AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ಬೈದಿದ್ದು ಬಿಜೆಪಿಯವರನ್ನು, ದೇಶದ ಮಾನ ಹೇಗೆ ಹೋಗುತ್ತದೆ: ಸಿದ್ದರಾಮಯ್ಯ ಪ್ರಶ್ನೆ

ರಾಹುಲ್ ಗಾಂಧಿ ಬೈದಿದ್ದು ಬಿಜೆಪಿಯವರನ್ನು. ಇವರನ್ನು ಬೈದ್ರೆ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಾನ ಹೇಗೆ ಹೋಗುತ್ತದೆ. ಇವರಿಂದಲೇ ದೇಶದ ಪ್ರಜಾಪ್ರಭುತ್ವಕ್ಕೆ ಧಕ್ಕೆ ಬಂದಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ರಾಹುಲ್ ಗಾಂಧಿ ಬೈದಿದ್ದು ಬಿಜೆಪಿಯವರನ್ನು, ದೇಶದ ಮಾನ ಹೇಗೆ ಹೋಗುತ್ತದೆ: ಸಿದ್ದರಾಮಯ್ಯ ಪ್ರಶ್ನೆ
ಸಿದ್ದರಾಮಯ್ಯ Image Credit source: theweek.in
ಗಂಗಾಧರ​ ಬ. ಸಾಬೋಜಿ
|

Updated on:Mar 13, 2023 | 6:59 PM

Share

ದಾವಣಗೆರೆ: ರಾಹುಲ್ ಗಾಂಧಿ (Rahul Gandhi) ಬೈದಿದ್ದು ಬಿಜೆಪಿಯವರನ್ನು. ಇವರನ್ನು ಬೈದ್ರೆ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಾನ ಹೇಗೆ ಹೋಗುತ್ತದೆ. ಮೇಲಾಗಿ ಇವರ ಆಡಳಿತದಿಂದ ದೇಶದ ಪ್ರಜಾಪ್ರಭುತ್ವಕ್ಕೆ ಧಕ್ಕೆ ಬಂದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಹಾಜರಾಗುವ ಮುನ್ನ ಮಾತನಾಡಿದ ಅವರು, ನಾರಾಯಣಗೌಡ ಹಾಗೂ ಸೋಮಣ್ಣ ಇಬ್ಬರು ಕಾಂಗ್ರೆಸ್​ಗೆ ಬರುವುದು ನನಗೆ ಗೊತ್ತಿಲ್ಲ. ಆ ವಿಚಾರದ ಬಗ್ಗೆ ನಾನು ಉತ್ತರಿಸಲ್ಲ ಎಂದರು. ಇನ್ನು ದಿ. ಧ್ರುವನಾರಾಯಣರವರ ಪುತ್ರನಿಗೆ ಟಿಕೆಟ್ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಆ ಬಗ್ಗೆ ನೋಡೋಣ ಎಂದರು. ಕಾಂಗ್ರೆಸ್ ಮೊದಲ ಪಟ್ಟಿ ಇದೇ 17ಕ್ಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ವಾತಾವರಣ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂದು ಹೇಳಿದರು.

ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದರೆ ಏನು ಆಗಲ್ಲ 

ರಾಜ್ಯಕ್ಕೆ ಮೋದಿ ಬಂದರೆ ಏನು ಆಗಲ್ಲ. ಕಳೆದ ಸಲ ಕೂಡ ಬಂದಿದ್ದರು. ಇನ್ನು ಮೈಸೂರು-ಬೆಂಗಳೂರು ಹೈವೇ ಮಾಡಿದ್ದು ಯಾರು, ಇನ್ನು ಆಸ್ಕರ್ ಫರ್ನಾಂಡಿಸ್ ಕೇಂದ್ರ ಸಚಿವರಾಗಿದ್ದಾಗ ನಾನು ಮಂಜೂರು‌ ಮಾಡಿಸಿದ್ದು. ಈಗ ಕ್ರೆಡಿಟ್ ತೆಗೆದು ಕೊಳ್ಳುತ್ತಿರುವುದು ಬಿಜೆಪಿಯವರು. ಇವರಿಗೆ ಮಾನ ಮಾರ್ಯಾದೆ ಇದೇಯಾ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: BS Yediyurappa: ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಕಠಿಣ ಶ್ರಮ ವಹಿಸುತ್ತೇವೆ; ಬಿಎಸ್​ ಯಡಿಯೂರಪ್ಪ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನನ್ನ ಬಂಧಿಸಬೇಕಿತ್ತು ಜೊತೆಗೆ ಪಕ್ಷದಿಂದ ಉಚ್ಚಾರಣೆ ಮಾಡಬೇಕಿತ್ತು, ಅದನ್ನು ಬಿಜೆಪಿ ಸರ್ಕಾರ ಮಾಡಿಲ್ಲ. ಇವರೇ ಕುಮ್ಮಕ್ಕು ಕೊಡುತ್ತಿದ್ದು, ಶಾಸಕ ಮಾಡಾಳ್​ ವಿರೂಪಾಕ್ಷಪ್ಪನವರಿ ರಕ್ಷಿಸುತ್ತಿದ್ದಾರೆ. ಬಿಜೆಪಿಯವರು ಭ್ರಷ್ಟಾಚಾರದ ಪರ ಇದ್ದಾರೆ ಎಂದು ಹರಿಹಾಯ್ದರು.

ಇದನ್ನೂ ಓದಿ: ಲಿಂಗಾಯತರು, ವೀರಶೈವರು ಯಾವುದೇ ಕಾರಣಕ್ಕೂ ಕಾಂಗ್ರೆಸ್​ನ್ನು ನಂಬಬಾರದು: ಪ್ರಧಾನಿ ಮೋದಿ

ಸುಮಲತಾಗೆ ಸಿದ್ಧರಾಮಯ್ಯ ಪ್ರಶ್ನೆ 

ಮಂಡ್ಯ ಸಂಸದೆ ಸುಮಲತಾ ಹೇಳುವ ಪ್ರಕಾರ ಏನು ಅಭಿವೃದ್ಧಿ ಆಗಿದೆ. ಬೇಕಾದರೆ ಚರ್ಚೆಗೆ ಬರಲಿ.‌ ದಾಖಲೆ ತರುತ್ತೇವೆ. ರಾಜ್ಯ ಹೆದ್ದಾರಿ ಇರುವುದು ರಾಷ್ಟ್ರೀಯ ಹೆದ್ದಾರಿ ಆಗಿದ್ದು ಯಾವಾಗ, ಗೊತ್ತಿಲ್ಲ ಅಂದರೆ ಏನು ಮಾಡೋಕೆ ಆಗುತ್ತದೆ. ರಾಷ್ಟ್ರೀಯ ಹೆದ್ದಾರಿಗೆ ಅಡಿಗಲ್ಲು ಹಾಕಿದ್ದು ನಾನೇ. ಮೈಸೂರು-ಬೆಂಗಳೂರು ಹೆದ್ದಾರಿ ಅಪೂರ್ಣ ಕಾಮಗಾರಿಯನ್ನು ಚುನಾವಣೆ ಕಾರಣಕ್ಕೆ ಉದ್ಘಾಟನೆ ಮಾಡಲಾಗಿದೆ. ಇನ್ನು ಮೈಸೂರು ಸಂಸದ ಪ್ರತಾಪ್ ಸಿಂಹನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೈವೇ ಬರುವುದು ಕೇವಲ ಏಳು ಕಿಲೋಮೀಟರ್. ಮಾತು ಎತ್ತಿದ್ದರೇ ಪ್ರತಾಪ್ ಸಿಂಹ ಪ್ರತಾಪ್ ಸಿಂಹ ಎನ್ನುತ್ತಾರೆ‌ ಸಿದ್ದರಾಮಯ್ಯ ಟಾಂಗ್ ನೀಡಿದರು.

ವರದಿ: ಬಸವರಾಜ್ ದೊಡ್ಮನಿ, ಟಿವಿ9, ದಾವಣಗೆರೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:50 pm, Mon, 13 March 23

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ