AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

President Election 2022 ರಾಷ್ಟ್ರಪತಿ ಚುನಾವಣೆಗೆ ಮತದಾನ ಅಂತ್ಯ, ಶೇ 99.18 ಮತದಾನ ದಾಖಲು

727 ಸಂಸದರು ಮತ್ತು 9 ಶಾಸಕರು ಸೇರಿದಂತೆ 736 ಸದಸ್ಯರು ರಾಷ್ಟ್ರಪತಿ ಚುನಾವಣೆಗೆ ಸಂಸತ್​​ನಲ್ಲಿ ಮತದಾನ ಮಾಡಲು ಅನುಮತಿ ನೀಡಲಾಗಿದೆ. ಇದರಲ್ಲಿ 730(721 ಸಂಸದರು, 9 ಶಾಸಕ) ಇಂದು ಮತದಾನ ಮಾಡಿದ್ದಾರೆ ಎಂದು ಚುನಾವಣಾ ಅಧಿಕಾರಿ ಹೇಳಿದ್ದಾರೆ.

President Election 2022 ರಾಷ್ಟ್ರಪತಿ ಚುನಾವಣೆಗೆ ಮತದಾನ ಅಂತ್ಯ, ಶೇ 99.18 ಮತದಾನ ದಾಖಲು
ರಾಷ್ಟ್ರಪತಿ ಚುನಾವಣೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 18, 2022 | 6:48 PM

Share

ದೇಶದ ನೂತನ ರಾಷ್ಟ್ರಪತಿಯನ್ನು ಆಯ್ಕೆ ಮಾಡಲಿರುವ ಚುನಾವಣೆಗೆ (Presidential poll) ಸೋಮವಾರ ಮತದಾನ ನಡೆದಿದ್ದು ಎಲ್ಲಾ ಕಡೆ ಶಾಂತಿಯುತ ಮತ್ತು ಸೌಹಾರ್ದಯುತವಾಗಿ ಮತದಾನ ಪ್ರಕ್ರಿಯೆ ನಡೆದಿದೆ. ಒಟ್ಟು ಶೇ 99.18 ಮತದಾನ ದಾಖಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಪಿ.ಸಿ ಮೋಡಿ (PC Mody) ಹೇಳಿದ್ದಾರೆ. ಶಿರೋಮಣಿ ಅಕಾಲಿದಳ ಶಾಸಕ ಮನಪ್ರೀತ್ ಸಿಂಗ್ ಅಯಾಲಿ ರಾಷ್ಟ್ರಪತಿ ಚುನಾವಣೆ ಬಹಿಷ್ಕರಿಸಿದ್ದಾರೆ. ಪಂಜಾಬ್​​ಗೆ ಸಂಬಂಧಿಸಿದ ಸಮಸ್ಯೆಗಳು ಇನ್ನೂ ಪರಿಹಾರವಾಗಿಲ್ಲ ಅಷ್ಟೇ ಅಲ್ಲದೆ ಎನ್​​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಬೆಂಬಲಿಸಲು ನಿರ್ಧರಿಸುವಾಗ ತಮ್ಮ ಪಕ್ಷದ ನಾಯಕತ್ವ ನನ್ನನ್ನು ಭೇಟಿಯಾಗಿಲ್ಲ ಎಂದು ಅವರು ಹೇಳಿದ್ದಾರೆ. 727 ಸಂಸದರು ಮತ್ತು 9 ಶಾಸಕರು ಸೇರಿದಂತೆ 736 ಸದಸ್ಯರು ರಾಷ್ಟ್ರಪತಿ ಚುನಾವಣೆಗೆ ಸಂಸತ್​​ನಲ್ಲಿ ಮತದಾನ ಮಾಡಲು ಅನುಮತಿ ನೀಡಲಾಗಿದೆ. ಇದರಲ್ಲಿ 730(721 ಸಂಸದರು, 9 ಶಾಸಕ) ಇಂದು ಮತದಾನ ಮಾಡಿದ್ದಾರೆ ಎಂದು ಚುನಾವಣಾ ಅಧಿಕಾರಿ ಹೇಳಿದ್ದಾರೆ.  ಇಲ್ಲಿ ಎಂಟು ಸಂಸದರು ಮತದಾನ  ಮಾಡಿಲ್ಲ. ಈ ಪೈಕಿ ಬಿಜೆಪಿ  – 2, ಕಾಂಗ್ರೆಸ್  – 1, ಶಿವಸೇನಾ – 2, ಸಮಾಜವಾದಿ ಪಕ್ಷ- 1, ಬಿಎಸ್​​ಪಿ – 1, ಎಐಎಂಐಎಂ – 1 ಸಂಸದರು ಮತದಾನ ಮಾಡಿಲ್ಲ.

ಪಿಪಿಇ ಕಿಟ್​​ನಲ್ಲಿ ಬಂದು ಮತದಾನ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ವಿದ್ಯುತ್ ಸಚಿವ ಆರ್ ಕೆ ಸಿಂಗ್ ಅವರು ಕೋವಿಡ್ ಬಾಧಿತರಾಗಿದ್ದು ಪಿಪಿಇ ಕಿಟ್ ಧರಿಸಿ ಬಂದು ಮತದಾನ ಮಾಡಿದ್ದಾರೆ.

ರಸ್ತೆ ಮತ್ತು ವಾಯುಮಾರ್ಗ ಮೂಲಕ ದೆಹಲಿ ತಲುಪಲಿದೆ ಮತ ಪೆಟ್ಟಿಗೆ

ರಾಷ್ಟ್ರಪತಿ ಚುನಾವಣೆಯ ಮತ ಪೆಟ್ಟಿಗೆಗಳನ್ನು ರಸ್ತೆ ಮತ್ತು ವಿಮಾನದ ಮೂಲಕ ದೆಹಲಿಗೆ ಸಾಗಿಸಲಾಗುವುದು ಎಂದು ಚೀಫ್ ರಿಟರ್ನಿಂಗ್ ಅಫೀಸರ್ ಹೇಳಿದ್ದಾರೆ. ಸಹಾಯಕ ರಿಟರ್ನಿಂಗ್ ಆಫೀಸರ್ ಮತಪೆಟ್ಟಿಗೆ ಸಾಗಿಸುವಾಗ ಜತೆಯಲ್ಲಿ ಹೋಗಲಿದ್ದಾರೆ ಎಂದು ಅವರು ಹೇಳಿದ್ದಾರೆ. ಎಲ್ಲ ರಾಜ್ಯಗಳಿಂದ ಸೋಮವಾರ ಸಂಜೆ ಬ್ಯಾಲೆಟ್ ಬಾಕ್ಸ್ ಸಂಸತ್ ಗೆ ತಲುಪಲಿದೆ ಎಂದು ಅವರು ಹೇಳಿದ್ದಾರೆ.

70 ಸದಸ್ಯರಿರುವ ದೆಹಲಿ ವಿಧಾನಸಭೆಯಲ್ಲಿ 68 ಸದಸ್ಯರು ಮತದಾನ ಮಾಡಿದ್ದಾರೆ. ಮುಸ್ತಫಾಬಾದ್ ಶಾಸಕ ಹಾದಿ ಯೂನಸ್ ಹಜ್ ತೀರ್ಥಯಾತ್ರೆಯಲ್ಲಿದ್ದು, ಸಚಿವ ಸತ್ಯೇಂದರ್ ಜೈನ್ ಜೈಲಿನಲ್ಲಿದ್ದಾರೆ . ಹಾಗಾಗಿ ಇಬ್ಬರಿಗೆ ಮತದಾನ ಮಾಡಲು ಸಾಧ್ಯವಾಗಿಲ್ಲ.

ಪಿಪಿಇ ಕಿಟ್ ಧರಿಸಿ ಮತದಾನ ಮಾಡಿದ ಒ ಪನ್ನೀರ್ ಸೆಲ್ವಂ

ಕೋವಿಡ್ ಬಾಧಿತರಾಗಿರುವ ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಪಿಪಿಇ ಕಿಟ್ ಧರಿಸಿ ಬಂದು ಮತದಾನ ಮಾಡಿದ್ದಾರೆ.

Published On - 6:30 pm, Mon, 18 July 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು