AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್​ ಮತ್ತು ಜೆಡಿಎಸ್​ನಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಶುರು

ರಾಜ್ಯಸಭೆ ಚುನಾವಣೆ ಹತ್ತಿರವಾಗುತ್ತಿದಂತೆ ರಾಜಕೀಯದಲ್ಲಿ ಹೊಸ ಹೊಸ ಲೆಕ್ಕಾಚಾರಗಳು ಶುರುವಾಗಿದ್ದು, ರಾಜ್ಯಸಭೆ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷ ಜೆಡಿಎಸ್ ಬಿಜೆಪಿಯನ್ನು ಹೊರಗಿಡಲು​​ ಶತಾಯಗತಾಯ ಪ್ರಯತ್ನಿಸುತ್ತಿವೆ.

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್​ ಮತ್ತು ಜೆಡಿಎಸ್​ನಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಶುರು
ಸಿದ್ದರಾಮಯ್ಯ ಕುಮಾರಸ್ವಾಮಿ
TV9 Web
| Edited By: |

Updated on: Jun 08, 2022 | 2:50 PM

Share

ಬೆಂಗಳೂರು: ರಾಜ್ಯಸಭೆ ಚುನಾವಣೆ (Rajyasbha Election) ಹತ್ತಿರವಾಗುತ್ತಿದಂತೆ ರಾಜಕೀಯದಲ್ಲಿ ಹೊಸ ಹೊಸ ಲೆಕ್ಕಾಚಾರಗಳು ಶುರುವಾಗಿದ್ದು, ರಾಜ್ಯಸಭೆ ಚುನಾವಣೇಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷ ಜೆಡಿಎಸ್​​ (JDS) ಬಿಜೆಪಿಯನ್ನು ಹೊರಗಿಡಲು  ಶತಾಯಗತಾಯ ಪ್ರಯತ್ನಿಸುತ್ತಿವೆ. ಈ ಮಧ್ಯೆ ನಿನ್ನೆ (ಮೇ 8)  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (Kumarswamy) ಜೆಡಿಎಸ್​ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕಾಂಗ್ರೆಸ್​ಗೆ​ಕೇಳಿಕೊಂಡಿದ್ದಾರೆ. ಈ ಮೂಲಕ ಬಿಜೆಪಿಯನ್ನು  ಮಣಿಸುವ  ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ.

ಆದರೆ ಇದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ (Siddaramaiah) ನಾವು ಯಾವಾಗಲೂ ಕೋಮುವಾದಿ ಬಿಜೆಪಿಯನ್ನು ವಿರೋಧಿಸುತ್ತೇವೆ. ಕೋಮುವಾದಿ ಬಿಜೆಪಿಯನ್ನ ಸೋಲಿಸಲು ಜೆಡಿಎಸ್ ನಮಗೆ ಬೆಂಬಲಿಸಲಿ. ನಾವೇ ಕೋಮುವಾದಿ ಬಿಜೆಪಿಯನ್ನು ಸೋಲಿಸುತ್ತೇವೆ ಎಂದರು. ಜೆಡಿಎಸ್​ಗಿಂತ ಮೊದಲೇ ನಾವು ಎರಡನೇ ಅಭ್ಯರ್ಥಿಯನ್ನು ಹಾಕಿದ್ದೆವು, ನಮ್ಮ ಅಭ್ಯರ್ಥಿ ಹಾಕಿದ ತಿಂಗಳ ಬಳಿಕ ಅಭ್ಯರ್ಥಿಯನ್ನು ಹಾಕಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನು ಓದಿ: ಕೋಮುವಾದಿ ಬಿಜೆಪಿಯನ್ನ ಸೋಲಿಸಲು ಜೆಡಿಎಸ್ ನಮಗೆ ಬೆಂಬಲಿಸಲಿ; ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ ಕುಮಾರಸ್ವಾಮಿ ಹೊಸ ರಾಜಕೀಯ ಲೆಕ್ಕಾಚಾರ ಹಾಕುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಸೊಪ್ಪು ಹಾಕುತ್ತಿಲ್ಲ.  ಒಂದು ವೇಳೆ ಕಾಂಗ್ರೆಸ್​​ ಹೈಕಮಾಂಡ ಜೆಡಿಎಸ್​​ ಆಫರ್​ ಒಪ್ಪಿಕೊಂಡು  ಜೆಡಿಎಸ್​​ಗೆ ಬೆಂಬಲ ನೀಡಿದರೆ ಸಿದ್ದರಾಮಯ್ಯ ಬಣದ ಲೆಕ್ಕಾಚಾರ ಉಲ್ಟಾ ಆಗಲಿದೆ. ಪಂಚರಾಜ್ಯ ಮತ್ತು ಸತತವಾಗಿ ಸೋಲನ್ನೆ ಕಂಡಿರುವ ಕಾಂಗ್ರೆಸ್​ ಹೇಗಾದರು ಮಾಡಿ ಬಿಜೆಪಿಯನ್ನು ಹೊರಗಿಡಲು ಪ್ರಯತ್ನಿಸುತ್ತಿದೆ. ಈ ಸಂಬಂಧ ಜೆಡಿಎಸ್​ ಕೊಟ್ಟ ಆಫರ್​​ ಒಪ್ಪಿಕೊಂಡರು ಆಶ್ಚರ್ಯ ಪಡಬೇಕಾಗಿಲ್ಲ.

ಆದರೆ ಇಲ್ಲಿ ಸಿದ್ದರಾಮಯ್ಯನವರಿಗೆ ಸಂಕಷ್ಟ ಎದುರಾಗುವ ಸಾದ್ಯತೆ ಇದೆ.  ಅದೇನೆಂದರೆ  ಜೆಡಿಎಸ್​​ ಈಗ ಕಾಂಗ್ರೆಸ್​ಗೆ ಬೆಂಬಲ್​ ನೀಡಿದರೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಜೆಡಿಎಸ್​​ ಬೆಂಬಲಿಸಲು ನಿರ್ಧರಿಸಿದೆ. ಒಂದು ವೇಳೆ ಹೀಗೆನಾದರು ಆದರೆ ಮುಂದಿನಗಳಲ್ಲಿ ಜೆಡಿಎಸ್ ಕಾಂಗ್ರೆಸ್​ ಮುಂದೆ ಷರತ್ತುಗಳನ್ನು ಇಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ರಹಿತಾದ ಸರ್ಕಾರದ ಷರತ್ತು ವಿಧಿಸುವ ಸಾಧ್ಯತೆ ಇದೆ.  ಬಿಜೆಪಿ ಹೊರಗಡಲು ಯಾವ ನಿರ್ಧಾರಕ್ಕೂ ಸೈ ಎನ್ನಬೇಕಾಗಿರುವ ಸ್ಥಿತಿಯಲ್ಲಿ ಕಾಂಗ್ರೆಸ್​ಗೆ ಇದೆ. ಸಿದ್ದರಾಮಯ್ಯ ರನ್ನ ತಟಸ್ಥ ಮಾಡಿದರೆ ಕೈ ಪಡೆಯಲ್ಲೇ ಸಂಕಷ್ಟ ಎದುರಾಗುತ್ತದೆ. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡರೆ ಚುನಾವಣೆಯಿಂದಲೇ ಸಿದ್ದರಾಮಯ್ಯ ದೂರಸರಿವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದರಿಂದ ಕಾಂಗ್ರೆಸ್ ಗೆ ಹೆಚ್ಚಿನ ನಷ್ಟವಾಗುತ್ತದೆ.

ಇದನ್ನು ಓದಿ: ಮೇಕೆದಾಟು ಯೋಜನೆಗೆ ತಡೆ ಕೋರಿ ಸುಪ್ರೀಂಗೆ ಅರ್ಜಿ; ತಮಿಳುನಾಡು ನಡೆಗೆ ಸಿಎಂ ಬಸವರಾಜ ಬೊಮ್ಮಾಯಿ ಖಂಡನೆ

ಕಾಂಗ್ರೆಸ್ ಜೊತೆ ಮೈತ್ರಿ ಆಫರ್ ಇಟ್ಟಿರುವುದು ಸತ್ಯವಾಗಿದ್ದರು ಡಿ ಕೆ ಶಿವಕುಮಾರ್ ಹೆಸರು ಎಲ್ಲೂ ಉಲ್ಲೇಖ ಇಲ್ಲ.  ಈ ಹಿಂದೆ ಹುಬ್ಬಳ್ಳಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪಿಸಿ ಮುಂದೆ ಸಂದರ್ಭ ಬಂದಾಗ ನೋಡೋಣ ಎಂದು ಹೆಚ್ ಡಿ ಕೆ ಹೇಳಿದರು. ಚುನಾವಣೋತ್ತರ ಮೈತ್ರಿಯಾದರೆ ಅಳೆದು ತೂಗಿ ಸಿದ್ದರಾಮಯ್ಯ ರ ಮನವೊಲಿಸಬಹುದು ಎಂಬ ಲೆಕ್ಕಾಚಾರ ಮುಂದೆಬರಲಿದೆ. ಆದರೂ ಈ ಮೈತ್ರಿ ಮಾತು ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯದಲ್ಲಿ ಹೊಸ ಸಂಭಾವ್ಯತೆಯನ್ನ ಸೃಷ್ಠಿಸಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ