ಖಾತೆ ಹಂಚಿಕೆ ಬೆನ್ನಲ್ಲೇ ಮುನಿಸಿಕೊಂಡಿದ್ದ ನೂತನ ಸಚಿವ ರಾಮಲಿಂಗಾರೆಡ್ಡಿ ಮೊದಲ ಪ್ರತಿಕ್ರಿಯೆ

ಖಾತೆ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ ಅವರಿಗೆ ಹೆಚ್ಚುವರಿ ಖಾತೆ ನೀಡಲಾಗಿದೆ. ಇದೀಗ ನೂತನ ಸಚಿವರಿಗೆ ಖಾತೆ ಹಂಚಿಕೆ ಬಳಿಕ ರಾಮಲಿಂಗಾರೆಡ್ಡಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಖಾತೆ ಹಂಚಿಕೆ ಬೆನ್ನಲ್ಲೇ ಮುನಿಸಿಕೊಂಡಿದ್ದ ನೂತನ ಸಚಿವ ರಾಮಲಿಂಗಾರೆಡ್ಡಿ ಮೊದಲ ಪ್ರತಿಕ್ರಿಯೆ
ರಾಮಲಿಂಗಾರೆಡ್ಡಿ

Updated on: May 29, 2023 | 10:22 AM

ಬೆಂಗಳೂರು: ಸಾರಿಗೆ ಖಾತೆ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಸಚಿವ ರಾಮಲಿಂಗಾರೆಡ್ಡಿ(ramalinga reddy) ಅವರನ್ನು ಮನವೊಲಿಸುವಲ್ಲಿ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಯಶಸ್ವಿಯಾಗಿದ್ದಾರೆ. ಇನ್ನು ರಾಮಲಿಂಗರೆಡ್ಡಿ ಅವರಿಗೆ ಸಾರಿಗೆ ಜೊತೆ ಮುಜರಾಯಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.  ಈ ಬಗ್ಗೆ ಮಾಧ್ಯಮಗಳಿಗೆ ಸ್ವತಃ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರತಿಕ್ರಿಯಿಸಿದ್ದು, ಸಮಾಧಾನ,ಅಸಮಾಧಾನ ಪ್ರಶ್ನೆ ಇಲ್ಲ. ಯಾವ ಖಾತೆ ಕೊಟ್ಟರು ಕೆಲಸ ಮಾಡಬೇಕು. ಸಚಿವ ಸ್ಥಾನ, ಖಾತೆ ಎನ್ನುವುದು ಶಾಶ್ವತ ಅಲ್ಲ. ಮಂತ್ರಿಗಳು ಕೂಡ ಬದಲಾಗುತ್ತಾರೆ. ಖಾತೆ ಕೂಡ ಬದಲಾಗುತ್ತೆ. ಸಚಿವ ಸ್ಥಾನಕ್ಕೆ ನಾನು ಯಾರ ಮನೆ ಬಾಗಿಲಿಗೂ ಹೋಗಿಲ್ಲ. ಬೇಕಿದ್ರೆ ಸಿದ್ದರಾಮಯ್ಯರವರನ್ನೇ ಕೇಳಿ. ಈ ಹಿಂದೆ ನಾಲ್ಕು ತಿಂಗಳು ಸಾರಿಗೆ ಇಲಾಖೆಯ ಸಚಿವನಾಗಿದ್ದೆ. ಹಲವು ಪ್ರಶಸ್ತಿ ನಮ್ಮ ಸಂಸ್ಥೆಗೆ ಬಂದಿದ್ದವು ಎಂದು ಹೇಳಿದರು.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜೀನಾಮೆ ಎಚ್ಚರಿಕೆ, ಮುನಿಸಿಕೊಂಡ ರಾಮಲಿಂಗಾರೆಡ್ಡಿ ಮನವೊಲಿಕೆಗೆ ಡಿಕೆ ಬ್ರದರ್ಸ್ ಕಸರತ್ತು

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂದು ತೀರ್ಮಾನಿಸಲಾಗಿದೆ. ಎಷ್ಟು ಜನ ಪ್ರಯಾಣ ಮಾಡುತ್ತಾರೆ ಎನ್ನುವುದಕ್ಕೆ ಸರ್ಕಾರ ಕೆಆರ್​ಟಿ‌ಸಿಗೆ ಹಣ ಕೊಡಬೇಕು. ಸೋಮವಾರ ಸಭೆ ಇದ್ದು, ಎಲ್ಲಾ ತೀರ್ಮಾನಿಸಲಾಗುತ್ತೆ/ ವಿರೋಧ ಪಕ್ಷದವರ ಬಾಯಿ ಮುಚ್ಚಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್ ನಿಂದ ಐದು ಗ್ಯಾರಂಟಿ ಜಾರಿ ಬಗ್ಗೆ ಮಾತನಾಡಿ, ಮಂತ್ರಿಮಂಡಲದಲ್ಲಿ ಏನು ತೀರ್ಮಾನ ಆಗತ್ತೋ ಅದೇ ಫೈನಲ್. ಗೃಹಿಣಿಯರಿಗೆ 2 ಸಾವಿರ ಕೊಡೋದಾಗಿ ಹೇಳಿದ್ದಾರೆ. ಕೆಲವರು ಅಕೌಂಟ್ ಹೊಂದಿದ್ದರೆ. ಇನ್ನೂ ಅಕೌಂಟ್ ಇಲ್ಲದವರಿಗೆ ಅಕೌಂಟ್ ಮಾಡಿಸಬೇಕು. ವಿರೋಧ ಪಕ್ಷದವರಿಗೆ ಹೊಟ್ಟೆ ಉರಿ. ಅದಕ್ಕಾಗಿ ಹೀಗೆ ಮಾಡ್ತಿದ್ದಾರೆ. ಬಿಜೆಪಿ ಅನ್ನೋದು ಬುರುಡೆ ಪಕ್ಷ. 2018 ರಲ್ಲಿ 600 ಆಶ್ವಾಸನೆ ಕೊಟ್ಟಿದ್ದರು. ಆದರೆ ಅದನ್ನ ಈಡೇರಿಸಲು ಸಾಧ್ಯವಾಗಿಲ್ಲ. ವಿರೋಧ ಪಕ್ಷದವರು ಕಷ್ಟ ಪಡೋದು ಬೇಕಿಲ್ಲ. ನಾವು ನಮ್ಮ ಗ್ಯಾರಂಟಿ ಜಾರಿಗೆ ತರುತ್ತೇವೆ ಎಂದು ಸ್ಪಷ್ಟಪಡಿಸಿದರು.

ಪ್ರಧಾನಿ ಮೋದಿ ಅಕೌಂಟ್ ಗೆ 15 ಲಕ್ಷ ಹಾಕೋದಾಗಿ ಹೇಳಿದ್ದರು. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಮೊದಲು ಅದನ್ನ ಈಡೇರಿಸಲಿ ಎಂದು ರಾಮಲಿಂಗಾರೆಡ್ಡಿ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

Published On - 9:29 am, Mon, 29 May 23

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us