AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಹೆಸರಲ್ಲಿ ಮತ ಕೇಳಲು ಬಂದ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ; ಪ್ರಮೋದ್ ಮುತಾಲಿಕ್ ಕಿಡಿನುಡಿ

ಪ್ರಧಾನಿ ನರೇಂದ್ರ ಮೋದಿ ಹೆಸರು ಹೇಳಿ ವೋಟ್ ಹಾಕಿ ಅಂತಾ ಬರುವ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ್​ ಕಿಡಿಕಾರಿದ್ದಾರೆ.

ಮೋದಿ ಹೆಸರಲ್ಲಿ ಮತ ಕೇಳಲು ಬಂದ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ; ಪ್ರಮೋದ್ ಮುತಾಲಿಕ್ ಕಿಡಿನುಡಿ
ಪ್ರಮೋದ್ ಮುತಾಲಿಕ್‌Image Credit source: deccanherald.com
ಗಂಗಾಧರ​ ಬ. ಸಾಬೋಜಿ
|

Updated on:Mar 02, 2023 | 9:40 PM

Share

ಕಾರವಾರ: ಪ್ರಧಾನಿ ನರೇಂದ್ರ ಮೋದಿ ಹೆಸರು ಹೇಳಿ ವೋಟ್ ಹಾಕಿ ಅಂತಾ ಬರುವ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ್ (Pramod Muthalik) ಕಿಡಿಕಾರಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸೈದಾದ್ರಿ ರಂಗಮಂದಿರದಲ್ಲಿ ಆಯೋಜಿಸಿದ್ದ ಹಿಂದೂ ಸಮಾಜೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿ, ನಾಲಾಯಕ್ ನಾಯಕರು ಇದ್ದಾರೆ. ಮೋದಿ ಹೆಸರು ಹೇಳಿಕೊಂಡು ಬರುತ್ತಾರೆ. ಅಂತವರಿಗೆ ಚಪ್ಪಲಿ ಏಟ ಕೊಡಿ ಎಂದು ಆಕ್ರೋಶದ ಕರೆ ನೀಡಿದ್ದಾರೆ. ಆರೇಳು ಬಾರಿ‌ ಗೆದ್ದವರಿದ್ದಾರೆ. ಕರ್ನಾಟಕವನ್ನ ಲೂಟಿ ಮಾಡಿದವರು ಇದ್ದಾರೆ. ಮೊದಲು ಇದ್ದಾಗ ಆಸ್ತಿ ಎಷ್ಟಿತ್ತು, ಈಗ ಎಷ್ಟಿದೆ ಅಂತಾ ಲೆಕ್ಕಾ ಹಾಕುವುದಕ್ಕೂ ಆಗುವುದಿಲ್ಲ ಅಷ್ಟು ಗಳಿಸಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ನಿಮಗೆ ಶಾಪ ತಟ್ಟದೆ ಬಿಡುವುದಿಲ್ಲ

ಜನ ಸಂಘ ಹುಟ್ಟಿದ್ದು ಯಾಕೆ ಎನ್ನುವುದು ನೆನಪಿದಿಯಾ? ಜನ ಸೇವೆ ಮೆರೆತು ತಮ್ಮ ಸೇವೆ ಮಾಡಿಕೊಳ್ಳುತ್ತಿದ್ದಿರಾ? ಸಾವಿರ ವರ್ಷಗಳಿಂದ ಗೋಮಾತೆ ಉಳಿಸಿ ಅಂತಾ ಋಷಿ ಮುನಿಗಳು ಹೇಳುತ್ತಿದ್ದಾರೆ. ಗ್ರಾಮದಿಂದ ಕೇಂದ್ರದವರಗೆ ನಮ್ಮದೆ ಸರ್ಕಾರ ಇದೆ. ಗೋಮಾತೆ ರಕ್ತ ನಿಮ್ಮಿಂದ ಉಳಿಸಲು ಆಗುತ್ತಿಲ್ಲ. ಅಧಿಕಾರ ಇದೆ, ಆದರೆ ನಿಮ್ಮ ಹತ್ರ ಇಚ್ಚಾಶಕ್ತಿ ಇಲ್ಲ. ಆಕಳ ರೋಧನೆ ಅದರ ರಕ್ತ ನಿಮಗೆ ಕಾಣುತ್ತಿಲ್ಲ. ನಿಮಗೆ ಶಾಪ ತಟ್ಟದೆ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹೆಬ್ರಿಯಲ್ಲಿ ಭೂ ಅವ್ಯವಹಾರ, ಸುನಿಲ್ ಕುಮಾರ್ ಕೈವಾಡ ಶಂಕೆ; ಲೋಕಾಯುಕ್ತಕ್ಕೆ ಮುತಾಲಿಕ್ ದೂರು

ಮೋದಿ ಹೆಸರು ಹೇಳಿ ಗೆದ್ದವರು ನೀವು

ನಾಚಿಕೆ, ಮಾನ, ಮರ್ಯಾದೆ ಇಲ್ಲದೆ ಮೋದಿ ಹೆಸರು ಹೇಳಿ ಗೆದ್ದವರು ನೀವು. ತಾಕತ್ ಇದ್ರೆ ಮೋದಿ ಹೆಸರು ಬಿಟ್ಟು ನಿಮ್ಮ ಅಭಿವೃದ್ಧಿ ಹೇಳಿ ಗೆದ್ದು ಬನ್ನಿ. ಪರೇಶ ಮೇಸ್ತಾ ಅನಾಥವಾಗಿ ಸತ್ತ. ರಕ್ತ ಬಲಿದಾನವಾದ್ರು ಏನು ಆಗಲಿಲ್ಲ. ಅವನ ಹೆಣದ ಮೇಲೆ ರಾಜಕೀಯ ಮಾಡಿದವರು ನೀವು. ಅವನ ಆತ್ಮ ಕೇಳುತ್ತಿದೆ ನ್ಯಾಯ ಕೊಡಿಸಿ ಅಂತಾ. ಅವನ ಆತ್ಮಕ್ಕೆ ಶಾಂತಿಯಿಲ್ಲದೆ ಇನ್ನು ಅಲೆಯುತ್ತಿದೆ, ನ್ಯಾಯ ಬೇಕು ಎಂದು.

ಇದನ್ನೂ ಓದಿ: ಒಂದು ಹಿಂದು ಹುಡುಗಿ ಹೋದ್ರೆ, ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ನಿಮಗೆ ರಕ್ಷಣೆ ನಮ್ಮದು ಎಂದ ಮುತಾಲಿಕ್

ಸಿ.ಐ.ಡಿ, ಸಿ.ಬಿ.ಐ, ಎಲ್ಲಾ ಬಂತು ತನಿಖೆ ಮಾಡಿತು, ಏನು ಪ್ರಯೋಜನವಾಗಲಿಲ್ಲ. ಹಿಂದೂ ಆಕ್ರೋಶದ ಲಾಭ ಪಡೆದು ಅಧಿಕಾರಕ್ಕೆ ಬಂದ ನಾಲಾಯಕ, ನಿರ್ಲಜ್ಜರು ಇವರು. ಹಿಂದೂ‌ ಸಮಾಜ ಉಳಿಸಿಕೊಳ್ಳಲು ಛತ್ರಪತಿ ಶಿವಾಜಿಯಂತೆ ಹೋರಾಡಬೇಕಾದ ಅನಿವಾರ್ಯತೆ ಇದೆ ಎಂದು ಮುತಾಲಿಕ್​ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:40 pm, Thu, 2 March 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ