AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಕುಮಾರಸ್ವಾಮಿ ಭೇಟಿಯಾದ ರಮೇಶ್ ಜಾರಕಿಹೊಳಿ: ಬಿಜೆಪಿ ಭಿನ್ನಮತ ಚರ್ಚೆಗೆ ಒಲ್ಲೆ ಎಂದ ಹೆಚ್​ಡಿಕೆ

ಕರ್ನಾಟಕ ಬಿಜೆಪಿಯಲ್ಲಿನ ಬಣದ ಜಗಳ ಮುಂದುವರೆದಿದ್ದು, ಯತ್ನಾಳ್ ಮತ್ತು ವಿಜಯೇಂದ್ರ ತಂಡದ ಭಿನ್ನಾಭಿಪ್ರಾಯವು ಪಕ್ಷದಲ್ಲಿ ಭಿನ್ನಮತವನ್ನು ಉಂಟುಮಾಡಿದೆ. ಸದ್ಯ ಈ ವಿಚಾರವಾಗಿ ಹೆಚ್‌.ಡಿ. ಕುಮಾರಸ್ವಾಮಿ ಅಂತರ ಕಾಯ್ದುಕೊಂಡಿದ್ದಾರೆ. ರಾಜ್ಯ ಬಿಜೆಪಿ ಭಿನ್ನಮತದ ಚರ್ಚೆ ನಡೆಸಲು ಒಲ್ಲೆ ಎಂದು ಹೇಳಿದ್ದಾರೆ. ಆ ಮೂಲಕ ಆಂತರಿಕ ಜಗಳಕ್ಕೆ ಕೈಹಾಕೋದು ಬೇಡವೆಂದಿದ್ದಾರೆ.

ದೆಹಲಿಯಲ್ಲಿ ಕುಮಾರಸ್ವಾಮಿ ಭೇಟಿಯಾದ ರಮೇಶ್ ಜಾರಕಿಹೊಳಿ: ಬಿಜೆಪಿ ಭಿನ್ನಮತ ಚರ್ಚೆಗೆ ಒಲ್ಲೆ ಎಂದ ಹೆಚ್​ಡಿಕೆ
ದೆಹಲಿಯಲ್ಲಿ ಕುಮಾರಸ್ವಾಮಿ ಭೇಟಿಯಾದ ರಮೇಶ್ ಜಾರಕಿಹೊಳಿ: ಬಿಜೆಪಿ ಭಿನ್ನಮತ ಚರ್ಚೆಗೆ ಒಲ್ಲೆ ಎಂದ ಕುಮಾರಸ್ವಾಮಿ
Sunil MH
| Edited By: |

Updated on:Jan 11, 2025 | 3:10 PM

Share

ಬೆಂಗಳೂರು, ಜನವರಿ 11: ಬಿಜೆಪಿಯಲ್ಲಿನ (BJP) ಬಣ ಬಡಿದಾಟ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಈ ವಿಚಾರ ಹೈಕಮಾಂಡ್​ ಅಂಗಳಕ್ಕೂ ಹೋಗಿತ್ತು. ಆದರೂ ಇದು ಮುಂದುವರೆದಿದೆ. ಮೇಲಿಂದ ಎಲ್ಲವೂ ಸರಿ ಇದೆ ಅಂತಾ ಕಾಣಿಸಿದರೆ, ನಾಯಕರ ಹೇಳಿಕೆಗಳು, ನಡೆ ಮತ್ತೆ ಬಣದ ಬಡಿದಾಟಕ್ಕೆ ಕಾರಣವಾಗುತ್ತಿದೆ. ಶಾಸಕ ಯತ್ನಾಳ್​ ಮತ್ತು ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬಣ ಬಡಿದಾಟದಿಂದ ಪಕ್ಷದಲ್ಲಿ ಭಿನ್ನಮತ ಉಂಟಾಗಿದೆ. ಹೀಗಾಗಿ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಈ ಭಿನ್ನಮತ ವಿಚಾರದಲ್ಲಿ ಅಂತರ ಕಾಯ್ದುಕೊಂಡಿದ್ದಾರೆ.

ಇನ್ನು ಈ ಬಗ್ಗೆ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿಯನ್ನು ಶಾಸಕ ರಮೇಶ್ ಜಾರಕಿಹೊಳಿ ಮತ್ತು ತಂಡ ಭೇಟಿ ಮಾಡಿದ್ದು, ಈ ವೇಳೆ ರಾಜ್ಯ ಬಿಜೆಪಿ ಭಿನ್ನಮತದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಭಿನ್ನಮತ ವಿಚಾರದ ಬಗ್ಗೆ ಬಿಜೆಪಿ ಹೈಕಮಾಂಡ್​ ಜೊತೆ ಮಾತಾಡುವಂತೆ ಮನವಿ ಮಾಡಿದ್ದಾರೆ. ಆದರೆ ರಾಜ್ಯ ಬಿಜೆಪಿ ಭಿನ್ನಮತದ ಚರ್ಚೆ ನಡೆಸಲು ಹೆಚ್​ಡಿ ಕುಮಾರಸ್ವಾಮಿ ಆಗಲ್ಲ ಎಂದಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು

ಸಲಹೆ ನೀಡಬೇಕಿದ್ದರೆ ಪಕ್ಷದ ಅಧ್ಯಕ್ಷ ವಿಜಯೇಂದ್ರಗೆ ಹೇಳೋಣ ಅಥವಾ ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ರಾಜ್ಯ ನಾಯಕರ ಜೊತೆ ಚರ್ಚಿಸೋಣ, ಆದರೆ ಆಂತರಿಕ ಜಗಳದ ಬಗ್ಗೆ ಚರ್ಚೆ ಬೇಡ ಎಂದಿದ್ದಾರೆ. ಆ ಮೂಲಕ ಬಿಜೆಪಿ ಆಂತರಿಕ ಜಗಳಕ್ಕೆ ಕೈಹಾಕೋದು ಬೇಡವೆಂದು ಹೆಚ್​​ಡಿ ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ.

ಸದ್ಯ ಬಿಜೆಪಿಯಲ್ಲಿ ಬಣ ಕಿಚ್ಚು ಬೂದಿ ಮುಚ್ಚಿದ ಕೆಂಡವಾಗಿದೆ. ಎದುರಾಳಿಗೆ ಡೋಂಟ್‌ಕೇರ್ ಎಂದಿರುವ ಬಿ.ವೈ ವಿಜಯೇಂದ್ರ, ಪಕ್ಷ ಸಂಘಟನೆಗೆ ಒತ್ತು ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಿನ್ನೆ ಸಭೆ ನಡೆಸಿದ ಬಿ.ವೈ ವಿಜಯೇಂದ್ರ ಸೋತವರ ವಿಶ್ವಾಸಗಳಿಸುವ ಪ್ರಯತ್ನ ಮಾಡಿದ್ದಾರೆ. ಇದೇ ಸಭೆಯಲ್ಲಿ ವಿಜಯೇಂದ್ರ ಪರ ಬ್ಯಾಟ್ ಬೀಸಿದ ಸೋತ ನಾಯಕರು, ಯತ್ನಾಳ್ ವಿರುದ್ಧ ಗುಡುಗಿದ್ದಾರೆ.

ಇದನ್ನೂ ಓದಿ: ಬಿಜೆಪಿಯಲ್ಲಿ ಬಣ ಕಿತ್ತಾಟ.. ವಿಜಯೇಂದ್ರ ಪರ ಸೋತವರ ಬ್ಯಾಟಿಂಗ್, ಸಭೆಯಲ್ಲಿ ಏನೇನಾಯ್ತು?

ಅದರಲ್ಲೂ ಮಾಜಿ ಸಚಿವ ರೇಣುಕಾಚಾರ್ಯ, ಯಡಿಯೂರಪ್ಪೋತ್ಸವವನ್ನ ಮಾಡೇ ಮಾಡುತ್ತೇವೆ ಅಂತಾ ಕಡ್ಡಿ ಮುರಿದಂತೆ ಹೇಳಿದ್ದರು. ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಾಗಿಲ್ಲ. ನಾವೇ ಹಣ ಹಾಕುತ್ತೇವೆ ಎಂದಿದ್ದಾರೆ. ಪರ್ಯಾಯ ನಾಯಕತ್ವವಿಲ್ಲ. ವಿಜಯೇಂದ್ರ ನೇತೃತ್ವದಲ್ಲೇ ಚುನಾವಣೆಗೆ ಹೋಗಬೇಕು ಎಂದು ಹೇಳುವ ಮೂಲಕ ಯತ್ನಾಳ್ ಬಣಕ್ಕೆ ಸಂದೇಶ ರವಾಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:03 pm, Sat, 11 January 25

Follow Us
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
VIDEO: ಓಯೇ ಸರ್ಫರಾಝ್... ವಿರಾಟ್ ಕೊಹ್ಲಿ ನಡೆಗೆ ಭಾರೀ ಮೆಚ್ಚುಗೆ
VIDEO: ಓಯೇ ಸರ್ಫರಾಝ್... ವಿರಾಟ್ ಕೊಹ್ಲಿ ನಡೆಗೆ ಭಾರೀ ಮೆಚ್ಚುಗೆ
ಬಿಸಿಲಿನ ಬೇಗೆಗೆ ಕಬಿನಿ ನೀರಿನಲ್ಲಿ 'ಯಂಗ್ ಟೈಗರ್' ಕೂಲ್ ಕೂಲ್!
ಬಿಸಿಲಿನ ಬೇಗೆಗೆ ಕಬಿನಿ ನೀರಿನಲ್ಲಿ 'ಯಂಗ್ ಟೈಗರ್' ಕೂಲ್ ಕೂಲ್!
ಪಾಳು ಬಿದ್ದ ಬಂಗಲೆಯಲ್ಲಿ ನಾಲ್ಕು ದಿನ ಆಶ್ರಯ ಪಡೆದಿದ್ದ ಶರಣ್ಯ!
ಪಾಳು ಬಿದ್ದ ಬಂಗಲೆಯಲ್ಲಿ ನಾಲ್ಕು ದಿನ ಆಶ್ರಯ ಪಡೆದಿದ್ದ ಶರಣ್ಯ!
ವಿಚ್ಛೇದನ ಪಡೆದ ಮಗಳನ್ನು ವಾದ್ಯಗಳೊಂದಿಗೆ ಸ್ವಾಗತಿಸಿದ ನಿವೃತ್ತ ನ್ಯಾಯಾಧೀಶ
ವಿಚ್ಛೇದನ ಪಡೆದ ಮಗಳನ್ನು ವಾದ್ಯಗಳೊಂದಿಗೆ ಸ್ವಾಗತಿಸಿದ ನಿವೃತ್ತ ನ್ಯಾಯಾಧೀಶ