AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ಇಡಿ ವಿಚಾರಣೆ; ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ರಾಜ್ ಭವನ್‌ ಚಲೋ

ಬೆಳಗ್ಗೆ 9:30 ರ ವೇಳೆಗೆ ಕೆಪಿಸಿಸಿ ಕಚೇರಿಯಿಂದ ರಾಜ್‌ಭವನ್‌ ವರೆಗೆ ಕಾಂಗ್ರೆಸ್ ನಾಯಕರು,ಕಾರ್ಯಕರ್ತರು ಬೃಹತ್ ರ್ಯಾಲಿ ನಡೆಸಲಿದ್ದು, ನಗರದಲ್ಲಿ ಟ್ರಾಫಿಕ್ ಜಾಮ್ ಆಗಲಿದೆ

ರಾಹುಲ್ ಗಾಂಧಿ ಇಡಿ ವಿಚಾರಣೆ; ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ರಾಜ್ ಭವನ್‌ ಚಲೋ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 16, 2022 | 8:51 AM

Share

ಬೆಂಗಳೂರು:  ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಜಾರಿ ನಿರ್ದೇಶನಾಲಯ (ED) ಕ್ರಮ ಮತ್ತು ಪಕ್ಷದ ಮುಖಂಡರನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ವಿರೋಧಿಸಿ ಕರ್ನಾಟಕದ ಕಾಂಗ್ರೆಸ್ ನಾಯಕರು ಇಂದು (ಗುರುವಾರ) ರಾಜಭವನಕ್ಕೆ ಮುತ್ತಿಗೆ  (Raj Bhavan Chalo) ಹಾಕಲಿದ್ದಾರೆ. ಬೆಳಗ್ಗೆ 9:30 ರ ವೇಳೆಗೆ ಕೆಪಿಸಿಸಿ ಕಚೇರಿಯಿಂದ ರಾಜ್‌ಭವನ್‌ ವರೆಗೆ ಕಾಂಗ್ರೆಸ್ ನಾಯಕರು,ಕಾರ್ಯಕರ್ತರು ಬೃಹತ್ ರ್ಯಾಲಿ ನಡೆಸಲಿದ್ದು, ನಗರದಲ್ಲಿ ಟ್ರಾಫಿಕ್ ಜಾಮ್ ಆಗಲಿದೆ. ಬುಧವಾರ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ (DK Shivakumar) ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಂಸದರು ಮತ್ತು ಶಾಸಕರು ಸೇರಿದಂತೆ ಪಕ್ಷದ ಮುಖಂಡರು ಬೆಳಿಗ್ಗೆ 10 ಗಂಟೆಗೆ ಪಕ್ಷದ ಕಚೇರಿಯಿಂದ ‘ರಾಜ್‌ಭವನ್‌ ಚಲೋ’ ಪ್ರತಿಭಟನಾ ರ್ಯಾಲಿ ನಡೆಸಲಿದ್ದಾರೆ. ಸೇಡಿನ ರಾಜಕಾರಣ ಮತ್ತು ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಶಿವಕುಮಾರ್ ಹೇಳಿದ್ದಾರೆ. ರಾಹುಲ್ ಗಾಂಧಿ ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿದಾಗ ಎರಡರಿಂದ ಮೂರು ಗಂಟೆಗಳಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸಬಹುದಿತ್ತು. ಆದರೆ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸುವ ಷಡ್ಯಂತ್ರ ಇದಾಗಿದೆ ಎಂದು ಶಿವಕುಮಾರ್ ಹೇಳಿದರು.

ಕಾಂಗ್ರೆಸ್ ಕಾರ್ಯಕರ್ತರು ಕೇಸುಗಳಿಗೆ ಹೆದರಿ ಜೈಲಿಗೆ ಹೋಗುವುದಿಲ್ಲ, ಅನ್ಯಾಯದ ವಿರುದ್ಧ ನಿರಂತರ ಪ್ರತಿಭಟನೆ ನಡೆಸುತ್ತೇವೆ. ದೇಶದಲ್ಲಿ ಸದ್ಯ ಬ್ರಿಟಿಷರ ಆಡಳಿತಕ್ಕಿಂತ ಹದಗೆಟ್ಟ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೇಂದ್ರವು ರಾಜಕೀಯ ಸೇಡಿಗಾಗಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವುದನ್ನು ನಿಲ್ಲಿಸುವವರೆಗೂ ಇದರ ವಿರುದ್ಧ ಪ್ರತಿಭಟನೆ ಮುಂದುವರಿಸುವುದಾಗಿ ಸಿದ್ದರಾಮಯ್ಯ ಹೇಳಿದರು. ಶುಕ್ರವಾರ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನಾ ಪ್ರದರ್ಶನಗಳನ್ನು ನಡೆಯಲಿದೆ.

ಸಂಚಾರ ದಟ್ಟಣೆ ಯಾವ ಯಾವ ಮಾರ್ಗದಲ್ಲಿ‌ ಇರಲಿದೆ

ಇದನ್ನೂ ಓದಿ
Image
ಮೈಸೂರು: ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮಧು ಜಿ.ಮಾದೇಗೌಡಗೆ 12,205 ಮತಗಳ ಅಂತರದಿಂದ ಜಯ
Image
ವಾಯವ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹನುಮಂತ ನಿರಾಣಿ ಗೆಲವು  ಬಹುತೇಕ ಖಚಿತ; ಮೈಸೂರು ಫಲಿತಾಂಶ ಏನಾಯ್ತು
Image
ಬೆಳಗಾವಿ ಮತ ಎಣಿಕಾ ಕೇಂದ್ರದಲ್ಲೇ ಪೊಲೀಸ್​ ಅಧಿಕಾರಿಗೆ ಧಮ್ಕಿ ಹಾಕಿದ ವಿಜೇತ ಅಭ್ಯರ್ಥಿ ಕಾಂಗ್ರೆಸ್​ನ ಪ್ರಕಾಶ್ ಹುಕ್ಕೇರಿ
Image
ಕೆಜಿಎಫ್ ಟು ಡೆಲ್ಲಿ: ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬುಗೆ ಇ.ಡಿ ಬುಲಾವ್; ನಾಳೆ ದೆಹಲಿಯತ್ತ ಪ್ರಯಾಣ

ಕ್ವೀನ್ಸ್‌‌ ರೋಡ್‌- ಇಂಡಿಯನ್ ಎಕ್ಸ್‌ ಪ್ರೆಸ್, ಜಿಪಿಓ‌ ಸಿಗ್ನಲ್ ಮೂಲಕ‌ ರ್ಯಾಲಿ ರಾಜ್ ಭವನ ತಲುಪಲಿದೆ. ಹಾಗಾಗಿ ಕ್ವೀನ್ಸ್ ರೋಡ್, ಇಂಡಿಯನ್ ಎಕ್ಸ್ ಪ್ರೆಸ್, ವಸಂತ‌ನಗರ, ಶಿವಾಜಿನಗರ, ಕೋಲ್ಸ್‌ಪಾರ್ಕ್‌, ನಂದಿ‌ದುರ್ಗ ‌ರಸ್ತೆ,ವಿಧಾನ ಸೌಧ, ಕೆ ಆರ್ ಸರ್ಕಲ್‌‌ ಸೇರಿದಂತೆ‌ ಬೆಂಗಳೂರಿನ ಹೃದಯ ಭಾಗದಲ್ಲಿ‌ ಸಂಚಾರ ದಟ್ಟಣೆ ಸಾಧ್ಯತೆ ಇದೆ.

ರಾಜ್ಯದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 8:41 am, Thu, 16 June 22

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ