‘ಕೈ’ ಕಟ್, ಬಾಯ್‌ ಮುಚ್‌: ಸಚಿವರು, ಶಾಸಕರಿಗೆ ಸುರ್ಜೇವಾಲ ನೇರ ಎಚ್ಚರಿಕೆ: ಕಾಂಗ್ರೆಸ್‌ ಬಣ ರಾಜಕೀಯಕ್ಕೆ ಬೀಳುತ್ತಾ ಬ್ರೇಕ್‌?

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸುರ್ಜೇವಾಲ, ಪಕ್ಷದ ಚೌಕಟ್ಟು ಮೀರಿ ಸಚಿವರು, ಶಾಸಕರು ಮಾತನಾಡುವಂತಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಚೌಕಟ್ಟು ಮೀರಿ ಹೇಳಿಕೆಗಳನ್ನು ನೀಡಿದರೆ ಶಿಸ್ತು ಕ್ರಮ ಜರುಗಿಸುತ್ತೇವೆ ಎಂದೂ ಹೇಳಿದ್ದಾರೆ.

‘ಕೈ’ ಕಟ್, ಬಾಯ್‌ ಮುಚ್‌: ಸಚಿವರು, ಶಾಸಕರಿಗೆ ಸುರ್ಜೇವಾಲ ನೇರ ಎಚ್ಚರಿಕೆ: ಕಾಂಗ್ರೆಸ್‌ ಬಣ ರಾಜಕೀಯಕ್ಕೆ ಬೀಳುತ್ತಾ ಬ್ರೇಕ್‌?
ರಣದೀಪ್ ಸಿಂಗ್ ಸುರ್ಜೇವಾಲ
Edited By:

Updated on: Nov 01, 2023 | 2:55 PM

ಬೆಂಗಳೂರು, ನವೆಂಬರ್ 1: ರಾಜ್ಯ ಕಾಂಗ್ರೆಸ್​​ನಲ್ಲಿ (Karnataka Congress) ಆಂತರಿಕ ಕಲಹ, ಅಸಮಾಧಾನ, ವಿಭಿನ್ನ ಹೇಳಿಕೆಗಳು ಹೆಚ್ಚಾಗುತ್ತಿರುವಂತೆಯೇ ಅದಕ್ಕೆ ತೇಪೆ ಹಚ್ಚಲು ಹೈಕಮಾಂಡ್ ಮುಂದಾಗಿದೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ರಾಜ್ಯಕ್ಕೆ ಆಗಮಿಸಿದ್ದು, ಪಕ್ಷದ ನಾಯಕರ ಜತೆ ಸಮಾಲೋಚನೆ ನಡೆಸಿದ್ದಾರೆ. ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸುರ್ಜೇವಾಲ, ಪಕ್ಷದ ಚೌಕಟ್ಟು ಮೀರಿ ಸಚಿವರು, ಶಾಸಕರು ಮಾತನಾಡುವಂತಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಚೌಕಟ್ಟು ಮೀರಿ ಹೇಳಿಕೆಗಳನ್ನು ನೀಡಿದರೆ ಶಿಸ್ತು ಕ್ರಮ ಜರುಗಿಸುತ್ತೇವೆ ಎಂದೂ ಹೇಳಿದ್ದಾರೆ.

ಸಭೆಯಲ್ಲಿ ನಿಗಮ ಮಂಡಳಿಗಳ ನೇಮಕ ಬಗ್ಗೆಯೂ ಚರ್ಚೆ ಆಗಿದೆ. ನಿಗಮ ಮಂಡಳಿ ನೇಮಕದ ಕುರಿತು ಮತ್ತಷ್ಟು ಚರ್ಚೆ ಆಗಬೇಕಿದೆ. ಮಧ್ಯಪ್ರದೇಶ ಚುನಾವಣೆ ಮುಗಿದ ಬಳಿಕ ಮತ್ತೆ ವಾಪಸ್ ಬರುತ್ತೇನೆ. 2-3 ಹಂತದ ಮಾತುಕತೆ ಆಗುವುದು ಬಾಕಿ ಇದೆ ಎಂದು ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಚರ್ಚೆ ಮಾಡಿದ್ದೇವೆ. ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್​​ ಪಕ್ಷ ಗೆಲ್ಲಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರೂ ಭರವಸೆ ನೀಡಿದ್ದಾರೆ. ಅಭ್ಯರ್ಥಿಗಳ ಘೋಷಣೆ ವಿಳಂಬ ಆಗಬಾರದೆಂದು ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್ ಗ್ಯಾರಂಟಿಗಳ ಜಾರಿಯಿಂದ ಜನರಿಗೆ ಅನುಕೂಲವಾಗಿದೆ. ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಕೆಲಸ ಆಗಬೇಕಿದೆ. ಮುಂದಿನ 15 ದಿನಗಳ ಒಳಗಾಗಿ ಮೊದಲ ಹಂತದ ಸಭೆ ನಡೆಯಲಿದೆ. ಯಾರು ಸೂಕ್ತ ಅಭ್ಯರ್ಥಿ ಅಂತಾ ಪ್ರಾಥಮಿಕ ಹಂತದ ಚರ್ಚೆಯಾಗಿದೆ ಎಂದು ಸುರ್ಜೇವಾಲ​ ಹೇಳಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ರೈತರಿಗೆ ಐದು ಗಂಟೆ ವಿದ್ಯುತ್: ತೆಲಂಗಾಣ ಕಾಂಗ್ರೆಸ್​​ಗೆ ಹಿನ್ನಡೆಯಾದ ಡಿಕೆ ಶಿವಕುಮಾರ್ ಹೇಳಿಕೆ

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ: ಕೆಸಿ ವೇಣುಗೋಪಾಲ್

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದರು. ಪ್ರಧಾನಮಂತ್ರಿಗಳಿಗೆ ಏನಾದ್ರೂ ಸಂದೇಶ ರವಾನಿಸುವುದು ಇದ್ದರೆ ಹೇಳಿ. ಸಂದೇಶ ರವಾನೆ ಮಾಡಬೇಕಿದ್ರೆ ಹೇಳಿ, ನಾನು ಅವರಿಗೆ ತಿಳಿಸುತ್ತೇನೆ ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಸಿ ವೇಣುಗೋಪಾಲ್ ವ್ಯಂಗ್ಯವಾಡಿದರು.

ರಾಜಕಾರಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us