AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕೆ? ಹೀಗೆ ಮಾಡಿ: ಪ್ರತಿಪಕ್ಷಗಳಿಗೆ ಪ್ರಶಾಂತ್ ಕಿಶೋರ್ ನೀಡಿರುವ ಸಲಹೆ ಏನು?

2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಜತೆಗೆ ವಿರೋಧ ಪಕ್ಷಗಳೂ ಸಿದ್ಧತೆಯಲ್ಲಿ ತೊಡಗಿವೆ. ಪ್ರತಿ ಬಾರಿಯಂತೆ ಈ ಬಾರಿಯೂ ಪ್ರತಿಪಕ್ಷಗಳ ಒಗ್ಗಟ್ಟಿನ ಘಮವಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕೆ? ಹೀಗೆ ಮಾಡಿ: ಪ್ರತಿಪಕ್ಷಗಳಿಗೆ ಪ್ರಶಾಂತ್ ಕಿಶೋರ್ ನೀಡಿರುವ ಸಲಹೆ ಏನು?
ಪ್ರಶಾಂತ್ ಕಿಶೋರ್Image Credit source: Hindustan Times
ನಯನಾ ರಾಜೀವ್
|

Updated on: Mar 21, 2023 | 7:59 AM

Share

2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಜತೆಗೆ ವಿರೋಧ ಪಕ್ಷಗಳೂ ಸಿದ್ಧತೆಯಲ್ಲಿ ತೊಡಗಿವೆ. ಪ್ರತಿ ಬಾರಿಯಂತೆ ಈ ಬಾರಿಯೂ ಪ್ರತಿಪಕ್ಷಗಳ ಒಗ್ಗಟ್ಟಿನ ಘಮವಿದೆ. ಈ ಎಲ್ಲದರ ನಡುವೆ, ಚುನಾವಣಾ ತಂತ್ರಗಾರ ಮತ್ತು ಜನ್ ಸೂರಜ್ ಅಧ್ಯಕ್ಷ ಪ್ರಶಾಂತ್ ಕಿಶೋರ್ ಪ್ರತಿಪಕ್ಷಗಳಿಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಒಗ್ಗಟ್ಟು ಅಸ್ಥಿರ ಮತ್ತು ಸೈದ್ಧಾಂತಿಕವಾಗಿ ಭಿನ್ನವಾಗಿರುವ ಕಾರಣ 2024 ರ ಚುನಾವಣೆಯಲ್ಲಿ ಈ ತಂತ್ರ ಸಫಲವಾಗುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಪ್ರಶಾಂತ್ ಕಿಶೋರ್ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮೂರು ದೊಡ್ಡ ಶಕ್ತಿಗಳನ್ನು ಪ್ರಸ್ತಾಪಿಸಿದ್ದಾರೆ ಮತ್ತು ಅವುಗಳನ್ನು ಮುರಿಯದೆ ಪ್ರತಿಪಕ್ಷಗಳು ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪ್ರತಿಪಕ್ಷಗಳ ಒಗ್ಗಟ್ಟು ಕೇವಲ ಪ್ರದರ್ಶನವಾಗಿದೆ ಎಂದರು. ಕೇವಲ ನಾಯಕರು ಮತ್ತು ಪಕ್ಷಗಳನ್ನು ಒಟ್ಟುಗೂಡಿಸಿ ಬಿಜೆಪಿಗೆ ಸವಾಲು ಹಾಕಲು ಸಾಧ್ಯವಿಲ್ಲ. ಇದಕ್ಕಾಗಿ ಹಿಂದುತ್ವ, ರಾಷ್ಟ್ರೀಯತೆ ಮತ್ತು ಕಲ್ಯಾಣ (ಫಲಾನುಭವಿ) ಬಿಜೆಪಿಯ ಶಕ್ತಿಗಳನ್ನು ಅರ್ಥಮಾಡಿಕೊಳ್ಳಬೇಕು.

ಬಿಜೆಪಿ ವಿರುದ್ಧ ಗೆಲ್ಲಲು, ಈ ಪೈಕಿ ಎರಡಾದರೂ ಕೆಲಸ ಮಾಡಬೇಕು ಮತ್ತು ಅವುಗಳನ್ನು ಭೇದಿಸಬೇಕಾಗಿದೆ. ಬಿಜೆಪಿಯ ಸಿದ್ಧಾಂತದ ವಿರುದ್ಧ ಹೋರಾಡಲು ಸಿದ್ಧಾಂತಗಳ ಮೈತ್ರಿ ಇರಬೇಕು. ಇದಕ್ಕೆ ಗಾಂಧೀ, ಸಮಾಜವಾದಿ, ಅಂಬೇಡ್ಕರ್, ಎಡಪಂಥೀಯ ವಿಚಾರಧಾರೆ ಅವಶ್ಯವಾದರೂ ಅದನ್ನು ಕುರುಡಾಗಿ ನಂಬುವಂತಿಲ್ಲ. ಸೈದ್ಧಾಂತಿಕ ಸಮಾನತೆ ಇಲ್ಲದಿರುವವರೆಗೆ ಬಿಜೆಪಿಯನ್ನು ಸೋಲಿಸಲು ಸಾಧ್ಯವಿಲ್ಲ.

ಕಾಂಗ್ರೆಸ್ ಅನ್ನು ಪುನರುಜ್ಜೀವನಗೊಳಿಸುವುದು ನನ್ನ ಗುರಿಯಾಗಿತ್ತು, ಅವರ ಗುರಿ ಚುನಾವಣೆಯಲ್ಲಿ ಗೆಲ್ಲುವುದು, ಅವರು ಬಯಸಿದ ರೀತಿಯನ್ನು ನಾವು ಒಪ್ಪಲಿಲ್ಲ. ಇದು ಕೇವಲ ನಡಿಗೆಯ ವಿಷಯವಲ್ಲ. ಆರು ತಿಂಗಳ ಭಾರತ್ ಜೋಡೋ ಯಾತ್ರೆಯಲ್ಲಿ ಸಾಕಷ್ಟು ಪ್ರಶಂಸೆಯ ಜೊತೆಗೆ ಟೀಕೆಯೂ ವ್ಯಕ್ತವಾಗಿತ್ತು. ಆರು ತಿಂಗಳ ಯಾತ್ರೆ ನಂತರ, ನೀವು ಸ್ವಲ್ಪ ವ್ಯತ್ಯಾಸವನ್ನು ಗಮನಿಸಬೇಕಲ್ಲವೇ? ಪಕ್ಷದ ಚುನಾವಣಾ ಭವಿಷ್ಯವನ್ನು ಸುಧಾರಿಸಲು ಯಾತ್ರೆ ನಡೆಸಲಾಗುತ್ತಿದೆ.

ಮತ್ತಷ್ಟು ಓದಿ: ರಾಜಕೀಯವಾಗಿ ಏಕಾಂಗಿಯಾಗುತ್ತಿದ್ದಾರೆ ಎಂದು ನಿತೀಶ್ ಕುಮಾರ್​​ಗೆ ಭಯವಾಗುತ್ತಿದೆ: ಪ್ರಶಾಂತ್​​ ಕಿಶೋರ್

ನಾನು ಕೇವಲ ನಾಲ್ಕು ಜಿಲ್ಲೆಗಳನ್ನು ಮಾತ್ರ ಕವರ್ ಮಾಡಲು ಸಾಧ್ಯವಾಗಿದೆ. ನನಗೆ, ಪ್ರಯಾಣವು ಒಂದು ಮಿಷನ್ ಅಲ್ಲ ಆದರೆ ಪ್ರದೇಶವನ್ನು ಅರ್ಥ ಮಾಡಿಕೊಳ್ಳುವುದು ಮುಖ್ಯ ಎಂದು ಹೇಳಿದರು.

ಕೇವಲ ಪಕ್ಷಗಳು ಅಥವಾ ನಾಯಕರನ್ನು ಒಟ್ಟಿಗೆ ಸೇರಿಸುವುದರಿಂದ ಚುನಾವಣೆಯಲ್ಲಿ ಗೆಲವು ಸಾಧಿಸಲು ಸಾಧ್ಯವಿಲ್ಲ. ನೀವು ಬಿಜೆಪಿಗೆ ಸವಾಲು ಹಾಕಲು ಬಯಸಿದರೆ ಮೊದಲು ಅದರ ಶಕ್ತಿಯನ್ನು ಅರ್ಥ ಮಾಡಿಕೊಳ್ಳಬೇಕು. ಭಾರತೀಯ ಜನತಾ ಪಕ್ಷ (ಬಿಜೆಪಿ) ಸತತ ಮೂರನೇ ಬಾರಿಗೆ ಗೆಲುವಿನ ಘರ್ಜನೆ ಮಾಡುತ್ತಿದ್ದು, ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಒಟ್ಟಾಗಿ ಯೋಜನೆ ರೂಪಿಸುತ್ತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?