AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಅಧಿಕಾರಿಗಳ ಸಭೆ: ಗವರ್ನರ್​ಗೆ ದೂರು ನೀಡಲು ಮುಂದಾದ ಬಿಜೆಪಿ

ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ವಿಚಾರವಾಗಿ ನಾಳೆ ಮಧ್ಯಾಹ್ನ 12.30ಕ್ಕೆ ಮಾಜಿ ಸಚಿವ ಆರ್.ಅಶೋಕ್​ ನೇತೃತ್ವದಲ್ಲಿ ರಾಜಭವನಕ್ಕೆ ತೆರಳಿ ಗವರ್ನರ್​ಗೆ ಬಿಜೆಪಿ ದೂರು ನೀಡಲು ಮುಂದಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on:Jun 13, 2023 | 9:34 PM

Share

ಬೆಂಗಳೂರು: ಬಿಬಿಎಂಪಿ ಚುನಾವಣೆ ತಯಾರಿ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಇಂದು ಸಭೆ ನಡೆದಿದ್ದು, ಈ ಸಭೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಜೊತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ (randeep singh surjewala) ಉಪಸ್ಥಿತರಾಗಿರುವುದಕ್ಕೆ ಬಿಜೆಪಿ ಕಿಡಿಕಾರಿದೆ. ಅಷ್ಟೇ ಅಲ್ಲದೇ ಒಂದು ಹೆಜ್ಜೆ ಮುಂದೆ ಹೋಗಿ ನಾಳೆ ಮಧ್ಯಾಹ್ನ 12.30ಕ್ಕೆ ಸುರ್ಜೇವಾಲ ಸಭೆ ಬಗ್ಗೆ ಗವರ್ನರ್​ಗೆ ದೂರು ನೀಡಲು ಬಿಜೆಪಿ ಮುಂದಾಗಿದೆ. ಮಾಜಿ ಸಚಿವ ಆರ್.ಅಶೋಕ್​ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗದಿಂದ ದೂರು ನೀಡಲಾಗುತ್ತಿದೆ.

ಟ್ವೀಟ್​ ಮೂಲಕ ಕಾಂಗ್ರೆಸ್​ ವಿರುದ್ಧ ಆಕ್ರೋಶ ವ್ಯಕ್ತಿಪಡಿಸಿರುವ ಬಿಜೆಪಿ, ಶಾಂಗ್ರಿಲಾ ಹೋಟೆಲ್‌ನಲ್ಲಿ ATM ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು? ಸರ್ಕಾರದೊಟ್ಟಿಗಾಗಲಿ, BBMP ಒಟ್ಟಿಗಾಗಲಿ ಸುರ್ಜೇವಾಲಗೆ ಸಂಬಂಧವಿಲ್ಲ. ರಣದೀಪ್​​ ಸುರ್ಜೇವಾಲಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ? ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಶಾಂಗ್ರಿಲಾ ಹೋಟೆಲ್‌ನಲ್ಲಿ ATM ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು? ಫೋಟೋ ಸಮೇತ ಪ್ರಶ್ನಿಸಿದ ಬಿಜೆಪಿ

ಯಾವುದೇ ಅಧಿಕೃತ ಸಂಬಂಧವಿಲ್ಲದ ಸುರ್ಜೇವಾಲರಿಗೆ ಏನು ಕೆಲಸ? ಇದು 85% ಡೀಲ್‌ ಫಿಕ್ಸಿಂಗ್ ಸಭೆಯೇ ಎಂದು ರಾಜ್ಯ ಬಿಜೆಪಿ ಟಾಂಗ್​​ ನೀಡಿದ್ದು, ಈ ಬಗ್ಗೆ ಉತ್ತರಿಸಿ ಮಾನ್ಯ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರವರೇ ಎಂದು ಬಿಜೆಪಿ ಟ್ವೀಟ್ ಮೂಲಕ ಆಗ್ರಹಿಸಿದೆ.

ಡಿ.ಕೆ.ಶಿವಕುಮಾರ್​ ಕರೆದಿದ್ದ ಸಭೆಯಲ್ಲಿ ಭಾಗಿಯಾಗಿದ್ದೆ ಎಂದ ಜಮೀರ್ ಅಹ್ಮದ್ ಖಾನ್

ಈ ಕುರಿತಾಗಿ ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್​ ಸಹ ಟ್ವೀಟ್ ಮಾಡಿದ್ದು,​​ ಡಿಸಿಎಂ ಡಿ.ಕೆ.ಶಿವಕುಮಾರ್​ ಕರೆದಿದ್ದ ಶಾಂಗ್ರಿಲಾ ಹೋಟೆಲ್​ನಲ್ಲಿ ನಡೆದ ಸಭೆಯಲ್ಲಿ ಭಾಗಿಯಾಗಿದ್ದೆ. ಇಂದು ನಡೆದ ಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಬಗ್ಗೆ ಚರ್ಚಿಸಿದ್ದೇವೆ. ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಭಾಗಿಯಾಗಿದ್ದರು ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರ: ಕುಮಾರಸ್ವಾಮಿ

ಹೆಚ್​ಡಿ ಕುಮಾರಸ್ವಾಮಿ ಕಿಡಿ

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೂಡ ಈ ಕುರಿತು ಟೀಕಿಸಿದ್ದು, ಕರ್ನಾಟಕ ಸರ್ಕಾರವನ್ನು ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರ ಅಂತಾ ಜರಿದಿದ್ದಾರೆ. ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ? ಅಥವಾ ಕೈಗೊಂಬೆ ಸರಕಾರಕ್ಕಾ? ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ. ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ ಎಂದು ಟೀಕಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:29 pm, Tue, 13 June 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ