AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಯಾರು? ಸಿದ್ದು-ಡಿಕೆಶಿ ಮುಂದೆ ಗೊಂದಲಗಳಿಗೆ ತೆರೆ ಎಳೆದ ರಾಹುಲ್

ಕಾಂಗ್ರೆಸ್​ನ ಮುಂದಿನ ಸಿಎಂ ಅಭ್ಯರ್ಥಿ ಯಾರು ಎಂಬ ಗೊಂದಲಕ್ಕೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ತೆರೆ ಎಳೆದಿದ್ದಾರೆ.

ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಯಾರು? ಸಿದ್ದು-ಡಿಕೆಶಿ ಮುಂದೆ ಗೊಂದಲಗಳಿಗೆ ತೆರೆ ಎಳೆದ ರಾಹುಲ್
Siddu And DKS
TV9 Web
| Edited By: |

Updated on: Oct 08, 2022 | 10:15 PM

Share

ತುಮಕೂರು: ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಆರೇಳು ತಿಂಗಳು ಬಾಕಿ ಇದ್ದು, ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಯಾರು ಎಂಬ ಕುತೂಹಲ ಮೂಡಿದೆ. ಈಗಾಗಲೇ ಮುಂದಿನ ಸಿಎಂ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ಹಲವು ಬಾರಿ ಬಹಿರಂಗವಾಗಿದೆ.

ಮುಂದಿನ​ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕಾಂಗ್ರೆಸ್​ನ ಸಭೆ-ಸಮಾವೇಶಗಳಲ್ಲೂ ಘೋಷಣೆಗಳು ಮೊಳಗುತ್ತಲೇ ಇವೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್​ನ ಮುಂದಿನ ಸಿಎಂ ಅಭ್ಯರ್ಥಿ ಯಾರು ಎಂಬ ಗೊಂದಲಕ್ಕೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ಬಹಳ ದಿನಗಳ ನಂತರ ಬಹಿರಂಗವಾಗಿ ಕಾಣಿಸಿಕೊಂಡ ದೇವೇಗೌಡ, ಎಚ್​ಡಿಕೆ ಬಗ್ಗೆ ಸ್ಫೋಟಕ ಭವಿಷ್ಯ

ತುಮಕೂರು ಜಿಲ್ಲೆಯಲ್ಲಿ ಭಾರತ್​ ಜೋಡೋ ಪಾದಯಾತ್ರೆ ನಡೆಸುತ್ತಿರುವ ರಾಹುಲ್​ ಗಾಂಧಿ ಶನಿವಾರ ಸುದ್ದಿಗೋಷ್ಠಿ ನಡೆಸಿದರು. ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಯಾರು? ಎಂದು ಪ್ರರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್​, ಚುನಾವಣೆ ನಂತರವೇ ಸಿಎಂ ಯಾರೆಂದು ನಿರ್ಧರಿಸಲಾಗುತ್ತೆ. ಸದ್ಯಕ್ಕೆ ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಘೋಷಣೆ ಇಲ್ಲ ಎಂದು ಡಿಕೆಶಿ ಮತ್ತು ಸಿದ್ದು ಎದುರೇ ಸ್ಪಷ್ಟಪಡಿಸಿದರು. ಈ ಮೂಲಕ ಮುಂದಿನ ಸಿಎಂ ಯಾರೆಂಬ ವಿವಾದಕ್ಕೆ ತೆರೆ ಎಳೆದರು.

ಮುಂದಿನ ಸಿಎಂ ವಿಚಾರಕ್ಕೆ ಡಿಕೆಶಿ-ಸಿದ್ದು ನಡುವೆ ನಡೆದ ರಾಜಕೀಯ ಬೆಳವಣಿಗೆಗಳು ಅಷ್ಟಿಷ್ಟಲ್ಲ. ಕೆಲವೊಮ್ಮೆ ಇಬ್ಬರು ನಡುವಿನ ಪರೋಕ್ಷ ಮಾತುಗಳು ತಾರಕಕ್ಕೇರಿದ್ದು ಉಂಟು. ಇನ್ನು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳಿಕೆ ನೀಡಿದ್ದ ನಾಯಕರಿಗೆ ಡಿಕೆಶಿ ನೋಟಿಸ್ ನೀಡಿದ ಉದಾಹರಣೆಗಳು ಇವೆ.

ಇದೀಗ ಒಟ್ಟಿನಲ್ಲಿ ಪರೋಕ್ಷವಾಗಿ ಡಿಕೆಶಿ-ಸಿದ್ದರಾಮಯ್ಯನವರ ಎದುರೇ ಯಾರು ಮುಂದಿನ ಸಿಎಂ ಸಲುವಾಗಿ ಕಿತ್ತಾಡುವುದು ಬೇಡ. ಚುನಾವಣೆ ಫಲಿತಾಂಶ ಮೇಲೆ ಸಿಎಂ ಆಯ್ಕೆಯಾಗಲಿದೆ ಎಂದು ಹೇಳಿದಂತಾಯ್ತು.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ