AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಚಿದ ಆಡಿಯೋ ವೈರಲ್ ಮಾಡಿ ನನ್ನ ವಿರುದ್ಧ ಅಪಪ್ರಚಾರ; ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ

ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ನೂರಕ್ಕೆ ನೂರು ಆ ಆಡಿಯೋ ನಂದಲ್ಲ. ತಿರುಚಿದ ಆಡಿಯೋ ವೈರಲ್ ಮಾಡಿ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಶಾಸಕ ಪ್ರೀತಂ ಗೌಡ ಆರೋಪಿಸಿದ್ದಾರೆ.

ತಿರುಚಿದ ಆಡಿಯೋ ವೈರಲ್ ಮಾಡಿ ನನ್ನ ವಿರುದ್ಧ ಅಪಪ್ರಚಾರ; ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ
ಬಿಜೆಪಿ ಶಾಸಕ ಪ್ರೀತಂ ಗೌಡ
TV9 Web
| Edited By: |

Updated on: Apr 10, 2023 | 4:10 PM

Share

ಹಾಸನ: ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ (viral audio) ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ನೂರಕ್ಕೆ ನೂರು ಆ ಆಡಿಯೋ ನಂದಲ್ಲ. ತಿರುಚಿದ ಆಡಿಯೋ ವೈರಲ್ ಮಾಡಿ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಶಾಸಕ ಪ್ರೀತಂ ಗೌಡ (Preetham Gowda) ಆರೋಪಿಸಿದ್ದಾರೆ. ಈ ಕುರಿತಾಗಿ ಟಿವಿ9 ಜೊತೆ ಮಾತನಾಡಿದ ಅವರು, ಆ ಆಡಿಯೋ ನನ್ನದಲ್ಲ, ಕಟ್ ಮಾಡಿ ಪ್ಲಾಂಟ್ ಮಾಡಲಾಗಿದೆ. ಮುಸಲ್ಮಾನರು ನನಗೆ ಹೆಚ್ಚಾಗಿ ಬೆಂಬಲ ನೀಡುತ್ತಿರುವ ಕಾರಣ ಹೀಗೆ ಮಾಡಿದ್ದಾರೆ ಎಂದು ಆರೋಪಿಸಿದರು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆಡಿಯೋವನ್ನು ನಾನು ಚೆಕ್ ಮಾಡಿದ್ದೇನೆ, ಅದು ನನ್ನ ಆಡಿಯೋ ಅಲ್ಲವೇ ಅಲ್ಲಾ ಎಂದು ಪ್ರೀತಂ ಗೌಡ ಸ್ಪಷ್ಟನೆ ನೀಡಿದ್ದಾರೆ.

ವೈರಲ್​ ಆದ ಆಡಿಯೋದಲ್ಲಿ ಏನಿದೆ?

ಅಕ್ರಮ ಗೋಮಾಂಸ ಮಾರಾಟ ಕೇಂದ್ರದ ಮೇಲೆ ದಾಳಿ ಮಾಡಿದ್ದ ಪೊಲೀಸರಿಗೆ ವಾಪಸ್ ಬರುವಂತೆ ಫೋನ್​ನಲ್ಲಿ ಮಾತನಾಡಿರುವ ರೀತಿಯ ಆಡಿಯೋ ವೈರಲ್​ ಆಗಿದೆ. ಹಾಸನದ ಶ್ರೀನಗರ ಬಡಾವಣೆಯಲ್ಲಿ ದಾಳಿ ಮಾಡಿದ್ದ ವೇಳೆ ಪೊಲೀಸ್ ಅಧಿಕಾರಿಗಳ ಜೊತೆ ಶಾಸಕರು ಮಾತನಾಡಿದ್ದಾರೆನ್ನಲಾದ ಆಡಿಯೋ ಇದಾಗಿದ್ದು, ಫೋನ್ ಮಾಡಿ ಶಾಸಕರು ಮಾತನಾಡುತ್ತಾರೆ ಎಂದು ಅಧಿಕಾರಿಗಳಿಗೆ ವ್ಯಕ್ತಿ ಓರ್ವ ಫೋನ್ ಕೊಟ್ಟಿದ್ದಾನೆ. ಅಣ್ಣ ಶ್ರೀನಗರ ಏರಿಯಾದ ಮಟನ್ ಅಂಗಡಿ ಮುಚ್ಚಿಸುವುದಕ್ಕೆ ಅಂತಾ ಸರ್ಕಲ್ ಇನ್ಸ್ಪೆಕ್ಟರ್ ಬಂದಿದಾರೆ ಎಂದು ವ್ಯಕ್ತಿ ಹೇಳುತ್ತಾನೆ. ಆಗ ಯಾರು ಎಂದು ಕೇಳಿರುವ ಶಾಸಕರು, ಹಾಸನ ಟೌನ್ ಸರ್ಕಲ್ ಎಂದು ಹೇಳಿ ಇನ್ಸ್ಪೆಕ್ಟರ್​ಗೆ ಫೋನ್​ ಕೊಡಲಾಗುತ್ತದೆ.

ಇದನ್ನೂ ಓದಿ: Congress: ಕಾಂಗ್ರೆಸ್ ನಾಯಕರ ಬಗ್ಗೆ ಮುಸ್ಲಿಂ ನಾಯಕರಿಂದ ತೀವ್ರ ಅಸಮಾಧಾನ; ಕಾರಣ ಇಲ್ಲಿದೆ

ಆ ಕಡೆಯಿಂದ ಯಾರು ಎಂದು ಕೇಳಿದಾಗ ಫೋನ್ ತೆಗೆದುಕೊಂಡು ಮಾತನಾಡಿರುವ ಹಾಸನ ನಗರ ಠಾಣೆ ಇನ್ಸ್ಪೆಕ್ಟರ್ ಯೋಗೇಶ್​ ಎಂದು ಹೇಳಿದ್ದಾರೆ. ಯೋಗೇಶಣ್ಣ ಚುನಾವಣೆ ಸಂದರ್ಭ ಬನ್ನಿ ನಿಮ್ಮ ದಮ್ಮಯ್ಯ ಎಂದಿರುವ ಶಾಸಕರು. ಅವರು ಕೂಡ ನಮ್ಮ ಅಣ್ಣತಮ್ಮಂದ್ರು ಬಾ ಎಂದು ಶಾಸಕರು ಹೇಳಿದ್ದಾರೆ ಎಂದು  ಆಡಿಯೋ ಹೇಳಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕಾರ್ಯಕರ್ತನೇ ಹಾಸನದ ಜೆಡಿಎಸ್ ಅಭ್ಯರ್ಥಿ, ಬ್ಲ್ಯಾಕ್​ಮೇಲ್​​ ನನ್ನ ಹತ್ತಿರ ನಡೆಯಲ್ಲ: ಭವಾನಿ ರೇವಣ್ಣಗೆ ಕುಮಾರಸ್ವಾಮಿ ಟಾಂಗ್

ಬಿಜೆಪಿ ಶಾಸಕರು ಅಕ್ರಮ ಗೋಮಾಂಸ ಮಾರಾಟಕ್ಕೆ ಬೆಂಬಲ ನೀಡಿದ್ದಾರೆ ಎಂದು ಆರೋಪಿಸಿದ್ದು, ಜೊತೆಗೆ ಶಾಸಕರೇ ಇನ್ಸ್ಪೆಕ್ಟರ್ ಯೋಗೇಶ್ ಜೊತೆ ಮಾತನಾಡಿದ್ದಾರೆ ಎನ್ನಲಾಗುತ್ತಿರುವ ಆಡಿಯೋ ಒಂದು ಸದ್ಯ ವೈರಲ್​ ಆಗಿದೆ. ಚುನಾವಣೆ ಸಂದರ್ಭದಲ್ಲಿ ಶಾಸಕ ಪ್ರೀತಂಗೌಡ ಅವರದ್ದ ಎನ್ನಲಾದ ಆಡಿಯೋ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ