AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಯಾರು? ಸಿದ್ದು-ಡಿಕೆಶಿ ಮುಂದೆ ಗೊಂದಲಗಳಿಗೆ ತೆರೆ ಎಳೆದ ರಾಹುಲ್

ಕಾಂಗ್ರೆಸ್​ನ ಮುಂದಿನ ಸಿಎಂ ಅಭ್ಯರ್ಥಿ ಯಾರು ಎಂಬ ಗೊಂದಲಕ್ಕೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ತೆರೆ ಎಳೆದಿದ್ದಾರೆ.

ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಯಾರು? ಸಿದ್ದು-ಡಿಕೆಶಿ ಮುಂದೆ ಗೊಂದಲಗಳಿಗೆ ತೆರೆ ಎಳೆದ ರಾಹುಲ್
Siddu And DKS
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 08, 2022 | 10:15 PM

ತುಮಕೂರು: ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಆರೇಳು ತಿಂಗಳು ಬಾಕಿ ಇದ್ದು, ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಯಾರು ಎಂಬ ಕುತೂಹಲ ಮೂಡಿದೆ. ಈಗಾಗಲೇ ಮುಂದಿನ ಸಿಎಂ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ಹಲವು ಬಾರಿ ಬಹಿರಂಗವಾಗಿದೆ.

ಮುಂದಿನ​ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕಾಂಗ್ರೆಸ್​ನ ಸಭೆ-ಸಮಾವೇಶಗಳಲ್ಲೂ ಘೋಷಣೆಗಳು ಮೊಳಗುತ್ತಲೇ ಇವೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್​ನ ಮುಂದಿನ ಸಿಎಂ ಅಭ್ಯರ್ಥಿ ಯಾರು ಎಂಬ ಗೊಂದಲಕ್ಕೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ಬಹಳ ದಿನಗಳ ನಂತರ ಬಹಿರಂಗವಾಗಿ ಕಾಣಿಸಿಕೊಂಡ ದೇವೇಗೌಡ, ಎಚ್​ಡಿಕೆ ಬಗ್ಗೆ ಸ್ಫೋಟಕ ಭವಿಷ್ಯ

ತುಮಕೂರು ಜಿಲ್ಲೆಯಲ್ಲಿ ಭಾರತ್​ ಜೋಡೋ ಪಾದಯಾತ್ರೆ ನಡೆಸುತ್ತಿರುವ ರಾಹುಲ್​ ಗಾಂಧಿ ಶನಿವಾರ ಸುದ್ದಿಗೋಷ್ಠಿ ನಡೆಸಿದರು. ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಯಾರು? ಎಂದು ಪ್ರರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್​, ಚುನಾವಣೆ ನಂತರವೇ ಸಿಎಂ ಯಾರೆಂದು ನಿರ್ಧರಿಸಲಾಗುತ್ತೆ. ಸದ್ಯಕ್ಕೆ ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಘೋಷಣೆ ಇಲ್ಲ ಎಂದು ಡಿಕೆಶಿ ಮತ್ತು ಸಿದ್ದು ಎದುರೇ ಸ್ಪಷ್ಟಪಡಿಸಿದರು. ಈ ಮೂಲಕ ಮುಂದಿನ ಸಿಎಂ ಯಾರೆಂಬ ವಿವಾದಕ್ಕೆ ತೆರೆ ಎಳೆದರು.

ಮುಂದಿನ ಸಿಎಂ ವಿಚಾರಕ್ಕೆ ಡಿಕೆಶಿ-ಸಿದ್ದು ನಡುವೆ ನಡೆದ ರಾಜಕೀಯ ಬೆಳವಣಿಗೆಗಳು ಅಷ್ಟಿಷ್ಟಲ್ಲ. ಕೆಲವೊಮ್ಮೆ ಇಬ್ಬರು ನಡುವಿನ ಪರೋಕ್ಷ ಮಾತುಗಳು ತಾರಕಕ್ಕೇರಿದ್ದು ಉಂಟು. ಇನ್ನು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳಿಕೆ ನೀಡಿದ್ದ ನಾಯಕರಿಗೆ ಡಿಕೆಶಿ ನೋಟಿಸ್ ನೀಡಿದ ಉದಾಹರಣೆಗಳು ಇವೆ.

ಇದೀಗ ಒಟ್ಟಿನಲ್ಲಿ ಪರೋಕ್ಷವಾಗಿ ಡಿಕೆಶಿ-ಸಿದ್ದರಾಮಯ್ಯನವರ ಎದುರೇ ಯಾರು ಮುಂದಿನ ಸಿಎಂ ಸಲುವಾಗಿ ಕಿತ್ತಾಡುವುದು ಬೇಡ. ಚುನಾವಣೆ ಫಲಿತಾಂಶ ಮೇಲೆ ಸಿಎಂ ಆಯ್ಕೆಯಾಗಲಿದೆ ಎಂದು ಹೇಳಿದಂತಾಯ್ತು.

ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ