Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha Bandhan 2021: ಗೋಕಾಕ ಶಾಸಕ ರಮೇಶ್ ಜಾರಕಿಹೊಳಿಗೆ ಬಿಜೆಪಿ ಕಾರ್ಯಕರ್ತೆಯರ ರಾಖಿ ಬಂಧನ

ಬಿಜೆಪಿ ಕಾರ್ಯಕರ್ತೆಯರ ರಕ್ಷಾ ಬಂಧನ ರಮೇಶ್ ಜಾರಕಿಹೊಳಿ ಅವರ ಸಂಕಷ್ಟಗಳನ್ನು ದೂರಮಾಡುವುದೋ ಎಂಬುದನ್ನು ಕಾದುನೋಡಬೇಕಷ್ಟೇ.

Raksha Bandhan 2021: ಗೋಕಾಕ ಶಾಸಕ ರಮೇಶ್ ಜಾರಕಿಹೊಳಿಗೆ ಬಿಜೆಪಿ ಕಾರ್ಯಕರ್ತೆಯರ ರಾಖಿ ಬಂಧನ
ರಮೇಶ್ ಜಾರಕಿಹೊಳಿಗೆ ರಾಖಿ ಕಟ್ಟುತ್ತಿರುವ ದೃಶ್ಯ
Follow us
TV9 Web
| Updated By: ಡಾ. ಭಾಸ್ಕರ ಹೆಗಡೆ

Updated on:Aug 25, 2021 | 10:22 AM

ಬೆಳಗಾವಿ: ರಕ್ಷಾ ಬಂಧನ ಎಂದರೆ ಸಾಕು ಎಲ್ಲರಿಗೂ ನೆನಪಾಗುವುದು ಅಣ್ಣ ತಮ್ಮಂದಿರಿಗೆ ರಾಖಿ ಕಟ್ಟುವ ಅಕ್ಕ ತಂಗಿಯರು. ಸಹೋದರತ್ವದ ಸಂಕೇತವಾದ ರಕ್ಷಾ ಬಂಧನವನ್ನು ಎಲ್ಲರೂ ಆಚರಿಸುವುದು ಸಹಜ. ಅಂತೆಯೆ ನಟ ನಟಿಯರು, ಆಟಗಾರರು, ರಾಜಕಾರಣಿಗಳು ಆಚರಿಸುವುದು ಸಹ ಅಷ್ಟೇ ಸಹಜ. ಸದ್ಯ ಅಶ್ಲೀಲ ಸಿಡಿ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರೂ ಇಂದು ರಕ್ಷಾ ಬಂಧನ ಆಚರಿಸಿದ್ದಾರೆ. ಗೋಕಾಕ ಶಾಸಕರಾಗಿರುವ ಅವರಿಗೆ ಬಿಜೆಪಿ ಕಾರ್ಯಕರ್ತೆಯರೂ ಹಾಗೂ ಅವರ ಸಾಮಾಜಿಕ ಜೀವನದ ಸಹೋದರಿಯರು ರಾಖಿ ಕಟ್ಟಿದ್ದಾರೆ.

ಕಳೆದ ಕೆಲ ತಿಂಗಳಿನಿಂದ ಸಿಡಿ ಪ್ರಕರಣದ ದೆಸೆಯಿಂದ ರಾಜಕೀಯವಾಗಿ ಹಿನ್ನೆಲೆಗೆ ಅವರು ಸರಿದಿದ್ದಾರೆ. ಮುಂದಿನ ದಿನಗಳಲ್ಲಿ ರಾಜಕೀಯ ಜೀವನದ ಪುನರುಜ್ಜೀವನದ ಕನಸು ಹೆಣೆಯುತ್ತಿರುವ ಶಾಸಕ ರಮೇಶ್ ಜಾರಕಿಹೊಳಿ ಇತ್ತೀಚಿಗಷ್ಟೇ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ ಅವರ ನೇಮಕ ಅತೃಪ್ತಿಯನ್ನೂ ಮೂಡಿಸಿತ್ತು. ಆದರೆ ಸತತ ದೆಹಲಿ ಭೇಟಿ ಮತ್ತು ಬಿಜೆಪಿ ಹೈಕಮಾಂಡ್ ಅಭಯ ಅವರ ಅಸಮಾಧಾನವನ್ನು ಶಮನಗೊಳಿಸಿದೆ ಎಂದು ಸಹ ಹೇಳಲಾಗಿದೆ. ಇಂದು ಬಿಜೆಪಿಯ ಕಾರ್ಯಕರ್ತೆಯರು ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಅಭಯದ ರಕ್ಷೆ ಕಟ್ಟಿದ್ದಾರೆ, ಅರ್ಥಾತ್ ರಾಖಿ ಕಟ್ಟಿದ್ದಾರೆ. ಬಿಜೆಪಿ ಕಾರ್ಯಕರ್ತೆಯರ ರಕ್ಷಾ ಬಂಧನ ರಮೇಶ್ ಜಾರಕಿಹೊಳಿ ಅವರ ಸಂಕಷ್ಟಗಳನ್ನು ದೂರಮಾಡುವುದೋ ಎಂಬುದನ್ನು ಕಾದುನೋಡಬೇಕಷ್ಟೇ.

ಇದನ್ನೂ ಓದಿ: 

Raksha Bandhan 2021: ವಿಶೇಷ ರೀತಿಯಲ್ಲಿ ರಕ್ಷಾ ಬಂಧನದ ಶುಭಕೋರಿದ ಐಪಿಎಲ್ ತಂಡಗಳು

ಜಮ್ಮು ಮತ್ತು ಕಾಶ್ಮೀರದ ಜನರು ತಾಳ್ಮೆ ಕಳೆದುಕೊಂಡರೆ ನೀವು ಇಲ್ಲದಂತಾಗುತ್ತೀರಿ: ಕೇಂದ್ರಕ್ಕೆ ಮೆಹಬೂಬಾ ಮುಫ್ತಿ ಎಚ್ಚರಿಕೆ

(Raksha Bandhan 2021 BJP activists who tied Rakhi for MLA Ramesh Jarkiholi)

Published On - 5:43 pm, Sun, 22 August 21

ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು