AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ರಾಜ್ಯಧ್ಯಕ್ಷರ ಪದಗ್ರಹಣಕ್ಕೆ ಸಿದ್ಧತೆ; ಸಿಟಿ ರವಿ, ಯತ್ನಾಳ್, ಸೋಮಣ್ಣ ವಿಶ್ವಾಸಕ್ಕೆ ತೆಗೆದುಕೊಳ್ಳಲು ಬಿವೈ ವಿಜಯೇಂದ್ರ ಯತ್ನ

ರಾಜ್ಯಾಧ್ಯಕ್ಷ ಸ್ಥಾನದ ವಿಚಾರದಲ್ಲಿ ಮಾಜಿ ಸಚಿವ ಸಿ.ಟಿ ರವಿ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ನಾನೂ ಅವರ ಹೇಳಿಕೆ ಗಮನಿಸಿದ್ದೇನೆ. ಅಸಮಾಧಾನದ ಅರ್ಥದಲ್ಲಿ ಅವರು ಎಲ್ಲೂ ಹೇಳಿಲ್ಲ. ಅವರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರದ್ದೇ ಆದ ಅಭಿಪ್ರಾಯಗಳು ಕೂಡ ಇರುತ್ತವೆ ಎಂದು ಬಿವೈ ವಿಜಯೇಂದ್ರ ಹೇಳಿದರು.

ನೂತನ ರಾಜ್ಯಧ್ಯಕ್ಷರ ಪದಗ್ರಹಣಕ್ಕೆ ಸಿದ್ಧತೆ; ಸಿಟಿ ರವಿ, ಯತ್ನಾಳ್, ಸೋಮಣ್ಣ ವಿಶ್ವಾಸಕ್ಕೆ ತೆಗೆದುಕೊಳ್ಳಲು ಬಿವೈ ವಿಜಯೇಂದ್ರ ಯತ್ನ
ಬಿವೈ ವಿಜಯೇಂದ್ರ
ಕಿರಣ್​ ಹನಿಯಡ್ಕ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 11, 2023 | 10:52 PM

Share

ಬೆಂಗಳೂರು, ನ.11: ಕೊನೆಗೂ ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ (BJP Karnataka President)ರನ್ನು ನೇಮಕ ಮಾಡಲಾಗಿದೆ. ಹೌದು, ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರ ಪುತ್ರ, ಶಾಸಕ ಬಿವೈ ವಿಜಯೇಂದ್ರ (BY Vijayendra) ಅವರನ್ನು ನಿನ್ನೆ(ನ.10)ನೇಮಕ ಮಾಡಿ ಆದೇಶಿಸಿದ್ದಾರೆ. ಇನ್ನು ಇದಕ್ಕೆ ಪ್ರಬಲ ಆಕಾಂಕ್ಷಿಗಳಾಗಿದ್ದ ವಿ.ಸೋಮಣ್ಣ, ಬಸನಗೌಡ ಪಾಟೀಲ್​ ಯತ್ನಾಳ್​ ಹಾಗೂ ಸಿಟಿ ರವಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಅಸಮಧಾನಗೊಂಡಿದ್ದರು. ಈ ಹಿನ್ನಲೆ ನೂತನ ಅಧ್ಯಕ್ಷರಾದ ವಿಜಯೇಂದ್ರ ಅವರು ‘ನಾನು ರವಿಯವರ ಜೊತೆ ಮಾತಾಡಿದ್ದೇನೆ, ನಾಡಿದ್ದು ಸೋಮಣ್ಣ ಮತ್ತು ಯತ್ನಾಳ್ ಅವರ ಜೊತೆಯೂ ಮಾತಾಡುತ್ತೇನೆ ಎಂದರು.

ಇನ್ನು ರಾಜ್ಯಾಧ್ಯಕ್ಷ ಸ್ಥಾನದ ವಿಚಾರದಲ್ಲಿ ಮಾಜಿ ಸಚಿವ ಸಿ.ಟಿ ರವಿ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ನಾನೂ ಅವರ ಹೇಳಿಕೆ ಗಮನಿಸಿದ್ದೇನೆ. ಅಸಮಾಧಾನದ ಅರ್ಥದಲ್ಲಿ ಅವರು ಎಲ್ಲೂ ಹೇಳಿಲ್ಲ. ಅವರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವಂತಹವರು. ಅವರದ್ದೇ ಆದ ಅಭಿಪ್ರಾಯಗಳು ಕೂಡ ಇರುತ್ತವೆ. ಹಿರಿಯರ ಸಲಹೆ, ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದು ನನ್ನ ಕರ್ತವ್ಯ ಇದೆ. ಅದಕ್ಕೆ ಬೇರೆ ಅಪಾರ್ಥ ಕಲ್ಪಿಸಬೇಕಿಲ್ಲ. ಮೋದಿ ಕೈ ಬಲಪಡಿಸುವುದು ನನ್ನ ಮತ್ತು ನಮ್ಮೆಲ್ಲರ ಗುರಿ ಎಂದರು.

ಇದನ್ನೂ ಓದಿ:ಬಿವೈ ವಿಜಯೇಂದ್ರ ಕರ್ನಾಟಕ ಬಿಜೆಪಿ ಅಧ್ಯಕ್ಷ; ಇದು ಸ್ವಜನಪಕ್ಷಪಾತ ಎಂದ ಸುರ್ಜೇವಾಲಾ

ಪಕ್ಷ ದೊಡ್ಡ ಜವಾಬ್ದಾರಿಯನ್ನು ನನ್ನ ಹೆಗಲ ಮೇಲೆ ಹಾಕಿದೆ

ಹೌದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡು ಎಂದು ನಿರ್ಮಲಾನಂದ ಶ್ರೀ ಆಶೀರ್ವಾದ ಮಾಡಿದ್ದಾರೆ. ಪಕ್ಷ ದೊಡ್ಡ ಜವಾಬ್ದಾರಿಯನ್ನು ನನ್ನ ಹೆಗಲ ಮೇಲೆ ಹಾಕಿದೆ. ಈ ಸಂದರ್ಭದಲ್ಲಿ ಪರಮ ಪೂಜ್ಯರ ಆಶೀರ್ವಾದ ಅತ್ಯಗತ್ಯ. ನಾಳೆ ಸಿದ್ದಗಂಗಾ ಮಠ ಮತ್ತು ಮನೆ ದೇವರು ಯಡಿಯೂರು ಸಿದ್ಧಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುತ್ತೇನೆ. ಇನ್ನು ಪದಗ್ರಹಣವನ್ನು ಇದೇ ನ.15 ರಂದು ಮಾಡಲಾಗುವುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?