AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸ್ಥಾನಕ್ಕೆ ರಮೇಶ್​ ಜಾರಕಿಹೊಳಿ ರಾಜೀನಾಮೆ; ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪಗೆ ಪತ್ರ ರವಾನೆ

Ramesh Jarkiholi Resignation: ಅಶ್ಲೀಲ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮುಜುಗರ ತಪ್ಪಿಸಲು ರಮೇಶ್​ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ಸಿಎಂ ಬಿ.ಎಸ್.ಯಡಿಯೂರಪ್ಪಗೆ ಪತ್ರ ರವಾನೆ ಮಾಡಿದ್ದು ತಮ್ಮ ನಿಲುವನ್ನು ತಿಳಿಸಿದ್ದಾರೆ.

ಸಚಿವ ಸ್ಥಾನಕ್ಕೆ ರಮೇಶ್​ ಜಾರಕಿಹೊಳಿ ರಾಜೀನಾಮೆ; ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪಗೆ ಪತ್ರ ರವಾನೆ
ರಮೇಶ್​ ಜಾರಕಿಹೊಳಿ
Skanda
| Edited By: |

Updated on:Mar 03, 2021 | 4:08 PM

Share

ಅಶ್ಲೀಲ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮುಜುಗರ ತಪ್ಪಿಸಲು ರಮೇಶ್​ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ಸಿಎಂ ಬಿ.ಎಸ್.ಯಡಿಯೂರಪ್ಪಗೆ ಪತ್ರ ರವಾನೆ ಮಾಡಿದ್ದು ತಮ್ಮ ನಿಲುವನ್ನು ತಿಳಿಸಿದ್ದಾರೆ. ಪಂಚ ರಾಜ್ಯಗಳ ಚುನಾವಣೆಯೂ ಸಮೀಪಿಸುತ್ತಿರುವುದರಿಂದ ಪಕ್ಷಕ್ಕೆ ತೊಂದರೆಯಾಗಬಾರದೆಂದು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿರುವ ರಮೇಶ್​ ಜಾರಕಿಹೊಳಿ, ಸಂಪುಟ ಸಭೆಗೂ ಮುನ್ನ ರಾಜೀನಾಮೆ ನೀಡಿದ್ದು ಆರೋಪಮುಕ್ತರಾಗಿ ಬಂದ ಬಳಿಕ ಸಚಿವ ಸ್ಥಾನ ನೀಡಿ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿರುವುದು ತಿಳಿದುಬಂದಿದೆ.

ಸಿಡಿ ವಿಚಾರದಲ್ಲಿ ಪಕ್ಷಕ್ಕೆ ಸಹಿಸಲಾಗದಷ್ಟು ಮುಜುಗರ ಉಂಟುಮಾಡಿದ್ದಕ್ಕೆ ಬಿಜೆಪಿ ಹೈಕಮಾಂಡ್​ ಸಿಡಿಮಿಡಿಗೊಂಡು ಮೊದಲು ರಮೇಶ್​ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯಿರಿ, ಉಳಿದಿದ್ದು ಆಮೇಲೆ ನೋಡೋಣ ಎನ್ನುವುದಾಗಿ​ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಮಾಹಿತಿ ರವಾನಿಸಿರುವುದಾಗಿ ಕೆಲ ಮೂಲಗಳು ಈ ಹಿಂದೆ ತಿಳಿಸಿದ್ದವು. ಸದ್ಯ ರಾಜೀನಾಮೆ ಪತ್ರ ರವಾನಿಸಿರುವ ರಮೇಶ್​, ಕೆಲವೇ ಹೊತ್ತಲ್ಲಿ ಪತ್ರಿಕಾಗೋಷ್ಠಿ ನಡೆಸುವುದಾಗಿ ತಿಳಿಸಿದ್ದಾರೆ.

Resignation Letter by Ramesh Jarkiholi

Resignation Letter by Ramesh Jarkiholi

ನಿನ್ನೆ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ ಸಿಡಿ ಬಿಡುಗಡೆ ಮಾಡಿದ ನಂತರ ಬಳಿಕ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನವೇ ಉಂಟಾಗಿದ್ದು, ಪ್ರತಿಪಕ್ಷಗಳು ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಕೊಡಿಸಲಿ ಎಂದು ಪಟ್ಟು ಹಿಡಿದಿದ್ದವು. ಆದರೆ, ರಮೇಶ್​ ಜಾರಕಿಹೊಳಿ ಈ ವಿಡಿಯೋಗೂ ನನಗೂ ಸಂಬಂಧವಿಲ್ಲ, ಬೇಕಿದ್ದರೆ ತನಿಖೆ ನಡೆಯಲಿ. ಆರೋಪ ಸಾಬೀತಾದರೂ ನಾನು ನಿವೃತ್ತಿ ತೆಗೆದುಕೊಳ್ಳುವೆ ಎಂದು ಹೇಳಿಕೆ ನೀಡಿದ್ದರು. ಅವರ ಬೆನ್ನಿಗೆ ನಿಂತ ಬಾಲಚಂದ್ರ ಜಾರಕಿಹೊಳಿ, ತನ್ನ ಸಣ್ಣ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ. ಇಂತಹ ಫೇಕ್ ಸಿಡಿಗಳಿಗಾಗಿ ರಾಜೀನಾಮೆ ನೀಡಿಸಿದರೆ ಸಂಪುಟವೇ ಉಳಿಯುವುದಿಲ್ಲ ಎಂಬ ಮಾತುಗಳನ್ನಾಡಿದ್ದರು.

ರಾಜೀನಾಮೆ ಅಂಗೀಕರಿಸಿದರೆ ಬೆಳಗಾವಿ ಬಂದ್​​ ಇದೀಗ, ರಮೇಶ್​ ಜಾರಕಿಹೊಳಿ ರಾಜೀನಾಮೆ ಸಲ್ಲಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ ಗೋಕಾಕದಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದು, ರಾಜೀನಾಮೆ ಅಂಗೀಕಾರ ಮಾಡಿದರೆ ಬೆಳಗಾವಿ ಬಂದ್ ಮಾಡೋದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ. ಯಾವುದೇ ಕಾರಣಕ್ಕೂ ರಮೇಶ್​ ಅವರಿಂದ ರಾಜೀನಾಮೆ ಪಡೆಯಬಾರದು ಎಂದು ಒತ್ತಾಯಿಸುತ್ತಿರುವ ಬೆಂಬಲಿಗರು ನಗರದ ಬಸವ ವೃತ್ತದಲ್ಲಿ ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಡಾ. ಬಸವರಾಜ ಗುರೂಜಿಯಿಂದ ರಮೇಶ ಜಾರಕಿಹೊಳಿ ಜಾತಕ ವಿಶ್ಲೇಷಣೆ: ಸದ್ಯಕ್ಕೆ ಸಂಕಷ್ಟ, ಏಪ್ರಿಲ್ ನಂತರ ಗುರು ಬಲ

Published On - 1:01 pm, Wed, 3 March 21

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?