AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​ ಗಾಂಧಿ ಅರ್ಜಿ ವಜಾ: ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದು ದೊಡ್ಡ ಅವಮಾನ ಎಂದ ಡಿಸಿಎಂ ಡಿಕೆ ಶಿವಕುಮಾರ್​

ಗುಜರಾತ್ ಹೈಕೋರ್ಟ್​ನಿಂದ ರಾಹುಲ್ ಗಾಂಧಿ ಅರ್ಜಿ ವಜಾ ವಿಚಾರವಾಗಿ ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಪ್ರತಿಕ್ರಿಯೆ ನೀಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದು ದೊಡ್ಡ ಅವಮಾನ. ಈ ಕುರಿತಾಗಿ ನಮ್ಮ ಹೋರಾಟ ಮುಂದುವರಿಯುತ್ತೆ ಎಂದಿದ್ದಾರೆ.

Anil Kalkere
| Edited By: |

Updated on: Jul 07, 2023 | 5:59 PM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್​ ನೇಮ್​ ವಿಚಾರವಾಗಿ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಗುಜರಾತ್​ ಹೈಕೋರ್ಟ್​​ ವಜಾ ಮಾಡಿದೆ. ಈ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (Dk Shivakumar)​ ಹೇಳಿಕೆ ನೀಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದು ದೊಡ್ಡ ಅವಮಾನ ಎಂದು ಹೇಳಿದ್ದಾರೆ.

ಇದು ಬಿಜೆಪಿಯ ಕುತಂತ್ರ ಎಂದ ಡಿ.ಕೆ.ಶಿವಕುಮಾರ್

ವಿಧಾನಸೌಧದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ 7 ಲಕ್ಷ ಲೀಡ್​ನಲ್ಲಿ ಗೆದ್ದಿದ್ದಾರೆ. ಗಾಂಧಿ ಕುಟುಂಬ ದೇಶಕ್ಕೆ ತ್ಯಾಗ ಮಾಡಿದೆ. ನಮ್ಮ ರಾಜ್ಯದಲ್ಲಿ ಭಾಷಣ ಮಾಡಿದ್ದಕ್ಕೆ ರಾಹುಲ್ ವಿರುದ್ಧ ‌ಕೇಸ್​ ಹಾಕಿದ್ದಾರೆ. ಇದು ಬಿಜೆಪಿಯ ಕುತಂತ್ರ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಮಂಡಿಸಿದ ಬಜೆಟ್​ನಲ್ಲಿ ವಿಶೇಷತೆ ಏನಿಲ್ಲ: ಆದಾಯ ಹೆಚ್ಚಿಸಲು ಅಬಕಾರಿ ಸುಂಕ ಹೆಚ್ಚಳ ಎಂದ ಮಾಜಿ ಸಿಎಂ HD ಕುಮಾರಸ್ವಾಮಿ

ನಮ್ಮ ಹೋರಾಟ ಮುಂದುವರಿಯುತ್ತೆ

ರಾಹುಲ್, ಸೋನಿಯಾ ಗಾಂಧಿಗೆ ಪ್ರಧಾನಿ ಆಗುವ ಅವಕಾಶವಿತ್ತು. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡಿದ್ದರು. ಈ ಮೂಲಕ ರಾಹುಲ್ ದೇಶ ಒಗ್ಗೂಡಿಸುವ ಕೆಲಸ ಮಾಡಿದ್ದಾರೆ. ಇದನ್ನು ಸಹಿಸದೇ ಲೋಕಸಭೆ ಸದಸ್ಯತ್ವದಿಂದ ವಜಾ ಮಾಡಿಸಿದ್ದಾರೆ. ಸುಪ್ರೀಂಕೋರ್ಟ್​ನಲ್ಲಿ ನ್ಯಾಯ ಸಿಗುತ್ತೆ ಎಂಬ ವಿಶ್ವಾಸ ಇದೆ. ಸುರಿಯುವ ಮಳೆ ನಡುವೆಯೂ ಪ್ರತಿಭಟನೆ ಮಾಡಿದ್ದೇವೆ. ನಮ್ಮ ಹೋರಾಟ ಮುಂದುವರಿಯುತ್ತೆ ಎಂದು ಹೇಳಿದರು.

ಬೊಮ್ಮಾಯಿ ಮಂಡಿಸಿದ್ದ ಬಜೆಟ್​​ಗೆ ಒಂದು ರೂಪ

ಬಜೆಟ್ ಮಂಡನೆ ಬಗ್ಗೆ ವಿಪಕ್ಷಗಳ ಟೀಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪ್ರಣಾಳಿಕೆ ಭರವಸೆಗಳನ್ನು ಬಜೆಟ್​​​ನಲ್ಲಿ ಘೋಷಣೆ ಮಾಡಿದ್ದೇವೆ. ರಾಜ್ಯದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೆವೆ.

ಇದನ್ನೂ ಓದಿ: Karnataka Budget 2023: ನಮ್ಮ ಭರವಸೆಗಳು ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಭಿನ್ನವಾಗಿವೆ: ಸಿದ್ದರಾಮಯ್ಯ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದ ಬಜೆಟ್​​ಗೆ ಒಂದು ರೂಪ ಕೊಟ್ಟಿದ್ದೇವೆ. ಬ್ರ್ಯಾಂಡ್​​ ಬೆಂಗಳೂರು ಹೆಸರು ಉಳಿಸುವ ಕೆಲಸ ಮಾಡುತ್ತೇವೆ. ಸಂಪನ್ಮೂಲಗಳನ್ನು ಕ್ರೋಢೀಕರಿಸುವುದು ನಮಗೆ ಗೊತ್ತಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್