AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಚುನಾವಣಾ ಇ-ಪೇಪರ್ ಬಿಡುಗಡೆ

ಜಿಲ್ಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಸೋಮವಾರ(ಏ.3) ಮಂಗಳೂರಿನಲ್ಲಿ SVEEP ಚಟುವಟಿಕೆಗಳ ಭಾಗವಾಗಿ ಅಧಿಕಾರಿಗಳು ‘ಎಲೆಕ್ಷನ್ ಫೋಕಸ್' ಇ-ಪೇಪರ್ ಅನ್ನು ಬಿಡುಗಡೆ ಮಾಡಿದ್ದಾರೆ .

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಚುನಾವಣಾ ಇ-ಪೇಪರ್ ಬಿಡುಗಡೆ
ಇ-ಪೇಪರ್​ ಬಿಡುಗಡೆ
ಕಿರಣ್ ಹನುಮಂತ್​ ಮಾದಾರ್
|

Updated on:Apr 05, 2023 | 10:58 AM

Share

ದಕ್ಷಿಣ ಕನ್ನಡ: ಜಿಲ್ಲೆಯ ಸ್ವೀಪ್ ಸಮಿತಿಯು ಚುನಾವಣೆಗಳ ಕುರಿತು ದೈನಂದಿನ ಇ-ಪೇಪರ್‌ ‘ಎಲೆಕ್ಷನ್ ಫೋಕಸ್’ ಅನ್ನು ಪ್ರಾರಂಭಿಸಿದೆ. ಇ-ಪೇಪರ್ ಅನ್ನು ಬಿಡುಗಡೆ ಮಾಡಿದ SVEEP ಸಮಿತಿಯ ಅಧ್ಯಕ್ಷ ಕುಮಾರ್ ಮಾತನಾಡಿ ‘ ಜನ ಸಾಮಾನ್ಯರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮತದಾರರು ಮತದಾನ ಮಾಡುವಂತೆ ಉತ್ತೇಜಿಸುವುದು ಇ-ಪೇಪರ್ ಅನ್ನು ಪ್ರಸಾರ ಮಾಡುವ ಮುಖ್ಯ ಉದ್ದೇಶವಾಗಿದೆ ಎಂದರು.

ಇ-ಪೇಪರ್‌ ‘ಎಲೆಕ್ಷನ್ ಫೋಕಸ್’ ಅನ್ನು ಪ್ರಾರಂಭಿಸಿದ ಉದ್ದೇಶ

ಇದು ದಕ್ಷಿಣ ಕನ್ನಡ SVEEP ಸಮಿತಿಯ ವಿನೂತನ ಚಟುವಟಿಕೆಯಾಗಿದೆ. ಎಲೆಕ್ಷನ್ ಫೋಕಸ್ ಎನ್ನುವುದು ಕನ್ನಡ ಭಾಷೆಯಲ್ಲಿ 4 ರಿಂದ 5 ಪುಟಗಳನ್ನು ಒಳಗೊಂಡಿರುವ ಎಲೆಕ್ಟ್ರಾನಿಕ್ ಪೇಪರ್ ಆಗಿದೆ. ಇದು ಜಿಲ್ಲೆಯಲ್ಲಿನ SVEEP ಸಮಿತಿಯ ಚಟುವಟಿಕೆಗಳ ವಿವರಗಳು, ಅದರ ಕ್ರಿಯಾ ಯೋಜನೆಗಳು ಜೊತೆಗೆ ಅನುಷ್ಠಾನದ ತಂತ್ರಗಳು ಮತ್ತು ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಲೇಖಕರ ಲೇಖನಗಳು, ಕವನಗಳು, ಕಥೆಗಳು, ಉಲ್ಲೇಖಗಳು, ಅಭಿಪ್ರಾಯಗಳನ್ನು ಹೊಂದಿರುತ್ತದೆ. SVEEP ಚಟುವಟಿಕೆಗಳ ಬಗ್ಗೆ ಮತದಾರರಿಗೆ ಅರಿವು ಮೂಡಿಸುವುದು ಮುಖ್ಯ ಉದ್ದೇಶವಾಗಿದೆ ಎಂದು ಕುಮಾರ್ ಹೇಳಿದರು.

ಇದನ್ನೂ ಓದಿ:‘Ghulam Nabi Azad: ಯಾವುದೇ ರಾಜ್ಯದ ಚುನಾವಣೆ ಗೆಲುವಿನ ಶ್ರೇಯ ಕಾಂಗ್ರೆಸ್​​ ಕೇಂದ್ರ ನಾಯಕತ್ವಕ್ಕೆ ಸಲ್ಲದು; ಗುಲಾಂ ನಬಿ ಆಜಾದ್

 ಸಾಮಾಜಿಕ ಮಾಧ್ಯಮಗಳಿಂದ ಯುವ ಮತದಾರರನ್ನ ತಲುಪುವ ಗುರಿ

ಇ-ಪೇಪರ್ ಅನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ಮೂಲಕ ಮತದಾರರಲ್ಲಿ ಪ್ರಸಾರ ಮಾಡಲಾಗುತ್ತದೆ. ಪಿಯು ಮತ್ತು ಪದವಿ ಕಾಲೇಜು ವಿಭಾಗಗಳ ಮೂಲಕ ಎಲ್ಲ ಯುವ ಮತದಾರರನ್ನು ತಲುಪುವ ಗುರಿ ಹೊಂದಿದ್ದೇವೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್‌ಗಳು, ಡಿಡಿಪಿಐ, ಬಿಇಒಗಳು, ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯಿತಿ ಬಿಇಒಗಳು ಮತ್ತು ಎಲ್ಲಾ ಇಲಾಖೆ ಮುಖ್ಯಸ್ಥರು ಇ-ಪೇಪರ್ ಅನ್ನು ಪ್ರತಿಯೊಬ್ಬ ಮತದಾರರಿಗೆ ತಲುಪುವವರೆಗೆ ಪ್ರಸಾರ ಮಾಡುವ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:45 am, Wed, 5 April 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!