AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಟ್​ಕಾಯಿನ್​ ಪ್ರಕರಣ ಚುರುಕುಗೊಂಡರೆ ರಾಜ್ಯಕ್ಕೆ 3ನೇ ಸಿಎಂ ಸಿಗ್ತಾರೆ; ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್

ಗೃಹ ಸಚಿವರಿಗೆ ಕೇಶವ ಕೃಪಾದಿಂದ ಆದೇಶ ಬರುತ್ತಿದೆ. ಸಿಐಡಿ ಪೊಲೀಸರು ವಶದಲ್ಲಿ ಇರುವವರು ಕಿಂಗ್​​ಪಿನ್​ಗಳಲ್ಲ. ಕೇವಲ ಮಧ್ಯವರ್ತಿಗಳು. ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರದ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಬೈಟ್​ಕಾಯಿನ್​ ಪ್ರಕರಣ ಚುರುಕುಗೊಂಡರೆ ರಾಜ್ಯಕ್ಕೆ 3ನೇ ಸಿಎಂ ಸಿಗ್ತಾರೆ; ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್
ಶಾಸಕ ಪ್ರಿಯಾಂಕ್ ಖರ್ಗೆ
TV9 Web
| Edited By: sandhya thejappa|

Updated on:May 02, 2022 | 11:33 AM

Share

ಮೈಸೂರು: 545 PSI ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge), ಬಿಜೆಪಿಯವರು ಕುಣಿಯಲಾರದೆ ನೆಲ ಡೊಂಕು ಎನ್ನುತ್ತಿದ್ದಾರೆ. ಗೃಹ ಸಚಿವ ಅರಗ ಜ್ಞಾನೇಂದ್ರ (Araga Jnanendra) ರಾಜೀನಾಮೆ ನೀಡಬೇಕು. ಆರಗ ಜ್ಞಾನೇಂದ್ರಗೆ ಆಡಳಿತ ನಡೆಸಲು ಆಗುತ್ತಿಲ್ಲ. ಗೃಹ ಸಚಿವರಿಗೆ ಕೇಶವ ಕೃಪಾದಿಂದ ಆದೇಶ ಬರುತ್ತಿದೆ. ಸಿಐಡಿ ಪೊಲೀಸರು ವಶದಲ್ಲಿ ಇರುವವರು ಕಿಂಗ್​​ಪಿನ್​ಗಳಲ್ಲ. ಕೇವಲ ಮಧ್ಯವರ್ತಿಗಳು. ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರದ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಮುಂದುವರಿದು ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ ಬೈಟ್​ಕಾಯಿನ್​ ಪ್ರಕರಣ ಚುರುಕುಗೊಂಡರೆ ರಾಜ್ಯಕ್ಕೆ 3ನೇ ಮುಖ್ಯಮಂತ್ರಿ ಸಿಗಲಿದ್ದಾರೆ ಅಂತ ಮೈಸೂರಿನಲ್ಲಿ ಶಾಸಕ ಪ್ರಿಯಾಂಕ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.

ಮೋದಿ ಜತೆ ಪೋಟೋ ಇದೆ ಅಂತಾ ತನಿಖೆ ನಿಲ್ಲಿಸುತ್ತೀರಾ? ಎಂದು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ, ಸರ್ಕಾರ ಪ್ರಕರಣವನ್ನ ಮುಚ್ಚಿ ಹಾಕುವ ಪ್ರಯತ್ನ ನಡೆಸಿತ್ತು ಎಂದು ಹೇಳಿದ್ದಾರೆ. ಪ್ರತಾಪ್ ಸಿಂಹ ಟೀಕೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ ಶಾಸಕರು, Am Not Answerable to ಪ್ರತಾಪಸಿಂಹ. ನನಗೆ ಯಾವ ನೋಟಿಸ್ ನೀಡಲಾಗಿದೆ ಎಂದು ತಿಳಿಯಲಿ. ಸಂಸದ ಪ್ರತಾಪ್ ಸಿಂಹಾಗೆ ಕಾನೂನಿನ ಬಗ್ಗೆ ಅರಿವಿಲ್ಲ. ನೋಟಿಸ್‌ಗೆ ಕಾನೂನು ಪ್ರಕಾರ ನಡೆದುಕೊಂಡಿದ್ದೇನೆ. ಪ್ರತಾಪಸಿಂಹ ಮೊದಲು ಅವರ ಕೆಲಸ ಸರಿಯಾಗಿ ಮಾಡಲಿ. ಮೋದಿ ಮೈಸೂರನ್ನ ಪ್ಯಾರಿಸ್ ಮಾಡುತ್ತೇನೆ ಅಂದಿದ್ದರು. ಪ್ರತಾಪ್ ಸಿಂಹ ಪ್ಯಾರಿಸ್ ಮಾಡುವ ಬಗ್ಗೆ ಗಮನ ಹರಿಸಲಿ ಎಂದು ಹೇಳಿದರು.

ಪ್ರಿಯಾಂಕ್ ಖರ್ಗೆಗೆ ಸುನಿಲ್ ಕುಮಾರ್ ತಿರುಗೇಟು: ಪ್ರಿಯಾಂಕ್ ಖರ್ಗೆ ದಾಖಲೆ ಇಲ್ಲದೆ ಮಾತನಾಡುತ್ತಾರೆ ಅಂತ ಉಡುಪಿಯಲ್ಲಿ ಸಚಿವ ವಿ.ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಪ್ರಿಯಾಂಕ್ ಎಂದೂ ಗಂಭೀರ ಆರೋಪಗಳನ್ನ ಮಾಡಿಲ್ಲ. ಪ್ರಚಾರದ ಹುಚ್ಚಿಂದ ನಿರಂತರ ಸುದ್ದಿಗೋಷ್ಠಿ ಮಾಡುತ್ತಾರೆ. ಪ್ರಿಯಾಂಕ್ ಬಿಟ್​ಕಾಯಿನ್ ವಿಚಾರದಲ್ಲಿ ಸಾಧಿಸಿದ್ದೇನು? ಪೊಲೀಸರಿಗೆ ಸಿಗದ ವಾಯ್ಸ್ ರೆಕಾರ್ಡ್ ಖರ್ಗೆಗೆ ಸಿಗುತ್ತೆ. ಇದೇ ಕಾರಣಕ್ಕೆ ಪ್ರಿಯಾಂಕ್ ತನಿಖೆಯಾಗಬೇಕು ಎಂದಿದ್ದೆ. ನೋಟಿಸ್ ಕೊಟ್ಟರೆ ಪ್ರಿಯಾಂಕ್ ಉತ್ತರ ಕೊಡಲ್ಲ ಅಂತಾರೆ. ತಲೆಮರೆಸಿಕೊಂಡ ಆರೋಪಿಗಳ ರೀತಿ ಖರ್ಗೆ ವರ್ತಿಸ್ತ್ತಾರೆ ಎಂದರು.

ಇದನ್ನೂ ಓದಿ

IPL 2022 Points Table: ಮೊದಲೆರಡು ಸ್ಥಾನದಲ್ಲಿ ಎರಡು ಹೊಸ ತಂಡಗಳು: ಐಪಿಎಲ್ 2022 ಅಂಕಪಟ್ಟಿ ಇಲ್ಲಿದೆ ನೋಡಿ

Tax Exemption: ಪೋಷಕರಿಗೆ ನೀಡುವ ಹಣಕ್ಕೆ ದೊರೆಯಲಿದೆ ತೆರಿಗೆ ವಿನಾಯಿತಿ; ಯಾವ್ಯಾವುದಕ್ಕೆ ಸಿಗಲಿದೆ ಇಲ್ಲಿದೆ ವಿವರ

Published On - 11:18 am, Mon, 2 May 22

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ