AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಹೆಸರಲ್ಲಿ ಮತ ಕೇಳಲು ಬಂದ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ; ಪ್ರಮೋದ್ ಮುತಾಲಿಕ್ ಕಿಡಿನುಡಿ

ಪ್ರಧಾನಿ ನರೇಂದ್ರ ಮೋದಿ ಹೆಸರು ಹೇಳಿ ವೋಟ್ ಹಾಕಿ ಅಂತಾ ಬರುವ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ್​ ಕಿಡಿಕಾರಿದ್ದಾರೆ.

ಮೋದಿ ಹೆಸರಲ್ಲಿ ಮತ ಕೇಳಲು ಬಂದ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ; ಪ್ರಮೋದ್ ಮುತಾಲಿಕ್ ಕಿಡಿನುಡಿ
ಪ್ರಮೋದ್ ಮುತಾಲಿಕ್‌Image Credit source: deccanherald.com
ಗಂಗಾಧರ​ ಬ. ಸಾಬೋಜಿ
|

Updated on:Mar 02, 2023 | 9:40 PM

Share

ಕಾರವಾರ: ಪ್ರಧಾನಿ ನರೇಂದ್ರ ಮೋದಿ ಹೆಸರು ಹೇಳಿ ವೋಟ್ ಹಾಕಿ ಅಂತಾ ಬರುವ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ್ (Pramod Muthalik) ಕಿಡಿಕಾರಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸೈದಾದ್ರಿ ರಂಗಮಂದಿರದಲ್ಲಿ ಆಯೋಜಿಸಿದ್ದ ಹಿಂದೂ ಸಮಾಜೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿ, ನಾಲಾಯಕ್ ನಾಯಕರು ಇದ್ದಾರೆ. ಮೋದಿ ಹೆಸರು ಹೇಳಿಕೊಂಡು ಬರುತ್ತಾರೆ. ಅಂತವರಿಗೆ ಚಪ್ಪಲಿ ಏಟ ಕೊಡಿ ಎಂದು ಆಕ್ರೋಶದ ಕರೆ ನೀಡಿದ್ದಾರೆ. ಆರೇಳು ಬಾರಿ‌ ಗೆದ್ದವರಿದ್ದಾರೆ. ಕರ್ನಾಟಕವನ್ನ ಲೂಟಿ ಮಾಡಿದವರು ಇದ್ದಾರೆ. ಮೊದಲು ಇದ್ದಾಗ ಆಸ್ತಿ ಎಷ್ಟಿತ್ತು, ಈಗ ಎಷ್ಟಿದೆ ಅಂತಾ ಲೆಕ್ಕಾ ಹಾಕುವುದಕ್ಕೂ ಆಗುವುದಿಲ್ಲ ಅಷ್ಟು ಗಳಿಸಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ನಿಮಗೆ ಶಾಪ ತಟ್ಟದೆ ಬಿಡುವುದಿಲ್ಲ

ಜನ ಸಂಘ ಹುಟ್ಟಿದ್ದು ಯಾಕೆ ಎನ್ನುವುದು ನೆನಪಿದಿಯಾ? ಜನ ಸೇವೆ ಮೆರೆತು ತಮ್ಮ ಸೇವೆ ಮಾಡಿಕೊಳ್ಳುತ್ತಿದ್ದಿರಾ? ಸಾವಿರ ವರ್ಷಗಳಿಂದ ಗೋಮಾತೆ ಉಳಿಸಿ ಅಂತಾ ಋಷಿ ಮುನಿಗಳು ಹೇಳುತ್ತಿದ್ದಾರೆ. ಗ್ರಾಮದಿಂದ ಕೇಂದ್ರದವರಗೆ ನಮ್ಮದೆ ಸರ್ಕಾರ ಇದೆ. ಗೋಮಾತೆ ರಕ್ತ ನಿಮ್ಮಿಂದ ಉಳಿಸಲು ಆಗುತ್ತಿಲ್ಲ. ಅಧಿಕಾರ ಇದೆ, ಆದರೆ ನಿಮ್ಮ ಹತ್ರ ಇಚ್ಚಾಶಕ್ತಿ ಇಲ್ಲ. ಆಕಳ ರೋಧನೆ ಅದರ ರಕ್ತ ನಿಮಗೆ ಕಾಣುತ್ತಿಲ್ಲ. ನಿಮಗೆ ಶಾಪ ತಟ್ಟದೆ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹೆಬ್ರಿಯಲ್ಲಿ ಭೂ ಅವ್ಯವಹಾರ, ಸುನಿಲ್ ಕುಮಾರ್ ಕೈವಾಡ ಶಂಕೆ; ಲೋಕಾಯುಕ್ತಕ್ಕೆ ಮುತಾಲಿಕ್ ದೂರು

ಮೋದಿ ಹೆಸರು ಹೇಳಿ ಗೆದ್ದವರು ನೀವು

ನಾಚಿಕೆ, ಮಾನ, ಮರ್ಯಾದೆ ಇಲ್ಲದೆ ಮೋದಿ ಹೆಸರು ಹೇಳಿ ಗೆದ್ದವರು ನೀವು. ತಾಕತ್ ಇದ್ರೆ ಮೋದಿ ಹೆಸರು ಬಿಟ್ಟು ನಿಮ್ಮ ಅಭಿವೃದ್ಧಿ ಹೇಳಿ ಗೆದ್ದು ಬನ್ನಿ. ಪರೇಶ ಮೇಸ್ತಾ ಅನಾಥವಾಗಿ ಸತ್ತ. ರಕ್ತ ಬಲಿದಾನವಾದ್ರು ಏನು ಆಗಲಿಲ್ಲ. ಅವನ ಹೆಣದ ಮೇಲೆ ರಾಜಕೀಯ ಮಾಡಿದವರು ನೀವು. ಅವನ ಆತ್ಮ ಕೇಳುತ್ತಿದೆ ನ್ಯಾಯ ಕೊಡಿಸಿ ಅಂತಾ. ಅವನ ಆತ್ಮಕ್ಕೆ ಶಾಂತಿಯಿಲ್ಲದೆ ಇನ್ನು ಅಲೆಯುತ್ತಿದೆ, ನ್ಯಾಯ ಬೇಕು ಎಂದು.

ಇದನ್ನೂ ಓದಿ: ಒಂದು ಹಿಂದು ಹುಡುಗಿ ಹೋದ್ರೆ, ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ನಿಮಗೆ ರಕ್ಷಣೆ ನಮ್ಮದು ಎಂದ ಮುತಾಲಿಕ್

ಸಿ.ಐ.ಡಿ, ಸಿ.ಬಿ.ಐ, ಎಲ್ಲಾ ಬಂತು ತನಿಖೆ ಮಾಡಿತು, ಏನು ಪ್ರಯೋಜನವಾಗಲಿಲ್ಲ. ಹಿಂದೂ ಆಕ್ರೋಶದ ಲಾಭ ಪಡೆದು ಅಧಿಕಾರಕ್ಕೆ ಬಂದ ನಾಲಾಯಕ, ನಿರ್ಲಜ್ಜರು ಇವರು. ಹಿಂದೂ‌ ಸಮಾಜ ಉಳಿಸಿಕೊಳ್ಳಲು ಛತ್ರಪತಿ ಶಿವಾಜಿಯಂತೆ ಹೋರಾಡಬೇಕಾದ ಅನಿವಾರ್ಯತೆ ಇದೆ ಎಂದು ಮುತಾಲಿಕ್​ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:40 pm, Thu, 2 March 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್