AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​ ಗಾಂಧಿ ಅರ್ಜಿ ವಜಾ: ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದು ದೊಡ್ಡ ಅವಮಾನ ಎಂದ ಡಿಸಿಎಂ ಡಿಕೆ ಶಿವಕುಮಾರ್​

ಗುಜರಾತ್ ಹೈಕೋರ್ಟ್​ನಿಂದ ರಾಹುಲ್ ಗಾಂಧಿ ಅರ್ಜಿ ವಜಾ ವಿಚಾರವಾಗಿ ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಪ್ರತಿಕ್ರಿಯೆ ನೀಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದು ದೊಡ್ಡ ಅವಮಾನ. ಈ ಕುರಿತಾಗಿ ನಮ್ಮ ಹೋರಾಟ ಮುಂದುವರಿಯುತ್ತೆ ಎಂದಿದ್ದಾರೆ.

Anil Kalkere
| Edited By: |

Updated on: Jul 07, 2023 | 5:59 PM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್​ ನೇಮ್​ ವಿಚಾರವಾಗಿ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಗುಜರಾತ್​ ಹೈಕೋರ್ಟ್​​ ವಜಾ ಮಾಡಿದೆ. ಈ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (Dk Shivakumar)​ ಹೇಳಿಕೆ ನೀಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದು ದೊಡ್ಡ ಅವಮಾನ ಎಂದು ಹೇಳಿದ್ದಾರೆ.

ಇದು ಬಿಜೆಪಿಯ ಕುತಂತ್ರ ಎಂದ ಡಿ.ಕೆ.ಶಿವಕುಮಾರ್

ವಿಧಾನಸೌಧದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ 7 ಲಕ್ಷ ಲೀಡ್​ನಲ್ಲಿ ಗೆದ್ದಿದ್ದಾರೆ. ಗಾಂಧಿ ಕುಟುಂಬ ದೇಶಕ್ಕೆ ತ್ಯಾಗ ಮಾಡಿದೆ. ನಮ್ಮ ರಾಜ್ಯದಲ್ಲಿ ಭಾಷಣ ಮಾಡಿದ್ದಕ್ಕೆ ರಾಹುಲ್ ವಿರುದ್ಧ ‌ಕೇಸ್​ ಹಾಕಿದ್ದಾರೆ. ಇದು ಬಿಜೆಪಿಯ ಕುತಂತ್ರ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಮಂಡಿಸಿದ ಬಜೆಟ್​ನಲ್ಲಿ ವಿಶೇಷತೆ ಏನಿಲ್ಲ: ಆದಾಯ ಹೆಚ್ಚಿಸಲು ಅಬಕಾರಿ ಸುಂಕ ಹೆಚ್ಚಳ ಎಂದ ಮಾಜಿ ಸಿಎಂ HD ಕುಮಾರಸ್ವಾಮಿ

ನಮ್ಮ ಹೋರಾಟ ಮುಂದುವರಿಯುತ್ತೆ

ರಾಹುಲ್, ಸೋನಿಯಾ ಗಾಂಧಿಗೆ ಪ್ರಧಾನಿ ಆಗುವ ಅವಕಾಶವಿತ್ತು. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡಿದ್ದರು. ಈ ಮೂಲಕ ರಾಹುಲ್ ದೇಶ ಒಗ್ಗೂಡಿಸುವ ಕೆಲಸ ಮಾಡಿದ್ದಾರೆ. ಇದನ್ನು ಸಹಿಸದೇ ಲೋಕಸಭೆ ಸದಸ್ಯತ್ವದಿಂದ ವಜಾ ಮಾಡಿಸಿದ್ದಾರೆ. ಸುಪ್ರೀಂಕೋರ್ಟ್​ನಲ್ಲಿ ನ್ಯಾಯ ಸಿಗುತ್ತೆ ಎಂಬ ವಿಶ್ವಾಸ ಇದೆ. ಸುರಿಯುವ ಮಳೆ ನಡುವೆಯೂ ಪ್ರತಿಭಟನೆ ಮಾಡಿದ್ದೇವೆ. ನಮ್ಮ ಹೋರಾಟ ಮುಂದುವರಿಯುತ್ತೆ ಎಂದು ಹೇಳಿದರು.

ಬೊಮ್ಮಾಯಿ ಮಂಡಿಸಿದ್ದ ಬಜೆಟ್​​ಗೆ ಒಂದು ರೂಪ

ಬಜೆಟ್ ಮಂಡನೆ ಬಗ್ಗೆ ವಿಪಕ್ಷಗಳ ಟೀಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪ್ರಣಾಳಿಕೆ ಭರವಸೆಗಳನ್ನು ಬಜೆಟ್​​​ನಲ್ಲಿ ಘೋಷಣೆ ಮಾಡಿದ್ದೇವೆ. ರಾಜ್ಯದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೆವೆ.

ಇದನ್ನೂ ಓದಿ: Karnataka Budget 2023: ನಮ್ಮ ಭರವಸೆಗಳು ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಭಿನ್ನವಾಗಿವೆ: ಸಿದ್ದರಾಮಯ್ಯ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದ ಬಜೆಟ್​​ಗೆ ಒಂದು ರೂಪ ಕೊಟ್ಟಿದ್ದೇವೆ. ಬ್ರ್ಯಾಂಡ್​​ ಬೆಂಗಳೂರು ಹೆಸರು ಉಳಿಸುವ ಕೆಲಸ ಮಾಡುತ್ತೇವೆ. ಸಂಪನ್ಮೂಲಗಳನ್ನು ಕ್ರೋಢೀಕರಿಸುವುದು ನಮಗೆ ಗೊತ್ತಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ