ರಾಜ್ಯಸಭೆ ಚುನಾವಣೆ: ಕಾಂಗ್ರೆಸ್​ ಮತ್ತು ಜೆಡಿಎಸ್​ನಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಶುರು

ರಾಜ್ಯಸಭೆ ಚುನಾವಣೆ ಹತ್ತಿರವಾಗುತ್ತಿದಂತೆ ರಾಜಕೀಯದಲ್ಲಿ ಹೊಸ ಹೊಸ ಲೆಕ್ಕಾಚಾರಗಳು ಶುರುವಾಗಿದ್ದು, ರಾಜ್ಯಸಭೆ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷ ಜೆಡಿಎಸ್ ಬಿಜೆಪಿಯನ್ನು ಹೊರಗಿಡಲು​​ ಶತಾಯಗತಾಯ ಪ್ರಯತ್ನಿಸುತ್ತಿವೆ.

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್​ ಮತ್ತು ಜೆಡಿಎಸ್​ನಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಶುರು
ಸಿದ್ದರಾಮಯ್ಯ ಕುಮಾರಸ್ವಾಮಿ
Follow us
| Updated By: ವಿವೇಕ ಬಿರಾದಾರ

Updated on: Jun 08, 2022 | 2:50 PM

ಬೆಂಗಳೂರು: ರಾಜ್ಯಸಭೆ ಚುನಾವಣೆ (Rajyasbha Election) ಹತ್ತಿರವಾಗುತ್ತಿದಂತೆ ರಾಜಕೀಯದಲ್ಲಿ ಹೊಸ ಹೊಸ ಲೆಕ್ಕಾಚಾರಗಳು ಶುರುವಾಗಿದ್ದು, ರಾಜ್ಯಸಭೆ ಚುನಾವಣೇಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷ ಜೆಡಿಎಸ್​​ (JDS) ಬಿಜೆಪಿಯನ್ನು ಹೊರಗಿಡಲು  ಶತಾಯಗತಾಯ ಪ್ರಯತ್ನಿಸುತ್ತಿವೆ. ಈ ಮಧ್ಯೆ ನಿನ್ನೆ (ಮೇ 8)  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (Kumarswamy) ಜೆಡಿಎಸ್​ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕಾಂಗ್ರೆಸ್​ಗೆ​ಕೇಳಿಕೊಂಡಿದ್ದಾರೆ. ಈ ಮೂಲಕ ಬಿಜೆಪಿಯನ್ನು  ಮಣಿಸುವ  ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ.

ಆದರೆ ಇದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ (Siddaramaiah) ನಾವು ಯಾವಾಗಲೂ ಕೋಮುವಾದಿ ಬಿಜೆಪಿಯನ್ನು ವಿರೋಧಿಸುತ್ತೇವೆ. ಕೋಮುವಾದಿ ಬಿಜೆಪಿಯನ್ನ ಸೋಲಿಸಲು ಜೆಡಿಎಸ್ ನಮಗೆ ಬೆಂಬಲಿಸಲಿ. ನಾವೇ ಕೋಮುವಾದಿ ಬಿಜೆಪಿಯನ್ನು ಸೋಲಿಸುತ್ತೇವೆ ಎಂದರು. ಜೆಡಿಎಸ್​ಗಿಂತ ಮೊದಲೇ ನಾವು ಎರಡನೇ ಅಭ್ಯರ್ಥಿಯನ್ನು ಹಾಕಿದ್ದೆವು, ನಮ್ಮ ಅಭ್ಯರ್ಥಿ ಹಾಕಿದ ತಿಂಗಳ ಬಳಿಕ ಅಭ್ಯರ್ಥಿಯನ್ನು ಹಾಕಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನು ಓದಿ: ಕೋಮುವಾದಿ ಬಿಜೆಪಿಯನ್ನ ಸೋಲಿಸಲು ಜೆಡಿಎಸ್ ನಮಗೆ ಬೆಂಬಲಿಸಲಿ; ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ ಕುಮಾರಸ್ವಾಮಿ ಹೊಸ ರಾಜಕೀಯ ಲೆಕ್ಕಾಚಾರ ಹಾಕುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಸೊಪ್ಪು ಹಾಕುತ್ತಿಲ್ಲ.  ಒಂದು ವೇಳೆ ಕಾಂಗ್ರೆಸ್​​ ಹೈಕಮಾಂಡ ಜೆಡಿಎಸ್​​ ಆಫರ್​ ಒಪ್ಪಿಕೊಂಡು  ಜೆಡಿಎಸ್​​ಗೆ ಬೆಂಬಲ ನೀಡಿದರೆ ಸಿದ್ದರಾಮಯ್ಯ ಬಣದ ಲೆಕ್ಕಾಚಾರ ಉಲ್ಟಾ ಆಗಲಿದೆ. ಪಂಚರಾಜ್ಯ ಮತ್ತು ಸತತವಾಗಿ ಸೋಲನ್ನೆ ಕಂಡಿರುವ ಕಾಂಗ್ರೆಸ್​ ಹೇಗಾದರು ಮಾಡಿ ಬಿಜೆಪಿಯನ್ನು ಹೊರಗಿಡಲು ಪ್ರಯತ್ನಿಸುತ್ತಿದೆ. ಈ ಸಂಬಂಧ ಜೆಡಿಎಸ್​ ಕೊಟ್ಟ ಆಫರ್​​ ಒಪ್ಪಿಕೊಂಡರು ಆಶ್ಚರ್ಯ ಪಡಬೇಕಾಗಿಲ್ಲ.

ಆದರೆ ಇಲ್ಲಿ ಸಿದ್ದರಾಮಯ್ಯನವರಿಗೆ ಸಂಕಷ್ಟ ಎದುರಾಗುವ ಸಾದ್ಯತೆ ಇದೆ.  ಅದೇನೆಂದರೆ  ಜೆಡಿಎಸ್​​ ಈಗ ಕಾಂಗ್ರೆಸ್​ಗೆ ಬೆಂಬಲ್​ ನೀಡಿದರೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಜೆಡಿಎಸ್​​ ಬೆಂಬಲಿಸಲು ನಿರ್ಧರಿಸಿದೆ. ಒಂದು ವೇಳೆ ಹೀಗೆನಾದರು ಆದರೆ ಮುಂದಿನಗಳಲ್ಲಿ ಜೆಡಿಎಸ್ ಕಾಂಗ್ರೆಸ್​ ಮುಂದೆ ಷರತ್ತುಗಳನ್ನು ಇಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ರಹಿತಾದ ಸರ್ಕಾರದ ಷರತ್ತು ವಿಧಿಸುವ ಸಾಧ್ಯತೆ ಇದೆ.  ಬಿಜೆಪಿ ಹೊರಗಡಲು ಯಾವ ನಿರ್ಧಾರಕ್ಕೂ ಸೈ ಎನ್ನಬೇಕಾಗಿರುವ ಸ್ಥಿತಿಯಲ್ಲಿ ಕಾಂಗ್ರೆಸ್​ಗೆ ಇದೆ. ಸಿದ್ದರಾಮಯ್ಯ ರನ್ನ ತಟಸ್ಥ ಮಾಡಿದರೆ ಕೈ ಪಡೆಯಲ್ಲೇ ಸಂಕಷ್ಟ ಎದುರಾಗುತ್ತದೆ. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡರೆ ಚುನಾವಣೆಯಿಂದಲೇ ಸಿದ್ದರಾಮಯ್ಯ ದೂರಸರಿವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದರಿಂದ ಕಾಂಗ್ರೆಸ್ ಗೆ ಹೆಚ್ಚಿನ ನಷ್ಟವಾಗುತ್ತದೆ.

ಇದನ್ನು ಓದಿ: ಮೇಕೆದಾಟು ಯೋಜನೆಗೆ ತಡೆ ಕೋರಿ ಸುಪ್ರೀಂಗೆ ಅರ್ಜಿ; ತಮಿಳುನಾಡು ನಡೆಗೆ ಸಿಎಂ ಬಸವರಾಜ ಬೊಮ್ಮಾಯಿ ಖಂಡನೆ

ಕಾಂಗ್ರೆಸ್ ಜೊತೆ ಮೈತ್ರಿ ಆಫರ್ ಇಟ್ಟಿರುವುದು ಸತ್ಯವಾಗಿದ್ದರು ಡಿ ಕೆ ಶಿವಕುಮಾರ್ ಹೆಸರು ಎಲ್ಲೂ ಉಲ್ಲೇಖ ಇಲ್ಲ.  ಈ ಹಿಂದೆ ಹುಬ್ಬಳ್ಳಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪಿಸಿ ಮುಂದೆ ಸಂದರ್ಭ ಬಂದಾಗ ನೋಡೋಣ ಎಂದು ಹೆಚ್ ಡಿ ಕೆ ಹೇಳಿದರು. ಚುನಾವಣೋತ್ತರ ಮೈತ್ರಿಯಾದರೆ ಅಳೆದು ತೂಗಿ ಸಿದ್ದರಾಮಯ್ಯ ರ ಮನವೊಲಿಸಬಹುದು ಎಂಬ ಲೆಕ್ಕಾಚಾರ ಮುಂದೆಬರಲಿದೆ. ಆದರೂ ಈ ಮೈತ್ರಿ ಮಾತು ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯದಲ್ಲಿ ಹೊಸ ಸಂಭಾವ್ಯತೆಯನ್ನ ಸೃಷ್ಠಿಸಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.