ಅದಾನಿ ಕುರಿತ ರಾಹುಲ್ ಗಾಂಧಿಯ ಟೀಕೆಯ ಟ್ವೀಟ್​​ಗೆ ಕುಟುಕಿದ ಅನಿಲ್ ಆಂಟನಿ

ನಾನು ಕುಟುಂಬದ ಬದಲು ಭಾರತ ಮತ್ತು ನಮ್ಮ ಜನರಿಗಾಗಿ ಕೆಲಸ ಮಾಡಲು ಆದ್ಯತೆ ನೀಡಿದ್ದರಿಂದ ಪಕ್ಷ ತೊರೆಯಬೇಕಾಯಿತು. ರಾಹುಲ್ ಗಾಂಧಿ ರಾಷ್ಟ್ರೀಯ ನಾಯಕನಂತೆ ಅಲ್ಲ, ಆನ್‌ಲೈನ್ / ಸಾಮಾಜಿಕ ಮಾಧ್ಯಮ ಸೆಲ್ ಟ್ರೋಲ್‌ನಂತೆ ಮಾತನಾಡುವುದನ್ನು ನೋಡುವುದು ದುಃಖಕರವಾಗಿದೆ ಎಂದ ಅನಿಲ್ ಆಂಟನಿ

ಅದಾನಿ ಕುರಿತ ರಾಹುಲ್ ಗಾಂಧಿಯ ಟೀಕೆಯ ಟ್ವೀಟ್​​ಗೆ ಕುಟುಕಿದ ಅನಿಲ್ ಆಂಟನಿ
ಅನಿಲ್ ಆಂಟನಿ
Follow us
|

Updated on:Apr 08, 2023 | 4:48 PM

ರಾಷ್ಟ್ರೀಯ ಪಕ್ಷವೊಂದರ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಕರೆಯಲ್ಪಡುವ ರಾಹುಲ್ ಗಾಂಧಿ (Rahul Gandhi) ರಾಷ್ಟ್ರೀಯ ನಾಯಕನಂತೆ ಅಲ್ಲ, ಆನ್‌ಲೈನ್ / ಸಾಮಾಜಿಕ ಮಾಧ್ಯಮ ಸೆಲ್ ಟ್ರೋಲ್‌ನಂತೆ ಮಾತನಾಡುವುದನ್ನು ನೋಡುವುದು ದುಃಖಕರವಾಗಿದೆ. ದೇಶ ಕಟ್ಟುವ ಕೆಲಸಕ್ಕಾಗಿ ದಶಕಗಳಿಂದ ಕೊಡುಗೆ ನೀಡಿದ ಈ ದಿಗ್ಗಜರೊಂದಿಗೆ ನನ್ನ ಹೆಸರನ್ನೂ ನೋಡಿ ಪುನೀತನಾದೆ. ನಾನು ಕುಟುಂಬದ ಬದಲು ಭಾರತ ಮತ್ತು ನಮ್ಮ ಜನರಿಗಾಗಿ ಕೆಲಸ ಮಾಡಲು ಆದ್ಯತೆ ನೀಡಿದ್ದರಿಂದ ಪಕ್ಷ ತೊರೆಯಬೇಕಾಯಿತು ಎಂದು ಈಗಷ್ಟೇ ಬಿಜೆಪಿ ಸೇರಿರುವ ಅನಿಲ್ ಆಂಟನಿ (Anil Antony) ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಟ್ವೀಟ್​​ ಗೆ ಪ್ರತಿಕ್ರಿಯೆಯಾಗಿ ಅನಿಲ್ ಈ ಟ್ವೀಟ್ ಮಾಡಿದ್ದಾರೆ. ಗೌತಮ್ ಅದಾನಿ ಅವರ ಶೆಲ್ ಕಂಪನಿಗಳಲ್ಲಿರುವ20 ಸಾವಿರ ಕೋಟಿ ರೂ. ಯಾರದ್ದು ಎಂಬ ತಮ್ಮ ಪ್ರಶ್ನೆಯನ್ನು ಪುನರುಚ್ಚರಿಸಿದ ರಾಹುಲ್ ಗಾಂಧಿ, ಈ ಬಾರಿ ಸೃಜನಾತ್ಮಕ ರೀತಿಯಲ್ಲಿ ಕಾಂಗ್ರೆಸ್ ತೊರೆದ ನಾಯಕರ ಹೆಸರನ್ನು ಉಲ್ಲೇಖಿಸುವ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅವರು ಸತ್ಯವನ್ನು ಮರೆಮಾಚಬೇಕು, ಅದಕ್ಕಾಗಿಯೇ ಅವರು ಪ್ರತಿದಿನ ದಾರಿ ತಪ್ಪಿಸುತ್ತಿರುತ್ತಾರೆ ಎಂದು ರಾಹುಲ್ ಟ್ವೀಟ್ ದಾಳಿ ನಡೆಸಿದ್ದಾರೆ.

ಚಿತ್ರದಲ್ಲಿ ರಾಹುಲ್ ಗಾಂಧಿ ಅದಾನಿ ಎಂಬ ಹೆಸರಿನ ಸ್ಪೆಲಿಂಗ್ ಹೈಲೈಟ್ ಮಾಡಿ, ಸಿಂಧಿಯಾ, ಗುಲಾಮ್, ಕಿರಣ್, ಹಿಮಂತ ಮತ್ತು ಅನಿಲ್ ಹೆಸರನ್ನು ಸೃಜನಾತ್ಮಕವಾಗಿ ಮಾಡಿದ ಗ್ರಾಫಿಕ್‌ನಲ್ಲಿ ಉಲ್ಲೇಖಿಸಿದ್ದಾರೆ.  ಹೆಸರುಗಳು ಜ್ಯೋತಿರಾದಿತ್ಯ ಸಿಂಧಿಯಾ, ಗುಲಾಂ ನಬಿ ಆಜಾದ್, ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟನಿ ಮತ್ತು ಮಾಜಿ ಕಾಂಗ್ರೆಸ್ ನಾಯಕ ಕಿರಣ್ ರೆಡ್ಡಿ ಎಂದು ತೋರುತ್ತದೆ.

ಅನಿಲ್ ಆಂಟನಿ ಬಿಜೆಪಿ ಪಕ್ಷಕ್ಕೆ ಸೇರುವ ಒಂದು ದಿನ ಮೊದಲು ಕಿರಣ್ ರೆಡ್ಡಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡರು. ಮೇ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಮತ್ತು 2024ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ದಕ್ಷಿಣ ಭಾರತದಈ ಪ್ರಮುಖರ ಸೇರ್ಪಡೆಯು ಕಾಂಗ್ರೆಸ್‌ಗೆ ಹೊಡೆತವಾಗಿದೆ.

ಇದನ್ನೂ ಓದಿ: Narendra Modi: ಕೋರ್ಟ್​ಗೆ ಹೋದ ಭ್ರಷ್ಟ ಪಕ್ಷಗಳಿಗೆ ತಕ್ಕ ಶಾಸ್ತಿಯಾಗಿದೆ; ಪ್ರಧಾನಿ ಮೋದಿ ವಾಗ್ದಾಳಿ

ಈಗ ಕೇಂದ್ರ ಸಚಿವರಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ 2020 ರಲ್ಲಿ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:12 pm, Sat, 8 April 23

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್