AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ ರಾಷ್ಟ್ರಪತಿ ಚುನಾವಣೆಗೆ ಅಧಿಕೃತ ಆದೇಶ ಜಾರಿ; ಜುಲೈ 19ರವರೆಗೆ ನಾಮಪತ್ರ ಸಲ್ಲಿಕೆ, ಆಗಸ್ಟ್ 6ಕ್ಕೆ ಚುನಾವಣೆ

ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಆರಂಭವಾಗಿದ್ದು ಜುಲೈ 19ಕ್ಕೆ ಬೆಳಗ್ಗೆ 11 ಗಂಟೆಯಿಂದ ಸಂಜೆ 3 ಗಂಟೆಯವರೆ ನಾಮಪತ್ರ ಸಲ್ಲಿಕೆ ಮಾಡಬಹುದು.

ಉಪ ರಾಷ್ಟ್ರಪತಿ ಚುನಾವಣೆಗೆ ಅಧಿಕೃತ ಆದೇಶ ಜಾರಿ; ಜುಲೈ 19ರವರೆಗೆ ನಾಮಪತ್ರ ಸಲ್ಲಿಕೆ, ಆಗಸ್ಟ್ 6ಕ್ಕೆ ಚುನಾವಣೆ
ಚುನಾವಣಾ ಆಯೋಗ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 05, 2022 | 4:17 PM

ದೆಹಲಿ: ಚುನಾವಣಾ ಆಯೋಗವು ಉಪ ರಾಷ್ಟ್ರಪತಿ ಚುನಾವಣೆಗೆ (Vice-Presidential election)ಅಧಿಕೃತ ಆದೇಶ ಜಾರಿ ಮಾಡಿದ್ದು  ಆಗಸ್ಟ್ 6ಕ್ಕೆ ಚುನಾವಣೆ ನಡೆಯಲಿದೆ. ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಆರಂಭವಾಗಿದ್ದು ಜುಲೈ 19ಕ್ಕೆ ಬೆಳಗ್ಗೆ 11 ಗಂಟೆಯಿಂದ ಸಂಜೆ 3 ಗಂಟೆಯವರೆ ನಾಮಪತ್ರ ಸಲ್ಲಿಕೆ ಮಾಡಬಹುದು. ನವದೆಹಲಿಯಲ್ಲಿರುವ ಪಾರ್ಲಿಮೆಂಟ್ ಹೌಸ್ ನ ರೂಂನಂ 18ರಲ್ಲಿ ನಾಮಪತ್ರ ಸಲ್ಲಿಸಬಹುದು. ಈ ಚುನಾವಣೆಯ ರಿಟರ್ನಿಂಗ್ ಆಫೀಸರ್ ಆಗಿ ಲೋಕಸಭೆ ಸೆಕ್ರಟರಿ ಜನರಲ್ ಉತ್ಪಲ್ ಕುಮಾರ್ ಸಿಂಗ್ (Utpal Kumar Singh) ಅವರಿಗೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ನಾಮಪತ್ರ ಪರಿಶೀಲನೆ ಜುಲೈ 20ರಂದು ನಡೆಯಸಲಿದ್ದು ಅಂತಿಮ ಪಟ್ಟಿ ಜುಲೈ 22ರಂದು ಪ್ರಕಟವಾಗಲಿದೆ. ಭಾರತದ ರಾಷ್ಟ್ರಪತಿ ಚುನಾವಣೆಯ (Presidential election) ಸಂದರ್ಭದಲ್ಲಿ, ಅರ್ಹ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಮಯದಲ್ಲಿ ಮತದಾರರ ಪಟ್ಟಿಯ ದೃಢೀಕೃತ ಪ್ರತಿ, 15,000 ರೂಪಾಯಿ ಸೇರಿದಂತೆ ಕೆಲವು ದಾಖಲೆಗಳನ್ನು  ಸಲ್ಲಿಸಬೇಕಾಗುತ್ತದೆ. ಭಾರತದ ಉಪರಾಷ್ಟ್ರಪತಿಯ ಚುನಾವಣೆಯ ಸಂದರ್ಭದಲ್ಲಿ, ಸಂಸತ್ತಿನಲ್ಲಿ ಮತದಾನ ನಡೆಯುತ್ತದೆ. ಉಪರಾಷ್ಟ್ರಪತಿ ಮೇಲ್ಮನೆಯ ವಾಸ್ತವಿಕ ಅಧ್ಯಕ್ಷರೂ ಆಗಿರುವುದರಿಂದ ಈ ಚುನಾವಣೆಯಲ್ಲಿ ರಾಜ್ಯಸಭೆಯ ಸದಸ್ಯರು ಭಾಗವಹಿಸುತ್ತಾರೆ.

ಮುಂಬರುವ ಉಪ ರಾಷ್ಟ್ರಪತಿ   ಚುನಾವಣೆಯ ಮತದಾನವು ಆಗಸ್ಟ್ 6, 2022 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ ನಡೆಯಲಿದೆ. ಅದೇ ದಿನ ಫಲಿತಾಂಶಗಳು ಹೊರಬೀಳುವ ನಿರೀಕ್ಷೆಯಿದೆ.  2017 ರಲ್ಲಿ ಎನ್ ಡಿಎ ವೆಂಕಯ್ಯನಾಯ್ಡು ಅವರನ್ನು ನಾಮನಿರ್ದೇಶನ ಮಾಡಿದ್ದು ಅವರು ದೇಶದ 15ನೇ ಉಪರಾಷ್ಟ್ರಪತಿ ಆಗಿದ್ದರು. ಆಗಸ್ಟ್ 10ರಂದು ಅವರ ಅಧಿಕಾರವಧಿ ಕೊನೆಗೊಳ್ಳಲಿದೆ.

Published On - 3:44 pm, Tue, 5 July 22

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು