AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ-ಸಿದ್ದು ಕೈಲಾಗದ ಸಂಧಾನ ಸುರ್ಜೇವಾಲ ಸಮ್ಮುಖದಲ್ಲಿ ಸಕ್ಸಸ್ ಆಗಿದ್ದೇಗೆ?: ರಾಮಲಿಂಗಾರೆಡ್ಡಿ ಮನವೊಲಿಕೆಗೆ ನೀಡಿದ ಆಫರ್ ಏನು?

ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ಗೊಂದಲಕ್ಕೆ ಸುರ್ಜೇವಾಲ ಮಧ್ಯಸ್ಥಿಕೆಯಿಂದ ತೆರೆ ಬಿದ್ದಿದೆ. ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ರೆಡ್ಡಿ ಅವರಿಗೆ ಹೈಕಮಾಂಡ್ ಜಲಸಂಪನ್ಮೂಲ ಅಥವಾ ಸಣ್ಣ ನೀರಾವರಿ ಹೆಚ್ಚುವರಿ ಖಾತೆ ಭರವಸೆ ನೀಡಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಡಿಕೆಶಿ ಮನವೊಲಿಕೆ ವಿಫಲವಾದ ನಂತರ, ರಣದೀಪ್ ಸುರ್ಜೇವಾಲ ಅವರ ಸುದೀರ್ಘ ಮಾತುಕತೆ ಸಂಧಾನಕ್ಕೆ ಕಾರಣವಾಯಿತು.

ಡಿಕೆಶಿ-ಸಿದ್ದು ಕೈಲಾಗದ ಸಂಧಾನ ಸುರ್ಜೇವಾಲ ಸಮ್ಮುಖದಲ್ಲಿ ಸಕ್ಸಸ್ ಆಗಿದ್ದೇಗೆ?: ರಾಮಲಿಂಗಾರೆಡ್ಡಿ ಮನವೊಲಿಕೆಗೆ ನೀಡಿದ ಆಫರ್ ಏನು?
ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್
ಅಕ್ಷಯ್​ ಪಲ್ಲಮಜಲು​​
|

Updated on:Jun 06, 2026 | 5:52 PM

Share

ಬೆಂಗಳೂರು, ಜೂ.6: ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆಯಾದರೂ, ಈ ಸಂಧಾನದ ಹಿಂದೆ ನಡೆದಿರುವ ಹೈಡ್ರಾಮಾ ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಡೆಸಿದ ಸರಣಿ ಮನವೊಲಿಕೆ ಪ್ರಯತ್ನಗಳಿಗೆ ಕರಗದ ರಾಮಲಿಂಗಾರೆಡ್ಡಿ ಅವರನ್ನು ಶಾಂತಗೊಳಿಸಲು ಕೊನೆಗೂ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಅಖಾಡಕ್ಕೆ ಇಳಿಯಬೇಕಾಯಿತು.

ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ ಅವರನ್ನು ಸಮಾಧಾನಪಡಿಸಲು ನಿನ್ನೆ ತಡರಾತ್ರಿಯವರೆಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಸರತ್ತು ನಡೆಸಿದ್ದರೂ ಯಾವುದೇ ಫಲ ಸಿಕ್ಕಿರಲಿಲ್ಲ. ಆದರೆ, ಇಂದು ರಣದೀಪ್ ಸಿಂಗ್ ಸುರ್ಜೇವಾಲ ಅವರು ರಾಮಲಿಂಗಾರೆಡ್ಡಿ ಅವರೊಂದಿಗೆ ಸತತ ಒಂದೂವರೆ ಗಂಟೆಗೂ ಅಧಿಕ ಕಾಲ ನಡೆಸಿದ ಸುದೀರ್ಘ ಗುಪ್ತ ಮಾತುಕತೆಯ ಬಳಿಕ ಬಿಕ್ಕಟ್ಟು ಶಮನವಾಗಿದೆ. ಹೈಕಮಾಂಡ್ ಸದ್ಯದ ಖಾತೆಯ ಜೊತೆಗೆ ಜಲಸಂಪನ್ಮೂಲ ಅಥವಾ ಸಣ್ಣ ನೀರಾವರಿ ಇಲಾಖೆಯ ಹೆಚ್ಚುವರಿ ಜವಾಬ್ದಾರಿಯ ಭರವಸೆ ನೀಡಿದೆ ಎನ್ನಲಾಗಿದೆ. ಆದರೆ ಸುದ್ದಿಗೋಷ್ಠಿಯಲ್ಲಿ ಸುರ್ಜೇವಾಲ ಅವರು ಕೇವಲ ರಾಜೀನಾಮೆ ವಾಪಸಾತಿ ಬಗ್ಗೆ ಮಾತ್ರ ತಿಳಿಸಿದ್ದಾರೆ, ಖಾತೆ ಬದಲಾವಣೆಯ ಗೊಂದಲಗಳಿಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ಇದೇ ವೇಳೆ ಬಿಜೆಪಿ ನಾಯಕರಾದ ಬಿ.ವೈ. ವಿಜಯೇಂದ್ರ ಮತ್ತು ಆರ್. ಅಶೋಕ್ ಅವರ ಟೀಕೆಗಳಿಗೆ ತಿರುಗೇಟು ನೀಡಿದ ಅವರು, “ನಮ್ಮ ಪಕ್ಷದ ಆಂತರಿಕ ವಿಚಾರವನ್ನು ಇಟ್ಟುಕೊಂಡು ಬಿಜೆಪಿ ಸಾಕಷ್ಟು ಗೊಂದಲ ನಿರ್ಮಾಣ ಮಾಡಲು ಯತ್ನಿಸಿತು ಮತ್ತು ದೊಡ್ಡ ಬಂಡಾಯ ಆಯಿತು ಎಂದು ಸಂಭ್ರಮ ಪಟ್ಟಿತು. ಆದರೆ ಸದ್ಯಕ್ಕೆ ಅವರ ಸಂಭ್ರಮ ಮುಗಿದಿದೆ” ಎಂದು ಲೇವಡಿ ಮಾಡಿದರು.

ಸರ್ಕಾರದ ಸಾಧನೆಯನ್ನು ಮುಂದಿಟ್ಟ ಸುರ್ಜೇವಾಲ, “ನಾವು ಕನ್ನಡಿಗರಿಗಾಗಿ ಕೊಟ್ಟ ಮಾತಿನಂತೆ ಐದು ಗ್ಯಾರೆಂಟಿಗಳನ್ನು ಯಶಸ್ವಿಯಾಗಿ ನೀಡಿದ್ದೇವೆ. ಗೃಹಲಕ್ಷ್ಮಿ, ಗೃಹಜ್ಯೋತಿ, 10 ಕೆ.ಜಿಯ ಅನ್ನಭಾಗ್ಯ, ಯುವನಿಧಿ ಹಾಗೂ ವಿದ್ಯಾರ್ಥಿ-ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ನಿರಂತರವಾಗಿ ತಲುಪುತ್ತಿದೆ. ನಮ್ಮ ಗಮನ ಜನರ ಕಲ್ಯಾಣದ ಮೇಲಿದೆಯೇ ಹೊರತು ವಿಪಕ್ಷಗಳ ಟೀಕೆಗಳ ಮೇಲಲ್ಲ” ಎಂದು ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಕೇವಲ ರಾಜೀನಾಮೆ ಗೊಂದಲಕ್ಕೆ ಸ್ಪಷ್ಟೀಕರಣ ನೀಡಿದ ಸುರ್ಜೇವಾಲ, ಮಾಧ್ಯಮಗಳ ಬೇರೆ ಯಾವುದೇ ರಾಜಕೀಯ ಪ್ರಶ್ನೆಗಳಿಗೆ ಉತ್ತರಿಸದೆ ಅಲ್ಲಿಂದ ನಿರ್ಗಮಿಸಿದರು.

ಇದನ್ನೂ ಓದಿ: ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾರೆಡ್ಡಿ: ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

ಇತ್ತ ಕೋಲಾರದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಮುಳಬಾಗಿಲು ಶಾಸಕ ಕೊತ್ತೂರು ಮಂಜುನಾಥ್, ಸಚಿವ ರಾಮಲಿಂಗಾರೆಡ್ಡಿ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. “ಇಲ್ಲಿಯವರೆಗೆ ಇದ್ದ ಸಚಿವರ ಪೈಕಿ ರಾಮಲಿಂಗಾರೆಡ್ಡಿ ಅವರೇ ಬೆಸ್ಟ್ ಮಿನಿಸ್ಟರ್. ಅವರಿಗೆ ಯಾವುದೇ ಗನ್‌ಮ್ಯಾನ್ ಇಲ್ಲ, ಪಿಎ ಹಮ್ಮುಬಿಮ್ಮು ಇಲ್ಲ. ಯಾರು ಫೋನ್ ಮಾಡಿದರೂ 100% ತಾವೇ ರಿಸೀವ್ ಮಾಡುತ್ತಾರೆ, ಒಂದು ವೇಳೆ ಬ್ಯುಸಿ ಇದ್ದರೆ ಕಡ್ಡಾಯವಾಗಿ ಕಾಲ್‌ಬ್ಯಾಕ್ ಮಾಡುತ್ತಾರೆ. ಅವರು ಅತ್ಯಂತ ಬುದ್ಧಿವಂತರು. ಆದರೆ ಮಂತ್ರಿಯಾದವರಿಗೆ ಕೆಲಸ ಮಾಡಲು ಯಾವ ಖಾತೆ ಆದರೇನು? ಇಂತಹುದೇ ಖಾತೆ ಬೇಕು ಎಂದು ಪಟ್ಟು ಹಿಡಿಯುವುದು ತಪ್ಪು ಎಂದು ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Sat, 6 June 26

Follow Us
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಪ್ರತಿ ವರ್ಷ ಒಂದೊಂದು ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ
ಪ್ರತಿ ವರ್ಷ ಒಂದೊಂದು ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ