AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯಿಂದ ಅನರ್ಹಗೊಳ್ಳಲು ರಾಹುಲ್ ಗಾಂಧಿಯವರ ದುರಹಂಕಾರವೇ ಕಾರಣ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಒಬಿಸಿ ಸಮುದಾಯದ ಅವಹೇಳನದ ಬಗ್ಗೆ ನ್ಯಾಯಾಲಯ ತೀರ್ಪು ನೀಡಿದಾಗ, ರಾಹುಲ್ ಗಾಂಧಿ ಇಂದು ನ್ಯಾಯಾಲಯವೇ ತಪ್ಪು ಎಂದು ಹೇಳಿದ್ದಾರೆ. ಈ ದೇಶವನ್ನು ಆಳುವುದು ತಮ್ಮ ಜನ್ಮಸಿದ್ಧ ಹಕ್ಕು ಎಂದು ಅವರು ಭಾವಿಸಿದ್ದಾರೆ

ಲೋಕಸಭೆಯಿಂದ ಅನರ್ಹಗೊಳ್ಳಲು ರಾಹುಲ್ ಗಾಂಧಿಯವರ ದುರಹಂಕಾರವೇ ಕಾರಣ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಅಶ್ವಿನಿ ವೈಷ್ಣವ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Mar 29, 2023 | 1:40 PM

Share

ಮುಖ್ಯಾಂಶಗಳು

  • ರಾಹುಲ್ ಗಾಂಧಿ ವಿರುದ್ದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ವಾಗ್ದಾಳಿ
  • ಒಂದು ನಿರ್ದಿಷ್ಟ ಕುಟುಂಬದಲ್ಲಿ ಜನಿಸಿದ ಕಾರಣ ದೇಶವನ್ನು ಆಳುವುದು ತನ್ನ ಜನ್ಮಸಿದ್ಧ ಹಕ್ಕು ಎಂಬ ಭಾವನೆ ರಾಹುಲ್ ಅವರದ್ದು
  • ಈ ದೇಶವನ್ನು ಆಳುವುದು ಅವರ ಜನ್ಮಸಿದ್ಧ ಹಕ್ಕು ಎಂದು ರಾಹುಲ್ ಭಾವಿಸುತ್ತಾರೆ

ಲೋಕಸಭೆಯಿಂದ (Loksabha) ಅನರ್ಹಗೊಳ್ಳಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ (Rahul Gandhi) ದುರಹಂಕಾರವೇ ಕಾರಣ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಹೇಳಿದ್ದಾರೆ. ರಾಹುಲ್ ನಿರ್ದಿಷ್ಟ ಕುಟುಂಬದಲ್ಲಿ ಜನಿಸಿರುವುದರಿಂದ ದೇಶವನ್ನು ಆಳುವುದು ತನ್ನ ಜನ್ಮಸಿದ್ಧ ಹಕ್ಕು ಎಂದು ಭಾವಿಸಿದ್ದರು ಎಂದು ಸಚಿವರು ವಾಗ್ದಾಳಿ ನಡೆಸಿದ್ದಾರೆ.ರಾಹುಲ್ ಗಾಂಧಿ ಅವರ ದುರಹಂಕಾರದ ಕಾರಣ ಅವರನ್ನು ಅನರ್ಹಗೊಳಿಸಲಾಗಿದೆ. ಈ ದೇಶವನ್ನು ಆಳುವುದು ಅವರ ಜನ್ಮಸಿದ್ಧ ಹಕ್ಕು ಎಂದು ಅವರು ಭಾವಿಸುತ್ತಾರೆ. ಇದೇ ಅವರ ಮನಸ್ಸಿನಲ್ಲಿನ ಅಹಂಕಾರಕ್ಕೂ ಕಾರಣ ಎಂದು ವೈಷ್ಣವ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಒಬಿಸಿ ಸಮುದಾಯದ ಅವಹೇಳನದ ಬಗ್ಗೆ ನ್ಯಾಯಾಲಯ ತೀರ್ಪು ನೀಡಿದಾಗ, ರಾಹುಲ್ ಗಾಂಧಿ ಇಂದು ನ್ಯಾಯಾಲಯವೇ ತಪ್ಪು ಎಂದು ಹೇಳಿದ್ದಾರೆ. ಈ ದೇಶವನ್ನು ಆಳುವುದು ತಮ್ಮ ಜನ್ಮಸಿದ್ಧ ಹಕ್ಕು ಎಂದು ಅವರು ಭಾವಿಸಿದ್ದಾರೆ. ಅವರು ಹಕ್ಕು ರಾಜಕಾರಣ ಮಾಡುತ್ತಾರೆ. ಅವರು ಒಂದು ನಿರ್ದಿಷ್ಟ ಕುಟುಂಬದಲ್ಲಿ ಜನಿಸಿದ ಕಾರಣ ದೇಶವನ್ನು ಆಳುವುದು ತನ್ನ ಜನ್ಮಸಿದ್ಧ ಹಕ್ಕು ಎಂದು ಭಾವಿಸಿದ್ದು ಸಂವಿಧಾನ, ನ್ಯಾಯಾಲಯ ಮತ್ತು ಸಂಸತ್ತಿನ ಮೇಲೆ ತಾವು ಎಂದು ಅಂದುಕೊಂಡಿದ್ದಾರೆ ಎಂದು ವೈಷ್ಣವ್ ಅವರನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.

ಅವರು ತನ್ನನ್ನು ತಾನು ದೇಶದ ಸಂಸ್ಥೆಗಳಿಗಿಂತ ಹೆಚ್ಚು ಎಂದು ಪರಿಗಣಿಸುತ್ತಾರೆ. ಯಾವುದೇ ನ್ಯಾಯಾಲಯವು ತನ್ನ ವಿರುದ್ಧ ತೀರ್ಪು ನೀಡಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಭಾವಿಸುತ್ತಾರೆ. ಅವರು ಅರ್ಹತೆಯ ಭಾವನೆಯೊಂದಿಗೆ ರಾಜಕೀಯದಲ್ಲಿರುವ ಕಾರಣ ಸಂವಿಧಾನದಲ್ಲಿ ಅನರ್ಹಗೊಳಿಸುವ ಅವಕಾಶವನ್ನು ಅನ್ವಯಿಸಬಾರದು ಎಂದು ಅವರು ಭಾವಿಸುತ್ತಾರೆ ಎಂದು ಕೇಂದ್ರ ರೈಲ್ವೆ ಸಚಿವರು ಹೇಳಿದ್ದಾರೆ. ಅದಾನಿ ವಿಷಯ ಮತ್ತು ರಾಹುಲ್ ಗಾಂಧಿ ಅವರ ಅನರ್ಹತೆಗೆ ಸಂಬಂಧಿಸಿದಂತೆ ಕೇಂದ್ರದ ವಿರುದ್ಧ ಒಂದಾಗುತ್ತಿರುವ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ವೈಷ್ಣವ್, ಎಲ್ಲಾ “ಭ್ರಷ್ಟರು” ಒಂದೇ ವೇದಿಕೆಯಲ್ಲಿ ಒಟ್ಟುಗೂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಪಂಜಾಬ್​​ನ ಹೋಶಿಯಾರ್‌ಪುರ್​​ನಲ್ಲಿ ಪೊಲೀಸ್ ಕಾರ್ಯಾಚರಣೆ: ಅಮೃತಪಾಲ್ ಸಿಂಗ್ ಶರಣಾಗುವ ಸಾಧ್ಯತೆ

ಮಂಗಳವಾರ ದೆಹಲಿಯಲ್ಲಿ ಬಿಜೆಪಿ ಕಚೇರಿ ಉದ್ಘಾಟಿಸಿದ ಮಾತನಾಡಿದ ಪ್ರಧಾನಿ ಭ್ರಷ್ಟಾಚಾರದಲ್ಲಿ ಆಳವಾಗಿ ಬೇರೂರಿರುವವರೆಲ್ಲರೂ ಒಗ್ಗೂಡಿ ದೇಶದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ಪ್ರತಿಪಕ್ಷಗಳ ವಿರುದ್ಧದ ವಾಗ್ದಾಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿಯವರು “ಭ್ರಷ್ಟಾಚಾರಿ ಭಗವೋ ಅಭಿಯಾನ” (ಭ್ರಷ್ಟರನ್ನು ಓಡಿಸುವ ಅಭಿಯಾನವನ್ನು ) ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅದೇ ವೇಳೆ ಮೋದಿ ಭ್ರಷ್ಟಾಚಾರ ವಿರೋಧಿ ಎಂದು ಬಿಂಬಿಸುವುದನ್ನು ನಿಲ್ಲಿಸಬೇಕು ಎಂದು ಖರ್ಗೆ ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು