Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಾನಿ ಕುರಿತ ರಾಹುಲ್ ಗಾಂಧಿಯ ಟೀಕೆಯ ಟ್ವೀಟ್​​ಗೆ ಕುಟುಕಿದ ಅನಿಲ್ ಆಂಟನಿ

ನಾನು ಕುಟುಂಬದ ಬದಲು ಭಾರತ ಮತ್ತು ನಮ್ಮ ಜನರಿಗಾಗಿ ಕೆಲಸ ಮಾಡಲು ಆದ್ಯತೆ ನೀಡಿದ್ದರಿಂದ ಪಕ್ಷ ತೊರೆಯಬೇಕಾಯಿತು. ರಾಹುಲ್ ಗಾಂಧಿ ರಾಷ್ಟ್ರೀಯ ನಾಯಕನಂತೆ ಅಲ್ಲ, ಆನ್‌ಲೈನ್ / ಸಾಮಾಜಿಕ ಮಾಧ್ಯಮ ಸೆಲ್ ಟ್ರೋಲ್‌ನಂತೆ ಮಾತನಾಡುವುದನ್ನು ನೋಡುವುದು ದುಃಖಕರವಾಗಿದೆ ಎಂದ ಅನಿಲ್ ಆಂಟನಿ

ಅದಾನಿ ಕುರಿತ ರಾಹುಲ್ ಗಾಂಧಿಯ ಟೀಕೆಯ ಟ್ವೀಟ್​​ಗೆ ಕುಟುಕಿದ ಅನಿಲ್ ಆಂಟನಿ
ಅನಿಲ್ ಆಂಟನಿ
Follow us
ರಶ್ಮಿ ಕಲ್ಲಕಟ್ಟ
|

Updated on:Apr 08, 2023 | 4:48 PM

ರಾಷ್ಟ್ರೀಯ ಪಕ್ಷವೊಂದರ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಕರೆಯಲ್ಪಡುವ ರಾಹುಲ್ ಗಾಂಧಿ (Rahul Gandhi) ರಾಷ್ಟ್ರೀಯ ನಾಯಕನಂತೆ ಅಲ್ಲ, ಆನ್‌ಲೈನ್ / ಸಾಮಾಜಿಕ ಮಾಧ್ಯಮ ಸೆಲ್ ಟ್ರೋಲ್‌ನಂತೆ ಮಾತನಾಡುವುದನ್ನು ನೋಡುವುದು ದುಃಖಕರವಾಗಿದೆ. ದೇಶ ಕಟ್ಟುವ ಕೆಲಸಕ್ಕಾಗಿ ದಶಕಗಳಿಂದ ಕೊಡುಗೆ ನೀಡಿದ ಈ ದಿಗ್ಗಜರೊಂದಿಗೆ ನನ್ನ ಹೆಸರನ್ನೂ ನೋಡಿ ಪುನೀತನಾದೆ. ನಾನು ಕುಟುಂಬದ ಬದಲು ಭಾರತ ಮತ್ತು ನಮ್ಮ ಜನರಿಗಾಗಿ ಕೆಲಸ ಮಾಡಲು ಆದ್ಯತೆ ನೀಡಿದ್ದರಿಂದ ಪಕ್ಷ ತೊರೆಯಬೇಕಾಯಿತು ಎಂದು ಈಗಷ್ಟೇ ಬಿಜೆಪಿ ಸೇರಿರುವ ಅನಿಲ್ ಆಂಟನಿ (Anil Antony) ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಟ್ವೀಟ್​​ ಗೆ ಪ್ರತಿಕ್ರಿಯೆಯಾಗಿ ಅನಿಲ್ ಈ ಟ್ವೀಟ್ ಮಾಡಿದ್ದಾರೆ. ಗೌತಮ್ ಅದಾನಿ ಅವರ ಶೆಲ್ ಕಂಪನಿಗಳಲ್ಲಿರುವ20 ಸಾವಿರ ಕೋಟಿ ರೂ. ಯಾರದ್ದು ಎಂಬ ತಮ್ಮ ಪ್ರಶ್ನೆಯನ್ನು ಪುನರುಚ್ಚರಿಸಿದ ರಾಹುಲ್ ಗಾಂಧಿ, ಈ ಬಾರಿ ಸೃಜನಾತ್ಮಕ ರೀತಿಯಲ್ಲಿ ಕಾಂಗ್ರೆಸ್ ತೊರೆದ ನಾಯಕರ ಹೆಸರನ್ನು ಉಲ್ಲೇಖಿಸುವ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅವರು ಸತ್ಯವನ್ನು ಮರೆಮಾಚಬೇಕು, ಅದಕ್ಕಾಗಿಯೇ ಅವರು ಪ್ರತಿದಿನ ದಾರಿ ತಪ್ಪಿಸುತ್ತಿರುತ್ತಾರೆ ಎಂದು ರಾಹುಲ್ ಟ್ವೀಟ್ ದಾಳಿ ನಡೆಸಿದ್ದಾರೆ.

ಚಿತ್ರದಲ್ಲಿ ರಾಹುಲ್ ಗಾಂಧಿ ಅದಾನಿ ಎಂಬ ಹೆಸರಿನ ಸ್ಪೆಲಿಂಗ್ ಹೈಲೈಟ್ ಮಾಡಿ, ಸಿಂಧಿಯಾ, ಗುಲಾಮ್, ಕಿರಣ್, ಹಿಮಂತ ಮತ್ತು ಅನಿಲ್ ಹೆಸರನ್ನು ಸೃಜನಾತ್ಮಕವಾಗಿ ಮಾಡಿದ ಗ್ರಾಫಿಕ್‌ನಲ್ಲಿ ಉಲ್ಲೇಖಿಸಿದ್ದಾರೆ.  ಹೆಸರುಗಳು ಜ್ಯೋತಿರಾದಿತ್ಯ ಸಿಂಧಿಯಾ, ಗುಲಾಂ ನಬಿ ಆಜಾದ್, ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟನಿ ಮತ್ತು ಮಾಜಿ ಕಾಂಗ್ರೆಸ್ ನಾಯಕ ಕಿರಣ್ ರೆಡ್ಡಿ ಎಂದು ತೋರುತ್ತದೆ.

ಅನಿಲ್ ಆಂಟನಿ ಬಿಜೆಪಿ ಪಕ್ಷಕ್ಕೆ ಸೇರುವ ಒಂದು ದಿನ ಮೊದಲು ಕಿರಣ್ ರೆಡ್ಡಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡರು. ಮೇ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಮತ್ತು 2024ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ದಕ್ಷಿಣ ಭಾರತದಈ ಪ್ರಮುಖರ ಸೇರ್ಪಡೆಯು ಕಾಂಗ್ರೆಸ್‌ಗೆ ಹೊಡೆತವಾಗಿದೆ.

ಇದನ್ನೂ ಓದಿ: Narendra Modi: ಕೋರ್ಟ್​ಗೆ ಹೋದ ಭ್ರಷ್ಟ ಪಕ್ಷಗಳಿಗೆ ತಕ್ಕ ಶಾಸ್ತಿಯಾಗಿದೆ; ಪ್ರಧಾನಿ ಮೋದಿ ವಾಗ್ದಾಳಿ

ಈಗ ಕೇಂದ್ರ ಸಚಿವರಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ 2020 ರಲ್ಲಿ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:12 pm, Sat, 8 April 23

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ