AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಡಿ.ಬಿ.ಇನಾಮ್‌ದಾರ್‌ ಜತೆ ಊಟ ಸೇವಿಸಿದ ರಾಜನಾಥ್‌ ಸಿಂಗ್

ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿದ್ದ ಕೇಂದ್ರ ರಕ್ಷಣಾ ಇಲಾಖೆ ಸಚಿವ ರಾಜನಾಥ್ ಸಿಂಗ್​ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಡಿ.ಬಿ.ಇನಾಮ್‌ದಾರ್‌ ಜೊತೆ ಊಟ ಮಾಡಿದ್ದಾರೆ.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಡಿ.ಬಿ.ಇನಾಮ್‌ದಾರ್‌ ಜತೆ ಊಟ ಸೇವಿಸಿದ ರಾಜನಾಥ್‌ ಸಿಂಗ್
ರಾಜನಾಥ್‌ ಸಿಂಗ್ ಭೋಜನ
ಗಂಗಾಧರ​ ಬ. ಸಾಬೋಜಿ
|

Updated on:Mar 02, 2023 | 5:24 PM

Share

ಬೆಳಗಾವಿ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿದ್ದ ಕೇಂದ್ರ ರಕ್ಷಣಾ ಇಲಾಖೆ ಸಚಿವ ರಾಜನಾಥ್ ಸಿಂಗ್​​ (Rajnath Singh) ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಡಿ.ಬಿ.ಇನಾಮ್‌ದಾರ್‌ ಜೊತೆ ಊಟ ಮಾಡಿದ್ದಾರೆ. ಜಿಲ್ಲೆಯ ಕಿತ್ತೂರು ಹೊರವಲಯದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಭೋಜನ ಮಾಡಿದ್ದಾರೆ. ಡಿ.ಬಿ ಇನಾಮದಾರ್​ ಕಿತ್ತೂರು ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ ಹಾಗೂ ಪ್ರಲ್ಹಾದ್ ಜೋಶಿ ಸಾಥ್​ ನೀಡಿದರು.

ಇಂದು ಬಿಜೆಪಿಗೆ ಶುಭ ದಿನ: ರಾಜನಾಥ್ ಸಿಂಗ್

ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಎರಡನೇ ರಥಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಚಾಲನೆ ನೀಡಿದರು. ಬಳಿಕ ಭಾಷಣ ಮಾಡಿದ ಅವರು, ಕರ್ನಾಟಕದ ಎಲ್ಲ ಜನರಿಗೆ ನಮಸ್ಕಾರ ಎಂದು ಕನ್ನಡಲ್ಲೇ ಮಾತು ಆರಂಭಿಸಿದರು. ಇಂದು ಬಿಜೆಪಿಗೆ ಶುಭ ದಿನ ಆಗಿದೆ. ತ್ರಿಪುರಾ, ನಾಗಾಲ್ಯಾಂಡ್​​ನಲ್ಲಿ ಬಿಜೆಪಿ ಗೆದ್ದು ಸರ್ಕಾರ ರಚನೆ ಮಾಡಲಿದೆ. ಮೇಘಾಲಯದಲ್ಲಿ ಈಗಾಗಲೇ ಹೆಚ್ಚು ಸ್ಥಾನ ದೊರೆತಿವೆ ಎಂದರು.

ಇದನ್ನೂ ಓದಿ: Belagavi: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ರಾಜನಾಥ್ ಸಿಂಗ್​ರಿಂದ ಬಿಎಸ್​ವೈ ಗುಣಗಾನ

ಬಸವಣ್ಣ, ರನ್ನ ಪೊನ್ನ, ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣಯನ್ನು ಅವರನ್ನು ಸ್ಮರಿಸಿದ ಸಿಂಗ್, ರಾಯಣ್ಣ ಪ್ರತಿಮೆ, ಸಮಾಧಿಗೆ ಮಾಲಾರ್ಪಣೆ ಮಾಡಿ ನಾನು ಧನ್ಯನಾಗಿದ್ದೇನೆ ಎಂದರು. ಜತೆಗೆ ಯೋಧ ಹಣಮಂತಪ್ಪನ ಅವರ ಶೌರ್ಯವನ್ನೂ ಸ್ಮರಿಸಿದರು.

ಕರ್ನಾಟಕ ದಕ್ಷಿಣ ಭಾರತದ ನಂಬರ್ ಒನ್ ರಾಜ್ಯ

ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಕರ್ನಾಟಕವನ್ನು ದಕ್ಷಿಣ ಭಾರತದ ನಂಬರ್ ಒನ್ ರಾಜ್ಯವನ್ನಾಗಿ ಮಾಡಲಿದ್ದೇವೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದ ಸುಂದರ ಏರ್ಪೋರ್ಟ್ ಉದ್ಘಾಟನೆ ಮಾಡಿದ್ದಾರೆ. ಅಷ್ಟೇ ಅಲ್ಲ ರಸ್ತೆ ಸಂಪರ್ಕ ವಿಚಾರದಲ್ಲಿಯೂ ನಮ್ಮ ಸರ್ಕಾರ ಅದ್ಭುತ ಕೆಲಸ ಮಾಡಿದೆ. 50 ವರ್ಷಗಳಲ್ಲಿ ಕಾಂಗ್ರೆಸ್ ಮಾಡದ ಕೆಲಸವನ್ನು 9 ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಚುನಾವಣೆ ಘೋಷಣೆ ಬಳಿಕ ಪ್ರಿಯಾಂಕಾ, ರಾಹುಲ್​ರಿಂದ ರಾಜ್ಯದಲ್ಲಿ ಪ್ರಚಾರ: ಸತೀಶ್ ಜಾರಕಿಹೊಳಿ

ಕರ್ನಾಟಕದಲ್ಲಿ ಹೆಲಿಕ್ಯಾಪ್ಟರ್ ಸಿದ್ಧಪಡಿಸುವ ಕಾರ್ಖಾನೆ ಆರಂಭವಾಗಿದೆ. ಇಂಡಸ್ಟ್ರೀಸ್ ಕಾರಿಡಾರ್ ಮೂಲಕ ರಾಜ್ಯದ ಯುವಕರಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ. ಕರ್ನಾಟಕದಲ್ಲಿ ಮೂರು ಇಂಡಸ್ಟ್ರೀಸ್ ಕಾರಿಡಾರ್ ಮಾಡಲಾಗಿದೆ. ಮನೆ, ಜಮೀನಿಗೆ ನೀರು ಕೊಡುವ ಯೋಜನೆ ರೂಪಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 5:24 pm, Thu, 2 March 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ