ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆಯಲ್ಲೇ ಮುನ್ನಲೆಗೆ ಬಂದ ರಾಮನಗರ ರಾಮಮಂದಿರ, ಬಿಜೆಪಿಗೆ ಟಾಂಗ್

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಂಬಂಧ ಪರ-ವಿರೋಧ ಚರ್ಚೆಗಳು ನಡೆದಿವೆ. ಮತ್ತೊಂದೆಡೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇದರ ಮಧ್ಯೆ ರಾಮನರದ ರಾಮಮಂದಿರ ಮುನ್ನಲೆಗೆ ಬಂದಿದೆ. ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಈ ಬಗ್ಗೆ ಪ್ರಸ್ತಾಪಿಸಿ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.

ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆಯಲ್ಲೇ ಮುನ್ನಲೆಗೆ ಬಂದ ರಾಮನಗರ ರಾಮಮಂದಿರ, ಬಿಜೆಪಿಗೆ ಟಾಂಗ್
ಇಕ್ಬಾಲ್ ಹುಸೇನ್, ರಾಮನಗರ ಕಾಂಗ್ರೆಸ್ ಶಾಸಕ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jan 12, 2024 | 10:17 PM

ರಾಮನಗರ, (ಜನವರಿ 12): ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ (Ram Mandir) ಉದ್ಘಾಟನೆಯಾಗಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳು ನಡೆದಿವೆ. ಮತ್ತೊಂದೆಡೆ ಈ ರಾಮಮಂದಿರ ರಾಜಕೀಯ ಸ್ವರೂಪಪಡೆದುಕೊಂಡಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ನಡೆದಿವೆ. ಇದರ ಮಧ್ಯೆ ಇದೀಗ ರಾಮನಗರದ (Ramanagara)ರಾಮಮಂದಿರ ನಿರ್ಮಾಣ ಮುನ್ನಲೆಗೆ ಬಂದಿದೆ.

ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಇಕ್ಬಾಲ್‌ ಹುಸೇನ್, ರಾಮನಗರದ ರಾಮದೇವರಬೆಟ್ಟದಲ್ಲಿ ರಾಮಮಂದಿರ‌ ನಿರ್ಮಾಣವಾಗಲಿದೆ. ಕ್ಯಾಬಿನೆಟ್ ನಲ್ಲೂ ರಾಮಮಂದಿರ‌ ಕುರಿತಂತೆ ಚರ್ಚೆ ಆಗಿದ್ದು, ಮೂರು ದಿನದಲ್ಲಿ‌ ಮಂದಿರ ನಿರ್ಮಾಣ ಕುರಿತ ಸಭೆ ನಡೆಯಲಿದೆ. ರಾಮೋತ್ಸವಕ್ಕೂ ಸಿದ್ಧತೆ ನಡೆಯುತ್ತಿದೆ. ದಿನಾಂಕವನ್ನೂ ಘೋಷಣೆ ಮಾಡುತ್ತೇವೆ ಎಂದರು. ಈ ಮೂಲಕ ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟರು.

ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆಗೆ ಭೇಟಿ ನೀಡುತ್ತೇನೆ: ಸಿದ್ದರಾಮಯ್ಯ

ಇನ್ನು ಇದೇ ವೇಳೆ ಅಯೋಧ್ಯೆ ರಾಮಮಂದಿರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರ ಗೈರಿಗೆ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ರಾಮನ ವಿಚಾರ ಹೊಸದು. ನಮಗಲ್ಲ. ಈ ಮಣ್ಣಿನಲ್ಲಿ ಎಲ್ಲಾ ಧರ್ಮಕ್ಕೂ ಗೌರವವಿದೆ. ಆದ್ರೆ, ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ತಿರುಗೇಟು ನೀಡಿದರು.

ಬಜೆಟ್​ನಲ್ಲಿ ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಘೋಷಣೆ

ಬಿಜೆಪಿ ಸರ್ಕಾರದ ಅವಧಿಯಲ್ಲಿ 2023-24ನೇ ಸಾಲಿನ ರಾಜ್ಯ ಬಜೆಟ್‌ (Karnataka Budget 2023) ಮಂಡಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು, ರಾಮನಗರದ ರಾಮದೇವರ ಬೆಟ್ಟದಲ್ಲಿ ಒಂದು ಭವ್ಯವಾದ ರಾಮಮಂದಿರವನ್ನು (Ram Mandir) ನಿರ್ಮಿಸಲಾಗುವುದು ಎಂದು ಘೋಷಿಸಿದ್ದರು.

ಈ ಹಿಂದೆ ಸಚಿವ ಅಶ್ವಥ್‌ ನಾರಾಯಣ (Ashwath Narayan) ಅವರು, ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ಲಾನ್‌ ಮಾಡಲಾಗಿದೆ ಎಂದು ತಿಳಿಸಿದ್ದರು. ಅದರಂತೆ ಬಜೆಟ್‌ನಲ್ಲಿ, ರಾಮಮಂದಿರ ನಿರ್ಮಾಣ ಕುರಿತು ಪ್ರಸ್ತಾಪಿಸಲಾಗಿತ್ತು. ಇದೀಗ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ರಾಮನಗರದ ರಾಮಮಂದಿರದ ಸುದ್ದಿ ಮುನ್ನಲೆಗೆ ಬಂದಿದೆ. ಅದು ಕಾಂಗ್ರೆಸ್ ಶಾಸಕ ಈ ವಿಚಾರವನ್ನು ಎತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ನಾನು ಅನ್​ಫಿಟ್ ಅನಿಸುತ್ತಿದೆ’; ಕಣ್ಣೀರು ಹಾಕಿದ ಧನರಾಜ್ ಆಚಾರ್
‘ನಾನು ಅನ್​ಫಿಟ್ ಅನಿಸುತ್ತಿದೆ’; ಕಣ್ಣೀರು ಹಾಕಿದ ಧನರಾಜ್ ಆಚಾರ್
ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹುಂಡಿ‌ ಎಣಿಕೆ ಕಾರ್ಯ, ಕಾಣಿಕೆಹಣ ಎಷ್ಟಿದೆ?
ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹುಂಡಿ‌ ಎಣಿಕೆ ಕಾರ್ಯ, ಕಾಣಿಕೆಹಣ ಎಷ್ಟಿದೆ?
Daily Devotional: ಕನಸಿನಲ್ಲಿ ಹಾವುಗಳು ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ
Daily Devotional: ಕನಸಿನಲ್ಲಿ ಹಾವುಗಳು ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ
Nithya Bhavishya: ಶುಭ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಶುಭ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್
ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್
ಐಶ್ವರ್ಯಾ, ಅನುಷಾ ರೈ ನಡುವೆ ಜೋರು ಜಗಳ; ಬಿಗ್​ ಬಾಸ್​ ಮನೆಯಲ್ಲಿ ರಂಪಾಟ
ಐಶ್ವರ್ಯಾ, ಅನುಷಾ ರೈ ನಡುವೆ ಜೋರು ಜಗಳ; ಬಿಗ್​ ಬಾಸ್​ ಮನೆಯಲ್ಲಿ ರಂಪಾಟ
ರಸ್ತೆಯಲ್ಲೇ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ತಾಯಿ
ರಸ್ತೆಯಲ್ಲೇ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ತಾಯಿ
ದರ್ಶನ್ ಬೇಲ್ ಅರ್ಜಿ ತಿರಸ್ಕೃತ, ಕಾಯುತ್ತಿದ್ದ ಫ್ಯಾನ್ಸ್​ಗೆ ಭಾರೀ ನಿರಾಶೆ
ದರ್ಶನ್ ಬೇಲ್ ಅರ್ಜಿ ತಿರಸ್ಕೃತ, ಕಾಯುತ್ತಿದ್ದ ಫ್ಯಾನ್ಸ್​ಗೆ ಭಾರೀ ನಿರಾಶೆ
ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್
ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್
ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ
ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ