AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಲ್ ಸಂತೋಷ್​ಗೆ ಎರಡು ಪ್ರಮುಖ ಸವಾಲು ಹಾಕಿದ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯ ರಾಜಕಾರಣದಲ್ಲಿ ಧೂಳೆಬ್ಬಿಸುತ್ತಿರುವ ಆಪರೇಷನ್ ಹಸ್ತದ ಸುಳಿಗಾಳಿಗೆ ಪ್ರತಿಯಾಗಿ, 40-45 ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳುವ ಮೂಲಕ ಬಿ.ಎಲ್ ಸಂತೋಷ ಅವರು ಬಿರುಗಾಳಿ ಎಬ್ಬಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರು ಎರಡು ಪ್ರಮುಖ ಸವಾಲು ಹಾಕಿದ್ದಾರೆ.

ಬಿಎಲ್ ಸಂತೋಷ್​ಗೆ ಎರಡು ಪ್ರಮುಖ ಸವಾಲು ಹಾಕಿದ ಸಚಿವ ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ ಮತ್ತು ಬಿಎಲ್ ಸಂತೋಷ್
ಪ್ರಸನ್ನ ಗಾಂವ್ಕರ್​
| Edited By: Rakesh Nayak Manchi|

Updated on:Sep 01, 2023 | 5:25 PM

Share

ಬೆಂಗಳೂರು, ಸೆ.1: ನಮ್ಮ ಸಂಪರ್ಕದಲ್ಲಿ 40-45 ಕಾಂಗ್ರೆಸ್ ಶಾಸಕರು ಇದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ (B.L.Santhosh) ಅವರು ನೀಡಿದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಧೂಳೆಬ್ಬಿಸುತ್ತಿರುವ ಆಪರೇಷನ್ ಹಸ್ತದ ಸುಳಿಗಾಳಿಗೆ ಪ್ರತಿಯಾಗಿ ಬಿರುಗಾಳಿ ಎಬ್ಬಿಸಿದಂತಾಗಿದೆ. ಸದ್ಯ ಹೇಳಿಕೆಗೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಒಂದು ಹೆಜ್ಜೆ ಮುಂದೆ ಹೋಗಿ ಬಿಎಲ್ ಸಂತೋಷ್ ಅವರಿಗೆ ಎರಡು ಪ್ರಮುಖ ಸವಾಲುಗಳನ್ನು ಹಾಕಿದ್ದಾರೆ.

ಬಿಎಲ್ ಸಂತೋಷ್ ಹೇಳಿಕೆಗೆ ಟ್ವೀಟ್ ಮೂಲಕ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ, “ಬಿಎಲ್ ಸಂತೋಷ್ ಅವರಿಗೆ ಒಂದು ಸವಾಲು. ಒಂದು ದಿನವಲ್ಲ, ಒಂದು ತಿಂಗಳು ಸಮಯ ನೀಡುತ್ತೇವೆ. ನಮ್ಮ ಸರ್ಕಾರವನ್ನು ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವಾ ಎಂದು ತೋರಿಸಲಿ” ಎಂದಿದ್ದಾರೆ.

ಇದನ್ನೂ ಓದಿ: 40 – 45 ಜನ ಸಂಪರ್ಕದಲ್ಲಿದ್ದಾರೆ, ಒಪ್ಪಿಗೆ ಸಿಕ್ಕರೆ ಒಂದು ದಿನದ ಕೆಲಸ, ಆದರೆ; ಬಿಎಲ್​ ಸಂತೋಷ್ ಸ್ಫೋಟಕ ಹೇಳಿಕೆ

“ಇದೆಲ್ಲವಕ್ಕೂ ಮಿಗಿಲಾಗಿ ಮತ್ತೊಂದು ಸವಾಲು, ಒಂದು ವಾರದ ಸಮಯದಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಹಾಗೂ ಮೇಲ್ಮನೆಯ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ ತೋರಿಸಲಿ. ಈ ಸವಾಲನ್ನು ಸ್ವೀಕರಿಸುವ ದಮ್ಮು, ತಾಕತ್ತು ಇದೆಯೇ? ಎಂದು ಬಿಎಲ್ ಸಂತೋಷ್ ಅವರಿಗೆ ಪ್ರಿಯಾಂಕ್ ಖರ್ಗೆ ಕೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ಟ್ವೀಟ್

ಬಿಎಲ್ ಸಂತೋಷ್ ಹೇಳಿಕೆಗೆ ತಿರುಗೇಟು ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ನಮ್ಮ ಎಲ್ಲ ಶಾಸಕರನ್ನೂ ಸಂಪರ್ಕದಲ್ಲಿ ಇಟ್ಟುಕೊಳ್ಳಲಿ, ಬಹಳ ಸಂತೋಷ ಎಂದಿದ್ದಾರೆ. ಬಿಜೆಪಿ ಶಾಸಕರೇ ನಮ್ಮ ಜೊತೆಗೆ ಬರುತ್ತಾ ಇದ್ದಾರೆ. ಕರ್ನಾಟಕ ಬಿಜೆಪಿ ಮುಳುಗಿ ಹೋದ ಹಡುಗು. ಸೀ ಡೈವರ್ಸ್ ತರಹ ಸಂತೋಷ್ ಮುಳುಗಿ ಅದನ್ನು ಮೇಲೆತ್ತಲಿ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Fri, 1 September 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ