AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ರಮೇಶ್​ ಜಾರಕಿಹೊಳಿ ರಾಜೀನಾಮೆ ಪಡೆಯಲಿ, ನಾವು ಮೇಟಿಯಿಂದ ರಾಜೀನಾಮೆ ಕೊಡಿಸಿರಲಿಲ್ವಾ? – ಸಿದ್ದರಾಮಯ್ಯ

Ramesh Jarkiholi: ಸಿಡಿಯನ್ನು ಸಿಬಿಐ ತನಿಖೆಗಾದ್ರೂ ಕೊಡಲಿ ಬೇರೆ ಯಾವುದಕ್ಕಾದ್ರೂ ಕೊಡಲಿ ಆದರೆ, ಮೊದಲು ರಾಜೀನಾಮೆ ಕೊಡಿಸಲಿ ಎಂದು ಹೇಳಿದ್ದಾರೆ. ಜೊತೆಗೆ, ಸಿದ್ದರಾಮಯ್ಯ ಚಲೋ ಎಂದಿರಿವ ವಿಚಾರದ ಬಗ್ಗೆ ಮಾತನಾಡಿ, ಆತ ಸತ್ಯ ಹೇಳಿದ್ದಾನೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ರಮೇಶ್​ ಜಾರಕಿಹೊಳಿ ರಾಜೀನಾಮೆ ಪಡೆಯಲಿ, ನಾವು ಮೇಟಿಯಿಂದ ರಾಜೀನಾಮೆ ಕೊಡಿಸಿರಲಿಲ್ವಾ? - ಸಿದ್ದರಾಮಯ್ಯ
ರಮೇಶ್​ ಜಾರಕಿಹೊಳಿ ಮತ್ತು ಸಿದ್ದರಾಮಯ್ಯ
Skanda
|

Updated on: Mar 03, 2021 | 12:54 PM

Share

ರಮೇಶ್​ ಜಾರಕಿಹೊಳಿ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಾನ‌ ಮರ್ಯಾದೆ ಇದ್ದರೆ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಲಿ. ಹಿಂದೆ‌ ಹೆಚ್.ವೈ.ಮೇಟಿ ಪ್ರಕರಣದಲ್ಲೂ ಇದೇ ರೀತಿ ಆಗಿತ್ತು. ಆಗಲೂ ನಕಲಿ ಸಿಡಿ ಅಂತಾ ಹೇಳಲಾಗಿತ್ತು. ಆದರೂ ನಾವು ಕೂಡಲೇ ರಾಜೀನಾಮೆ ಪಡೆದಿದ್ದೆವು. ಇವರಿಗೆ ಮಾನ ಮರ್ಯಾದೆ ಇಲ್ಲ. ಸಿಡಿಯನ್ನು ಸಿಬಿಐ ತನಿಖೆಗಾದ್ರೂ ಕೊಡಲಿ ಬೇರೆ ಯಾವುದಕ್ಕಾದ್ರೂ ಕೊಡಲಿ ಆದರೆ, ಮೊದಲು ರಾಜೀನಾಮೆ ಕೊಡಿಸಲಿ ಎಂದು ಹೇಳಿದ್ದಾರೆ. ಜೊತೆಗೆ, ‘ಸಿದ್ದರಾಮಯ್ಯ ಚಲೋ’ ಎಂದು ಸಿಡಿಯಲ್ಲಿ ಯುವತಿ ಜೊತೆ ಮಾತನಾಡುತ್ತಾ, ರಮೇಶ್​ ಜಾರಕಿಹೊಳಿ ಹೇಳಿರುವ ವಿಚಾರದ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ ‘ಆತ ಸತ್ಯ’ ಹೇಳಿದ್ದಾನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೈತ್ರಿ ಸರ್ಕಾರ ಬೀಳಿಸಿದವರು ಇದಕ್ಕೆ ಉತ್ತರಿಸಬೇಕು. ಇಂತಹ ವಿಷಯಗಳಿಟ್ಟುಕೊಂಡು ನಾನು ರಾಜಕೀಯ ಮಾಡಲ್ಲ. ಆದರೆ, ರಾಜಕೀಯ ವ್ಯಕ್ತಿಗಳ ಈ ರೀತಿ ನಡುವಳಿಕೆ ಸರಿಯಲ್ಲ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಯಡಿಯೂರಪ್ಪ ಉತ್ತರ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ, ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ವೆಂಕಟರಾವ್ ನಾಡಗೌಡ ಸಹ ಮಾತನಾಡಿ, ಸಿಡಿ ನಿಜವೋ ಸುಳ್ಳೋ ಅನ್ನೋದು ಅವರಿಗೆ ಚೆನ್ನಾಗಿ ಗೊತ್ತಿರುತ್ತದೆ. ಆದರೆ ಈಗ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕು. ಒಂದು ವೇಳೆ ಅದು ಸುಳ್ಳು ಅನ್ನೋದಾದ್ರೆ ನಂತರ ಅವರು ಮತ್ತೆ ಸಚಿವರಾಗಬಹುದು. ಹೀಗಾಗಿ ಈಗ ರಾಜೀನಾಮೆ ನೀಡುವುದೇ ಉತ್ತಮ ಎಂದಿದ್ದಾರೆ. ಈ ಸಂಬಂಧ ಜೆಡಿಎಸ್ ನಿಲುವೇನು ಎಂಬುದು ನನಗೆ ಗೊತ್ತಿಲ್ಲ. ನಾಳೆ ಪಕ್ಷದ ಪ್ರಮುಖರು ಚರ್ಚಿಸಿ ತೀರ್ಮಾನಿಸುತ್ತಾರೆ ಎಂದು ತಿಳಿಸಿದ್ದಾರೆ.

ಈ ನಡುವೆ ಚಿಕ್ಕಮಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಅನೇಕ ಕಡೆಗಳಲ್ಲಿ ರಮೆಶ್​ ಜಾರಕಿಹೊಳಿ ರಾಜೀನಾಮೆ ಪಡೆಯಲು ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಸಹೋದರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸದಲ್ಲಿ ಬಿಗಿ ಭದ್ರತೆ: ಇಂದು ಮಧ್ಯಾಹ್ನ ಸಂಪುಟ ಸಭೆ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ