AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಯಾರು? ಸಿದ್ದು-ಡಿಕೆಶಿ ಮುಂದೆ ಗೊಂದಲಗಳಿಗೆ ತೆರೆ ಎಳೆದ ರಾಹುಲ್

ಕಾಂಗ್ರೆಸ್​ನ ಮುಂದಿನ ಸಿಎಂ ಅಭ್ಯರ್ಥಿ ಯಾರು ಎಂಬ ಗೊಂದಲಕ್ಕೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ತೆರೆ ಎಳೆದಿದ್ದಾರೆ.

ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಯಾರು? ಸಿದ್ದು-ಡಿಕೆಶಿ ಮುಂದೆ ಗೊಂದಲಗಳಿಗೆ ತೆರೆ ಎಳೆದ ರಾಹುಲ್
Siddu And DKS
TV9 Web
| Edited By: |

Updated on: Oct 08, 2022 | 10:15 PM

Share

ತುಮಕೂರು: ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಆರೇಳು ತಿಂಗಳು ಬಾಕಿ ಇದ್ದು, ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಯಾರು ಎಂಬ ಕುತೂಹಲ ಮೂಡಿದೆ. ಈಗಾಗಲೇ ಮುಂದಿನ ಸಿಎಂ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ಹಲವು ಬಾರಿ ಬಹಿರಂಗವಾಗಿದೆ.

ಮುಂದಿನ​ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕಾಂಗ್ರೆಸ್​ನ ಸಭೆ-ಸಮಾವೇಶಗಳಲ್ಲೂ ಘೋಷಣೆಗಳು ಮೊಳಗುತ್ತಲೇ ಇವೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್​ನ ಮುಂದಿನ ಸಿಎಂ ಅಭ್ಯರ್ಥಿ ಯಾರು ಎಂಬ ಗೊಂದಲಕ್ಕೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ಬಹಳ ದಿನಗಳ ನಂತರ ಬಹಿರಂಗವಾಗಿ ಕಾಣಿಸಿಕೊಂಡ ದೇವೇಗೌಡ, ಎಚ್​ಡಿಕೆ ಬಗ್ಗೆ ಸ್ಫೋಟಕ ಭವಿಷ್ಯ

ತುಮಕೂರು ಜಿಲ್ಲೆಯಲ್ಲಿ ಭಾರತ್​ ಜೋಡೋ ಪಾದಯಾತ್ರೆ ನಡೆಸುತ್ತಿರುವ ರಾಹುಲ್​ ಗಾಂಧಿ ಶನಿವಾರ ಸುದ್ದಿಗೋಷ್ಠಿ ನಡೆಸಿದರು. ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಯಾರು? ಎಂದು ಪ್ರರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್​, ಚುನಾವಣೆ ನಂತರವೇ ಸಿಎಂ ಯಾರೆಂದು ನಿರ್ಧರಿಸಲಾಗುತ್ತೆ. ಸದ್ಯಕ್ಕೆ ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಘೋಷಣೆ ಇಲ್ಲ ಎಂದು ಡಿಕೆಶಿ ಮತ್ತು ಸಿದ್ದು ಎದುರೇ ಸ್ಪಷ್ಟಪಡಿಸಿದರು. ಈ ಮೂಲಕ ಮುಂದಿನ ಸಿಎಂ ಯಾರೆಂಬ ವಿವಾದಕ್ಕೆ ತೆರೆ ಎಳೆದರು.

ಮುಂದಿನ ಸಿಎಂ ವಿಚಾರಕ್ಕೆ ಡಿಕೆಶಿ-ಸಿದ್ದು ನಡುವೆ ನಡೆದ ರಾಜಕೀಯ ಬೆಳವಣಿಗೆಗಳು ಅಷ್ಟಿಷ್ಟಲ್ಲ. ಕೆಲವೊಮ್ಮೆ ಇಬ್ಬರು ನಡುವಿನ ಪರೋಕ್ಷ ಮಾತುಗಳು ತಾರಕಕ್ಕೇರಿದ್ದು ಉಂಟು. ಇನ್ನು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳಿಕೆ ನೀಡಿದ್ದ ನಾಯಕರಿಗೆ ಡಿಕೆಶಿ ನೋಟಿಸ್ ನೀಡಿದ ಉದಾಹರಣೆಗಳು ಇವೆ.

ಇದೀಗ ಒಟ್ಟಿನಲ್ಲಿ ಪರೋಕ್ಷವಾಗಿ ಡಿಕೆಶಿ-ಸಿದ್ದರಾಮಯ್ಯನವರ ಎದುರೇ ಯಾರು ಮುಂದಿನ ಸಿಎಂ ಸಲುವಾಗಿ ಕಿತ್ತಾಡುವುದು ಬೇಡ. ಚುನಾವಣೆ ಫಲಿತಾಂಶ ಮೇಲೆ ಸಿಎಂ ಆಯ್ಕೆಯಾಗಲಿದೆ ಎಂದು ಹೇಳಿದಂತಾಯ್ತು.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್