AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಅಧಿಕಾರಿಗಳ ಸಭೆ: ಗವರ್ನರ್​ಗೆ ದೂರು ನೀಡಲು ಮುಂದಾದ ಬಿಜೆಪಿ

ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ವಿಚಾರವಾಗಿ ನಾಳೆ ಮಧ್ಯಾಹ್ನ 12.30ಕ್ಕೆ ಮಾಜಿ ಸಚಿವ ಆರ್.ಅಶೋಕ್​ ನೇತೃತ್ವದಲ್ಲಿ ರಾಜಭವನಕ್ಕೆ ತೆರಳಿ ಗವರ್ನರ್​ಗೆ ಬಿಜೆಪಿ ದೂರು ನೀಡಲು ಮುಂದಾಗಿದೆ.

Follow us
ಗಂಗಾಧರ​ ಬ. ಸಾಬೋಜಿ
|

Updated on:Jun 13, 2023 | 9:34 PM

ಬೆಂಗಳೂರು: ಬಿಬಿಎಂಪಿ ಚುನಾವಣೆ ತಯಾರಿ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಇಂದು ಸಭೆ ನಡೆದಿದ್ದು, ಈ ಸಭೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಜೊತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ (randeep singh surjewala) ಉಪಸ್ಥಿತರಾಗಿರುವುದಕ್ಕೆ ಬಿಜೆಪಿ ಕಿಡಿಕಾರಿದೆ. ಅಷ್ಟೇ ಅಲ್ಲದೇ ಒಂದು ಹೆಜ್ಜೆ ಮುಂದೆ ಹೋಗಿ ನಾಳೆ ಮಧ್ಯಾಹ್ನ 12.30ಕ್ಕೆ ಸುರ್ಜೇವಾಲ ಸಭೆ ಬಗ್ಗೆ ಗವರ್ನರ್​ಗೆ ದೂರು ನೀಡಲು ಬಿಜೆಪಿ ಮುಂದಾಗಿದೆ. ಮಾಜಿ ಸಚಿವ ಆರ್.ಅಶೋಕ್​ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗದಿಂದ ದೂರು ನೀಡಲಾಗುತ್ತಿದೆ.

ಟ್ವೀಟ್​ ಮೂಲಕ ಕಾಂಗ್ರೆಸ್​ ವಿರುದ್ಧ ಆಕ್ರೋಶ ವ್ಯಕ್ತಿಪಡಿಸಿರುವ ಬಿಜೆಪಿ, ಶಾಂಗ್ರಿಲಾ ಹೋಟೆಲ್‌ನಲ್ಲಿ ATM ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು? ಸರ್ಕಾರದೊಟ್ಟಿಗಾಗಲಿ, BBMP ಒಟ್ಟಿಗಾಗಲಿ ಸುರ್ಜೇವಾಲಗೆ ಸಂಬಂಧವಿಲ್ಲ. ರಣದೀಪ್​​ ಸುರ್ಜೇವಾಲಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ? ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಶಾಂಗ್ರಿಲಾ ಹೋಟೆಲ್‌ನಲ್ಲಿ ATM ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು? ಫೋಟೋ ಸಮೇತ ಪ್ರಶ್ನಿಸಿದ ಬಿಜೆಪಿ

ಯಾವುದೇ ಅಧಿಕೃತ ಸಂಬಂಧವಿಲ್ಲದ ಸುರ್ಜೇವಾಲರಿಗೆ ಏನು ಕೆಲಸ? ಇದು 85% ಡೀಲ್‌ ಫಿಕ್ಸಿಂಗ್ ಸಭೆಯೇ ಎಂದು ರಾಜ್ಯ ಬಿಜೆಪಿ ಟಾಂಗ್​​ ನೀಡಿದ್ದು, ಈ ಬಗ್ಗೆ ಉತ್ತರಿಸಿ ಮಾನ್ಯ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರವರೇ ಎಂದು ಬಿಜೆಪಿ ಟ್ವೀಟ್ ಮೂಲಕ ಆಗ್ರಹಿಸಿದೆ.

ಡಿ.ಕೆ.ಶಿವಕುಮಾರ್​ ಕರೆದಿದ್ದ ಸಭೆಯಲ್ಲಿ ಭಾಗಿಯಾಗಿದ್ದೆ ಎಂದ ಜಮೀರ್ ಅಹ್ಮದ್ ಖಾನ್

ಈ ಕುರಿತಾಗಿ ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್​ ಸಹ ಟ್ವೀಟ್ ಮಾಡಿದ್ದು,​​ ಡಿಸಿಎಂ ಡಿ.ಕೆ.ಶಿವಕುಮಾರ್​ ಕರೆದಿದ್ದ ಶಾಂಗ್ರಿಲಾ ಹೋಟೆಲ್​ನಲ್ಲಿ ನಡೆದ ಸಭೆಯಲ್ಲಿ ಭಾಗಿಯಾಗಿದ್ದೆ. ಇಂದು ನಡೆದ ಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಬಗ್ಗೆ ಚರ್ಚಿಸಿದ್ದೇವೆ. ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಭಾಗಿಯಾಗಿದ್ದರು ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರ: ಕುಮಾರಸ್ವಾಮಿ

ಹೆಚ್​ಡಿ ಕುಮಾರಸ್ವಾಮಿ ಕಿಡಿ

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೂಡ ಈ ಕುರಿತು ಟೀಕಿಸಿದ್ದು, ಕರ್ನಾಟಕ ಸರ್ಕಾರವನ್ನು ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರ ಅಂತಾ ಜರಿದಿದ್ದಾರೆ. ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ? ಅಥವಾ ಕೈಗೊಂಬೆ ಸರಕಾರಕ್ಕಾ? ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ. ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ ಎಂದು ಟೀಕಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:29 pm, Tue, 13 June 23

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ