AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha Election: ಬಿಜೆಪಿಯ ಲೆಹರ್​ ಸಿಂಗ್​ಗೆ ಮತ ಹಾಕಿದ ಜೆಡಿಎಸ್ ಶಾಸಕ ಎಸ್​ಆರ್ ಶ್ರೀನಿವಾಸ್

ಹೆಸರು ಮುಚ್ಚಿಟ್ಟು ರೇವಣ್ಣಗೆ ಖಾಲಿ ಪತ್ರ ತೋರಿಸಿದ್ದ ಶ್ರೀನಿವಾಸ್ ಲಹರ್​ಸಿಂಗ್​ಗೆ ಮೊದಲ ಮತ ಹಾಕಿದ್ದರು.

Rajya Sabha Election: ಬಿಜೆಪಿಯ ಲೆಹರ್​ ಸಿಂಗ್​ಗೆ ಮತ ಹಾಕಿದ ಜೆಡಿಎಸ್ ಶಾಸಕ ಎಸ್​ಆರ್ ಶ್ರೀನಿವಾಸ್
ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್
TV9 Web
| Edited By: |

Updated on:Jun 10, 2022 | 8:51 PM

Share

ಬೆಂಗಳೂರು: ಕುಮಾರಸ್ವಾಮಿ ವಿರುದ್ಧ ಅಸಮಾಧಾನಗೊಂಡಿರುವ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್, ಬಿಜೆಪಿ ಅಭ್ಯರ್ಥಿ ಲೆಹರ್​ ಸಿಂಗ್ ಅವರಿ​ಗೆ​ ಮತಹಾಕಿದ್ದಾರೆ. ಹೆಸರು ಮುಚ್ಚಿಟ್ಟು ರೇವಣ್ಣಗೆ ಖಾಲಿ ಪತ್ರ ತೋರಿಸಿದ್ದ ಶ್ರೀನಿವಾಸ್ ಲೆಹರ್​ಸಿಂಗ್​ಗೆ ಮೊದಲ ಮತ ಹಾಕಿದ್ದರು. ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ ಸಹ ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಕೊಟ್ಟಿದ್ದರು. ಇದೀಗ ಎಸ್​.ಆರ್.ಶ್ರೀನಿವಾಸ್ ಸಹ ಅಡ್ಡ ಮತದಾನ ಮಾಡಿರುವುದು ಜಗಜ್ಜಾಹೀರಾಗಿದೆ.

ನಾನು ಜೆಡಿಎಸ್​ಗೆ ಮತ ನೀಡಿದ್ದೇನೆ. ಖಾಲಿ‌ ಬ್ಯಾಲೆಟ್ ಪೇಪರ್ ಹಾಕಿಲ್ಲ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ತುಮಕೂರಿನಲ್ಲಿ ಇಂದು ಮಧ್ಯಾಹ್ನ ಪ್ರತಿಕ್ರಿಯಿಸಿದ್ದರು. ಸಂಜೆಯವರೆಗೂ ಕಾದು ನೋಡಿದರೆ ವಿಷಯ ಏನೆಂದು ಸ್ಪಷ್ಟವಾಗಲಿದೆ. ನಮ್ಮ ನಾಯಕರಿಗೆ ಯಾಕೆ ಅಸಮಾಧಾನ ಇದೆಯೋ ಗೊತ್ತಿಲ್ಲ. ನಿನ್ನೆ ಸಂಜೆ 5 ಗಂಟೆಗೆ ಕುಮಾರಸ್ವಾಮಿಯವರು ಸಾರಾ ಮಹೇಶ್ ಮೂಲಕ ಸಂಪರ್ಕ ಮಾಡಿದ್ದರು. ನಾನು ಬರುತ್ತೇನೆ ಎಂದು ಹೇಳಿದ್ದೆ, ಅದರಂತೆ ಬಂದು ಜೆಡಿಎಸ್​ಗೆ ಮತ ಹಾಕಿದ್ದೇನೆ. ಆದರೂ ಕುಮಾರಸ್ವಾಮಿ ‘ಮಾನಮರ್ಯಾದೆ ಇಲ್ವಾ’ ಅಂತಾ ಮಾತನಾಡಿದ್ದಾರೆ. ಇದರ ಬಗ್ಗೆ ಸಂಜೆ ತಿಳಿಯಲಿದೆ ಎಂದು ಟಿವಿ9ಗೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಪ್ರತಿಕ್ರಿಯಿಸಿದ್ದರು.

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಶ್ರೀನಿವಾಸ್ ಮತದಾನದ ಮುನ್ನಾ ದಿನವಾದ ಜೂನ್ 9ರಂದು ಭೇಟಿಯಾಗಿದ್ದರು. ಸುಮಾರು 15 ನಿಮಿಷಗಳ ಕಾಲ ಇಬ್ಬರೂ ಮಾತುಕತೆ ನಡೆಸಿದರು. ರಾಜ್ಯಸಭೆಗೆ ನಾಳೆ (ಜೂನ್ 10) ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಭೇಟಿಗೆ ಮಹತ್ವ ಬಂದಿದೆ. ಭೇಟಿಯ ಕುರಿತು ಗುಬ್ಬಿ ಶಾಸಕ ಶ್ರೀನಿವಾಸ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಸಿದ್ದರಾಮಯ್ಯ ಮಾತ್ರ, ‘ಇದೊಂದು ಸೌಜನ್ಯದ ಭೇಟಿ. ಕರ್ಟಸಿ ಕಾಲ್’ ಎಂದಷ್ಟೇ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:50 pm, Fri, 10 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ