AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ ವಿಧಾನಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, 7 ಸಂಸದರು ಕಣಕ್ಕೆ

ರಾಜಸ್ಥಾನ ವಿಧಾನಸಭಾ ಚುನಾವಣೆಗೆ (Rajasthan Assembly Elections) ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ, ಅದರಲ್ಲಿ 7 ಸಂಸದರನ್ನು ಕಣಕ್ಕಿಳಿಸಿದೆ ಎಂದು ವರದಿ ಹೇಳಿದೆ.

ರಾಜಸ್ಥಾನ ವಿಧಾನಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, 7 ಸಂಸದರು ಕಣಕ್ಕೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Oct 09, 2023 | 5:17 PM

Share

ಜೈಪುರ್, ಅ.9: ಇಂದು ಪಂಚರಾಜ್ಯಗಳ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಇದೀಗ ರಾಜಸ್ಥಾನ ವಿಧಾನಸಭಾ ಚುನಾವಣೆಗೆ (Rajasthan Assembly Elections) ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ, ಅದರಲ್ಲಿ 7 ಸಂಸದರನ್ನು ಕಣಕ್ಕಿಳಿಸಿದೆ ಎಂದು ವರದಿ ಹೇಳಿದೆ. ಈ ಪಟ್ಟಿಯಲ್ಲಿ 7 ಸಂಸದರು ಸೇರಿದಂತೆ ಒಟ್ಟು 41 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಈ ಬಾರಿಯ ರಾಜಸ್ಥಾನ ಚುನಾವಣೆಯಲ್ಲಿ ಭಾರೀ ಪೈಪೋಟಿ  ನಡೆಯಲಿದ್ದು, ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವುದು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇನ್ನು ಈ ಪಟ್ಟಿಯಲ್ಲಿ ಹಾಲಿ ಸಂಸದರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಸಂಸದರುಗಳಾದ ರಾಜ್ಯವರ್ಧನ್ ಸಿಂಗ್ ರಾಥೋಡ್ ಝೋತ್ವಾರಾದಿಂದ, ದಿಯಾ ಕುಮಾರಿ ವಿದ್ಯಾಧರ್ ನಗರದಿಂದ, ಬಾಬಾ ಬಾಲಕನಾಥ್ ತಿಜಾರಾದಿಂದ, ನರೇಂದ್ರ ಕುಮಾರ್ ಮಾಂಡವಾದಿಂದ, ಡಾ ಕಿರೋಡಿ ಲಾಲ್ ಮೀನಾ ಸವಾಯಿ ಮಾಧೋಪುರದಿಂದ, ಭಾಗೀರಥ್ ಚೌಧರಿ ಕಿಶನ್‌ಗಢದಿಂದ ಮತ್ತು ದೇವ್ಜಿ ಪಟೇಲ್ ಸಂಚೋರ್‌ನಿಂದ ಸ್ಪರ್ಧಿಸಲಿದ್ದಾರೆ.

ನವೆಂಬರ್ 23 ರಂದು ರಾಜಸ್ಥಾನದಲ್ಲಿ ಒಂದು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್​​ 3ರಂದು ಮತಏಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್​​ ಕುಮಾರ್ ಇಂದು ಪ್ರತಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಜಸ್ಥಾನದಲ್ಲಿ 200 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಇನ್ನು ಈ ಚುನಾವಣೆ ಭಾರೀ ಕುತೂಹಲ ಸೃಷ್ಟಿಸಿದ್ದು, ಬಿಜೆಪಿ ಮತ್ತು ಪ್ರಸ್ತುತ ಆಡಳಿತ ಪಕ್ಷ ಕಾಂಗ್ರೆಸ್​​ ನೇರ ನೇರೆ ಹಣಾಹಣಿ ನಡೆಯಲಿದೆ.

ಇದನ್ನೂ ಓದಿ: 64 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ, ರಾಜನಂದಗಾಂವ್‌ನಿಂದ ರಮಣ್ ಸಿಂಗ್ ಮತ್ತೆ ಸ್ಪರ್ಧೆ

2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 100 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ 73 ಸ್ಥಾನಗಳಲ್ಲಿ ತೃಪ್ತಿ ಪಡೆದುಕೊಂಡಿತ್ತು. ಇನ್ನು ಬಿಎಸ್ಪಿ 6 ಸ್ಥಾನ, ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ (ಆರ್‌ಎಲ್‌ಪಿ) 3 ಸ್ಥಾನ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಮತ್ತು ಭಾರತೀಯ ಬುಡಕಟ್ಟು ಪಕ್ಷ (ಬಿಟಿಪಿ) ತಲಾ 2 ಸ್ಥಾನಗಳನ್ನು ಪಡೆದಿತ್ತು. ಇನ್ನು ಈ ಬಾರಿ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಕಾದುನೋಡಬೇಕಿದೆ.  ಕಾಂಗ್ರೆಸ್​ ಆಡಳಿತದ ಅನೇಕ ವೈಪಲ್ಯಗಳು ಇದೆ ಎಂದು ಬಿಜೆಪಿ ಹೇಳಿದೆ. ಜತೆಗೆ ಬಿಜೆಪಿ ಕೂಡ ಭಾರೀ ರಣತಂತ್ರವನ್ನು ಮಾಡಿದ್ದು, ಶತಯಗತಾಯ ಈ ಬಾರಿ ಅಧಿಕಾರಕ್ಕೆ ಬರಲೇಬೇಕು ಎಂದು ಶಪಥ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:48 pm, Mon, 9 October 23

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್