AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೈ’ ಕಟ್, ಬಾಯ್‌ ಮುಚ್‌: ಸಚಿವರು, ಶಾಸಕರಿಗೆ ಸುರ್ಜೇವಾಲ ನೇರ ಎಚ್ಚರಿಕೆ: ಕಾಂಗ್ರೆಸ್‌ ಬಣ ರಾಜಕೀಯಕ್ಕೆ ಬೀಳುತ್ತಾ ಬ್ರೇಕ್‌?

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸುರ್ಜೇವಾಲ, ಪಕ್ಷದ ಚೌಕಟ್ಟು ಮೀರಿ ಸಚಿವರು, ಶಾಸಕರು ಮಾತನಾಡುವಂತಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಚೌಕಟ್ಟು ಮೀರಿ ಹೇಳಿಕೆಗಳನ್ನು ನೀಡಿದರೆ ಶಿಸ್ತು ಕ್ರಮ ಜರುಗಿಸುತ್ತೇವೆ ಎಂದೂ ಹೇಳಿದ್ದಾರೆ.

‘ಕೈ’ ಕಟ್, ಬಾಯ್‌ ಮುಚ್‌: ಸಚಿವರು, ಶಾಸಕರಿಗೆ ಸುರ್ಜೇವಾಲ ನೇರ ಎಚ್ಚರಿಕೆ: ಕಾಂಗ್ರೆಸ್‌ ಬಣ ರಾಜಕೀಯಕ್ಕೆ ಬೀಳುತ್ತಾ ಬ್ರೇಕ್‌?
ರಣದೀಪ್ ಸಿಂಗ್ ಸುರ್ಜೇವಾಲ
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on: Nov 01, 2023 | 2:55 PM

Share

ಬೆಂಗಳೂರು, ನವೆಂಬರ್ 1: ರಾಜ್ಯ ಕಾಂಗ್ರೆಸ್​​ನಲ್ಲಿ (Karnataka Congress) ಆಂತರಿಕ ಕಲಹ, ಅಸಮಾಧಾನ, ವಿಭಿನ್ನ ಹೇಳಿಕೆಗಳು ಹೆಚ್ಚಾಗುತ್ತಿರುವಂತೆಯೇ ಅದಕ್ಕೆ ತೇಪೆ ಹಚ್ಚಲು ಹೈಕಮಾಂಡ್ ಮುಂದಾಗಿದೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ರಾಜ್ಯಕ್ಕೆ ಆಗಮಿಸಿದ್ದು, ಪಕ್ಷದ ನಾಯಕರ ಜತೆ ಸಮಾಲೋಚನೆ ನಡೆಸಿದ್ದಾರೆ. ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸುರ್ಜೇವಾಲ, ಪಕ್ಷದ ಚೌಕಟ್ಟು ಮೀರಿ ಸಚಿವರು, ಶಾಸಕರು ಮಾತನಾಡುವಂತಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಚೌಕಟ್ಟು ಮೀರಿ ಹೇಳಿಕೆಗಳನ್ನು ನೀಡಿದರೆ ಶಿಸ್ತು ಕ್ರಮ ಜರುಗಿಸುತ್ತೇವೆ ಎಂದೂ ಹೇಳಿದ್ದಾರೆ.

ಸಭೆಯಲ್ಲಿ ನಿಗಮ ಮಂಡಳಿಗಳ ನೇಮಕ ಬಗ್ಗೆಯೂ ಚರ್ಚೆ ಆಗಿದೆ. ನಿಗಮ ಮಂಡಳಿ ನೇಮಕದ ಕುರಿತು ಮತ್ತಷ್ಟು ಚರ್ಚೆ ಆಗಬೇಕಿದೆ. ಮಧ್ಯಪ್ರದೇಶ ಚುನಾವಣೆ ಮುಗಿದ ಬಳಿಕ ಮತ್ತೆ ವಾಪಸ್ ಬರುತ್ತೇನೆ. 2-3 ಹಂತದ ಮಾತುಕತೆ ಆಗುವುದು ಬಾಕಿ ಇದೆ ಎಂದು ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಚರ್ಚೆ ಮಾಡಿದ್ದೇವೆ. ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್​​ ಪಕ್ಷ ಗೆಲ್ಲಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರೂ ಭರವಸೆ ನೀಡಿದ್ದಾರೆ. ಅಭ್ಯರ್ಥಿಗಳ ಘೋಷಣೆ ವಿಳಂಬ ಆಗಬಾರದೆಂದು ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್ ಗ್ಯಾರಂಟಿಗಳ ಜಾರಿಯಿಂದ ಜನರಿಗೆ ಅನುಕೂಲವಾಗಿದೆ. ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಕೆಲಸ ಆಗಬೇಕಿದೆ. ಮುಂದಿನ 15 ದಿನಗಳ ಒಳಗಾಗಿ ಮೊದಲ ಹಂತದ ಸಭೆ ನಡೆಯಲಿದೆ. ಯಾರು ಸೂಕ್ತ ಅಭ್ಯರ್ಥಿ ಅಂತಾ ಪ್ರಾಥಮಿಕ ಹಂತದ ಚರ್ಚೆಯಾಗಿದೆ ಎಂದು ಸುರ್ಜೇವಾಲ​ ಹೇಳಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ರೈತರಿಗೆ ಐದು ಗಂಟೆ ವಿದ್ಯುತ್: ತೆಲಂಗಾಣ ಕಾಂಗ್ರೆಸ್​​ಗೆ ಹಿನ್ನಡೆಯಾದ ಡಿಕೆ ಶಿವಕುಮಾರ್ ಹೇಳಿಕೆ

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ: ಕೆಸಿ ವೇಣುಗೋಪಾಲ್

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದರು. ಪ್ರಧಾನಮಂತ್ರಿಗಳಿಗೆ ಏನಾದ್ರೂ ಸಂದೇಶ ರವಾನಿಸುವುದು ಇದ್ದರೆ ಹೇಳಿ. ಸಂದೇಶ ರವಾನೆ ಮಾಡಬೇಕಿದ್ರೆ ಹೇಳಿ, ನಾನು ಅವರಿಗೆ ತಿಳಿಸುತ್ತೇನೆ ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಸಿ ವೇಣುಗೋಪಾಲ್ ವ್ಯಂಗ್ಯವಾಡಿದರು.

ರಾಜಕಾರಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ