ಹೈಕೋರ್ಟ್​ ತೀರ್ಪು ಬಳಿಕ ಸಿಎಂ ಟೆನ್ಷನ್​​: ಶಾಸಕಾಂಗ ಪಕ್ಷ, ಸಚಿವ ಸಂಪುಟ ಸಭೆ ಕರೆದ ಸಿದ್ದರಾಮಯ್ಯ

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್​ ಅನುಮತಿಯನ್ನು ಹೈಕೋರ್ಟ್​ ಎತ್ತಿ ಹಿಡಿದಿದೆ. ಈ ತೀರ್ಪಿನಿಂದ ಗೊಂದಲಕ್ಕೆ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷ ಮತ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಹೈಕೋರ್ಟ್​ ತೀರ್ಪು ಬಳಿಕ ಸಿಎಂ ಟೆನ್ಷನ್​​: ಶಾಸಕಾಂಗ ಪಕ್ಷ, ಸಚಿವ ಸಂಪುಟ ಸಭೆ ಕರೆದ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
| Updated By: ವಿವೇಕ ಬಿರಾದಾರ

Updated on:Sep 24, 2024 | 2:53 PM

ಬೆಂಗಳೂರು, ಸೆಪ್ಟೆಂಬರ್​​ 24: ಮುಡಾದಲ್ಲಿ (Muda) ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಸಿಕ್ಯೂಷನ್​ ಅನ್ನು ಕರ್ನಾಟಕ ಹೈಕೋರ್ಟ್ (High Court)​ ಎತ್ತಿ ಹಿಡಿದಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನೆಡೆಯಾಗಿದೆ. ಇದರಿಂದ ಸಿಎಂ ಸಿದ್ದಾರಾಮಯ್ಯ ಟೆನ್ಷನ್ ಆಗಿದ್ದು​, ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.

ಗುರುವಾರ ಸಚಿವ ಸಂಪುಟ ಸಭೆ

ಶಾಸಕಾಂಗ ಪಕ್ಷದ ಸಭೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ 12:30ಕ್ಕೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ರಾಜ್ಯಪಾಲರು ಬೇರೆ ಬೇರೆ ಪ್ರಕರಣಗಳಲ್ಲಿ ವರದಿ ಕೇಳಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರಗಳಿಗೆ ಹೇಗೆ ಉತ್ತರ ಕೊಡಬೇಕೆಂಬುವುದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

ಸಿಎಂ ನಿವಾಸಕ್ಕೆ ಸಚಿವರ ದೌಡು

ಹೈಕೋರ್ಟ್​ ತೀರ್ಪು ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಸಚಿವರು ದೌಡಾಯಿಸಿದ್ದಾರೆ. ಕಾನೂನು ಸಚಿವ ಹೆಚ್ ಕೆ ಪಾಟೀಲ್, ಸಚಿವರಾದ ಶಿವರಾಜ್ ತಂಗಡಗಿ, ಕೃಷ್ಣಭೈರೇಗೌಡ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೆರಳಿದ್ದಾರೆ.

ಇದನ್ನೂ ಓದಿ: ಕಪ್ಪು ಚುಕ್ಕೆಯಿಂದ ಬೆತ್ತಲಾದ ವೈಟ್ನರ್ ರಾಮಯ್ಯ: ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ ಬಗ್ಗೆ ಜೆಡಿಎಸ್ ವ್ಯಂಗ್ಯ

ರಾಜ್ಯಕ್ಕೆ ಸುರ್ಜೆವಾಲಾ ಆಗಮನ

ಹೈಕೋರ್ಟ್​ ತೀರ್ಪು ಬರುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಲ್ಲಿ, ಮುಖಂಡರೊಂದಿಗೆ ಸಭೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿದ್ದರಾಮಯ್ಯ ಕೇರಳ ಪ್ರವಾಸ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕೇರಳಕ್ಕೆ ತೆರಳಲಿದ್ದಾರೆ. ಸಿಎಂ ಸಿದ್ದರಾಮಯ್ಯ ನಾಳೆ (ಸೆ.25) ಮಧ್ಯಾಹ್ನ ಕೇರಳದ ಮಲಪ್ಪುರಂ ಜಿಲ್ಲೆಗೆ ತೆರಳಲಿದ್ದು, ಇಲ್ಲಿ ನಡೆಯುವ ಆರ್ಯಧನ್ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:17 pm, Tue, 24 September 24

CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15
ಸ್ಪರ್ಧಿಗಳ ಪಟ್ಟಿ ಸುದೀಪ್​ಗೆ ಸಿಗೋದು ಯಾವಾಗ? ಉತ್ತರಿಸಿದ ಕಿಚ್ಚ
ಸ್ಪರ್ಧಿಗಳ ಪಟ್ಟಿ ಸುದೀಪ್​ಗೆ ಸಿಗೋದು ಯಾವಾಗ? ಉತ್ತರಿಸಿದ ಕಿಚ್ಚ
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ
ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ
Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು
Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ