AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಬುದ್ಧ ರಾಹುಲ್ ಗಾಂಧಿ ಕೂಡಲೇ ಪ್ರಧಾನಿ ಮೋದಿ ಕ್ಷಮೆಯಾಚಿಸಲಿ: ಪ್ರಲ್ಹಾದ ಜೋಶಿ ಒತ್ತಾಯ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅಪ್ರಬುದ್ಧ ರಾಜಕಾರಣಿ ಎಂದು ಜರೆದಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ತಕ್ಷಣವೇ ರಾಹುಲ್ ಹಾಗೂ ಕಾಂಗ್ರೆಸ್ ನಾಯಕರು ಮೋದಿ ಅವರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯದವರ ಜತೆ ಜೋಶಿ ಮಾತನಾಡಿದ ವೇಳೆ ಈ ಆಗ್ರಹ ವ್ಯಕ್ತಪಡಿಸಿದ್ದಾರೆ.

ಅಪ್ರಬುದ್ಧ ರಾಹುಲ್ ಗಾಂಧಿ ಕೂಡಲೇ ಪ್ರಧಾನಿ ಮೋದಿ ಕ್ಷಮೆಯಾಚಿಸಲಿ: ಪ್ರಲ್ಹಾದ ಜೋಶಿ ಒತ್ತಾಯ
ಪ್ರಲ್ಹಾದ ಜೋಶಿ
TV9 Web
| Edited By: |

Updated on: Nov 24, 2023 | 10:14 PM

Share

ಹುಬ್ಬಳ್ಳಿ, ನವೆಂಬರ್ 24: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ಟೀಕಿಸಿದ ರಾಹುಲ್ ಗಾಂಧಿ (Rahul Gandhi) ಅಪ್ರಬುದ್ಧ ರಾಜಕಾರಣಿ ಎಂದು ಕೇಂದ್ರ ಸಚಿವ ಪ್ರಲ್ಹಾದ (Pralhad Joshi) ಜೋಶಿಯವರು ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು, ರಾಹುಲ್ ಗಾಂಧಿಯ ಇಂತಹ ಹೇಳಿಕೆಗಳ ಕಾರಣದಿಂದಲೇ ಕಾಂಗ್ರೆಸ್ ಪಕ್ಷವು ಕಳೆದ ಎರಡೂ ಲೋಕಸಭಾ ಚುನಾವಣೆಗಳಲ್ಲೂ ಅಧಿಕೃತ ವಿರೋಧ ಪಕ್ಷದ ಮಾನ್ಯತೆಯನ್ನೂ ಪಡೆಯಲಾಗದಷ್ಟು ಹೀನಾಯವಾಗಿ ಸೋತಿದೆ ಎಂದರು.

ನರೇಂದ್ರ ಮೋದಿಯವರನ್ನು ಭಾರತ ದೇಶವಷ್ಟೇ ಅಲ್ಲ, ಇಡೀ ವಿಶ್ವವೇ ಮೆಚ್ಚಿಕೊಂಡಿದೆ. ಹೀಗಿರುವಾಗ ರಾಹುಲ್ ಗಾಂಧಿಯ ಇಂತಹ ಲಘು ಮಾತುಗಳು ಪ್ರತಿಕ್ರಿಯೆ ನೀಡುವುದಕ್ಕೂ ಅರ್ಹವಲ್ಲ. ರಾಹುಲ್ ಗಾಂಧಿ ಇಂತಹ ಅಪ್ರಬುದ್ಧ ಹೇಳಿಕೆಗಳಿಗೇ ಹೆಸರುವಾಸಿ. ಯಾರೋ ಬರೆದುಕೊಟ್ಟಿದ್ದನ್ನು ಓದುವ ರಾಹುಲ್ ಗಾಂಧಿ ಕನಿಷ್ಠ ಪಕ್ಷ ಆ ಬರೆದುಕೊಡಲಿಕ್ಕಾದರೂ ಪ್ರಬುದ್ಧರನ್ನ ನೇಮಿಸಿಕೊಳ್ಳಲಿ. ಇಲ್ಲದಿದ್ದರೆ ರಾಜಕೀಯದ ಘನತೆ ಗೌರವ ಕಾಪಾಡುವುದು ಕಾಂಗ್ರೆಸ್ ಕೈಯಲ್ಲಿ ಸಾಧ್ಯವಿಲ್ಲ. ಇದು ರಾಹುಲ್ ಅವರ ನಡತೆ ಮತ್ತು ಮಾತುಗಳಿಂದಲೇ ತಿಳಿಯುತ್ತಿದೆ. ತಮ್ಮ ನಾಯಕನಂತೆ, ಇತರ ಕಾಂಗ್ರೆಸ್ಸಿಗರೂ ತಮ್ಮ ಭಾಷೆ ಮತ್ತು ನಡವಳಿಕೆಯಲ್ಲಿ ತಮ್ಮ ಪಕ್ಷದ ಘನತೆ ಉಳಿದಿಲ್ಲ ಎಂದು ಸಾಬೀತು ಮಾಡುತ್ತಿದ್ದಾರೆ ಎಂದು ಜೋಶಿ ಟೀಕಿಸಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಬೆಂಗಳೂರು ಭೇಟಿ: ಶನಿವಾರ ಎಚ್​​ಎಎಲ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪಿಎಂ

ದೇಶದ ಪ್ರಧಾನಮಂತ್ರಿಗಳ ಬಗ್ಗೆ ಲಘುವಾಗಿ ಮಾತನಾಡಿದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಈ ಕೂಡಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರಲ್ಲಿ ಕ್ಷಮೆ ಯಾಚಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್