಗೌರವಿಸಬೇಕು. ‘ಸುಪ್ರೀಂ’ನಲ್ಲಿ ‌ಪ್ರಜ್ವಲ್‌ ರೇವಣ್ಣ ಪರ ತೀರ್ಪು ಬರುವ ವಿಶ್ವಾಸವಿದೆ. ಪ್ರಜ್ವಲ್​ ರೇವಣ್ಣ ಸಂಸದರಾಗಿಯೇ ಉಳಿದುಕೊಳ್ಳುತ್ತಾರೆ. ಸುಪ್ರೀಂಕೋರ್ಟ್‌ನಲ್ಲಿ ಸ್ಟೇ ತೆಗೆದುಕೊಳ್ಳಬೇಕು. ಮುಂದಿನ ಕಾನೂನು ಹೋರಾಟ ಏನಿದೆ ಎಂದು ತಿಳಿದು ಪ್ರಕ್ರಿಯೆ ಮಾಡುತ್ತೇವೆ ಎಂದು ಎಂ​ಎಲ್​ಸಿ ಪ್ರಜ್ವಲ್​ ರೇವಣ್ಣ ಹೇಳಿದರು.

ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇದೇನು ತಲೆಕೆಡಿಸಿಕೊಳ್ಳಬೇಕಾದ ವಿಷಯವಲ್ಲ. ಅವರೇನಾದರು ಅಕ್ರಮ, ಭ್ರಷ್ಟಾಚಾರ ಮಾಡಿದ್ದಾರಾ ? ಏನು ಇಲ್ಲಾ. ಏನೋ ಅಫಿಡೆವಿಟ್‌ನಲ್ಲಿ ಒಂದು ಸಣ್ಣ ಪ್ರಾಬ್ಲಂ ಇರೋದನ್ನು ಸಲ್ಲಿಸಿದ್ದಾರೆ. ಅಂತಹ ಸಾವಿರಾರು ಅರ್ಜಿಗಳು ಬರುತ್ತವೆ ಎಂದರು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅನರ್ಹ; ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದ ಜೆಡಿಎಸ್ ಶಾಸಕ ಎ ಮಂಜು

ತೀರ್ಪು ಬಂದ ನಂತರ ಎ.ಮಂಜು ಜೊತೆ ಚರ್ಚೆ ಮಾಡಿದ್ದಾರಾ ಎಂಬ ವಿಚಾರವಾಗಿ ಮಾತನಾಡಿದ ಅವರು ತೀರ್ಪಿನ ಪೂರ್ತಿ ಕಾಫಿ ಮಧ್ಯಾಹ್ನ ಅಪ್‌ಲೋಡ್ ಆಗುತ್ತೆ. ಈ ವಿಷಯವಾಗಿ ಯಾರ ಜೊತೆಗೂ ಮಾತನಾಡಿಲ್ಲ. ಅವರಿಗೂ ಇದಕ್ಕೂ ಸಂಬಂಧವಿಲ್ಲ ಎಂದು ಭಾವಿಸುತ್ತೇನೆ ಎಂದು ಹೇಳಿದರು.

ತೀರ್ಪಿನ ಪೂರ್ತಿ ಕಾಫಿ ನೋಡಿ ಮಾತನಾಡುತ್ತೇನೆ: ಹೆಚ್​​​ಡಿ ರೇವಣ್ಣ

ಪ್ರಜ್ವಲ್‌ ರೇವಣ್ಣ ಅವರದ್ದು ಕೇಸ್​ ಏನಿದೆ, ಕಾನೂನು ಏನು ಹೇಳುತ್ತೆ ಅಂತ ನೋಡುತ್ತೇವೆ. ತೀರ್ಪಿನ ಪೂರ್ತಿ ಕಾಫಿ ನೋಡಿ ಹೇಳುತ್ತೇವೆ. ಆರ್ಡರ್ ಕಾಫಿ ಬರಲಿ, ಅದೇನಿದೆ ಗೊತ್ತಿಲ್ಲ ನನಗೆ. ನನಗೆ ಯಾವ ಸೂಚನೆಯೂ ಬಂದಿಲ್ಲ. ಕಾನೂನಿಗೆ ನಾವೆಲ್ಲ ತಲೆ ಬಾಗಬೇಕು, ಆ ರೀತಿ ನಾವು ಇದ್ದೇವೆ. ಮುಂದೆ ಏನು ಮಾಡಬೇಕು ವಕೀಲರನ್ನು ಕೇಳಿ ಮಾಡುತ್ತೇವೆ ಎಂದು ಮಾವಿನಕೆರೆ ಗ್ರಾಮದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್