AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramesh Jarkiholi CD: ರಮೇಶ್ ಜಾರಕಿಹೊಳಿ ಸಿಡಿ ಹಿಂದಿನ ರೂವಾರಿ ಹೆಸರು ಬಿಚ್ಚಿಟ್ಟ ಮಾಜಿ ಶಾಸಕ ನಾಗರಾಜ್

ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ಆ ರಾಸಲೀಲೆ ಸಿಡಿ ರುವಾರಿ ಎಂದು ಮಾಜಿ ಶಾಸಕ ನಾಗರಾಜ್ ಅವರು ಬಿಚ್ಚಿಟ್ಟಿದ್ದಾರೆ.

Ramesh Jarkiholi CD: ರಮೇಶ್ ಜಾರಕಿಹೊಳಿ ಸಿಡಿ ಹಿಂದಿನ ರೂವಾರಿ ಹೆಸರು ಬಿಚ್ಚಿಟ್ಟ ಮಾಜಿ ಶಾಸಕ ನಾಗರಾಜ್
TV9 Web
| Edited By: |

Updated on:Jan 30, 2023 | 3:38 PM

Share

ಬೆಂಗಳೂರು: ಅತ್ತ ಬೆಳಗಾವಿಯಲ್ಲಿ (Belagavi) ತಮ್ಮ ವಿರುದ್ಧ ಸಿಡಿ (CD Case) ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಅವರು ಡಿಕೆ ಶಿವಕುಮಾರ್ (DK Shivakumar), ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಸಿಡಿ ವಿರುದ್ಧವಾಗಿ ಡಿಕೆ ಶಿವಕುಮಾರ್ ವಿರುದ್ಧ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇತ್ತ ಬೆಂಗಳೂರಿನಲ್ಲಿ ಇದೇ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ನಾಗರಾಜ್​ ಹೊಸ ಬಾಂಬ್​ ಸಿಡಿಸಿದ್ದಾರೆ. ಜಾರಕಿಹೊಳಿ ಸಿಡಿ ಪ್ರಕರಣದ ರೂವಾರಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಎಂದು ಮಾಜಿ ಶಾಸಕ ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: Ramesh Jarkiholi Audio: ಡಿ.ಕೆ.ಶಿವಕುಮಾರ್​​ ವಿರುದ್ಧ ಆಡಿಯೋ ಬಿಡುಗಡೆ ಮಾಡಿದ ರಮೇಶ್​ ಜಾರಕಿಹೊಳಿ: ಆ 18 ಸೆಕೆಂಡ್​ ಆಡಿಯೋದಲ್ಲೇನಿದೆ?

ಬೆಂಗಳೂರಿನಲ್ಲಿ ಇಂದು (ಜನವರಿ 30) ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ನಾಗರಾಜ್, ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಹೆಬ್ಬಾಳ್ಕರ್ ಸಹೋದರನ ಕೈವಾಡ ಇದೆ. ಸಿಡಿ ಪ್ರಕರಣದ ರೂವಾರಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ (ಚನ್ನರಾಜ ಹಟ್ಟಿಹೊಳಿ). ಸಿಡಿ ಇಟ್ಟುಕೊಂಡು ಬ್ಲಾಕ್​ ಮೇಲ್​ ಮಾಡುವ ವಿಚಾರ ಗೊತ್ತಾಯ್ತು. ಈ ವಿಚಾರವನ್ನು ರಮೇಶ್​ ಜಾರಕಿಹೊಳಿಗೆ ನಾವು 2 ಬಾರಿ ಹೇಳಿದ್ದೆವು ಎಂದು ಹೇಳಿದರು.

ನಾನು ತಪ್ಪು ಮಾಡಿಲ್ಲ. ಸಿಡಿ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದು ಜಾರಕಿಹೊಳಿ ಹೇಳಿದ್ದರು. ಇಂತಹ ನೂರು ಸಿಡಿ ಬಂದರೂ ನಾನು ತಲೆಕೆಡಿಸಿಕೊಳ್ಳಲ್ಲ ಎಂದಿದ್ದರು. ಷಡ್ಯಂತ್ರ ಮಾಡಿ ರಮೇಶ್​ ಜಾರಕಿಹೊಳಿ ಮುಗಿಸುವ ಪ್ರಯತ್ನಿಸಿದ್ದಾರೆ. ಈ ಸಿಡಿಯ ಹಿಂದೆ ಪ್ರಭಾವಿ ನಾಯಕರು ಇದ್ದಾರೆ ಎಂದ ನಾಗರಾಜ್​ ಸ್ಫೋಟಕ ಹೇಳಿಕೆ ನೀಡಿದರು.

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಹಿರಂಗವಾಗಿದ್ದೇ ತಡ ವಿಪಕ್ಷಗಳು ಬಿಜೆಪಿ ವಿರುದ್ಧ ಮುಗಿಬಿದ್ದಿದ್ದವು. ಅಲ್ಲದೇ ರಮೇಶ್ ಜಾರಕಿಹೊಳಿ ಅವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಬೇಕೆಂದು ಆಗ್ರಹಿಸಿದ್ದರು. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಸಹ ಗಂಭೀರವಾಗಿ ಪರಿಗಣಿಸಿ ರಾಜ್ಯ ಬಿಜೆಪಿಯಿಂದ ವರದಿ ತರಿಸಿಕೊಂಡಿತ್ತು. ಇದಾದ ಬಳಿಕ ಈ ಸಿಡಿ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಅಂತಿಮವಾಗಿ ಹೈಕಾಂಡ್ ಸೂಚನೆ ಮೇರೆಗೆ ಜಾರಕಿಹೊಳಿ ಮಿನಿಸ್ಟರ್ ಹುದ್ದೆಗೆ ರಾಜೀನಾಮೆ ನೀಡಬೇಕಾಗಿ ಬಂತು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:37 pm, Mon, 30 January 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು