ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಚುನಾವಣಾ ಇ-ಪೇಪರ್ ಬಿಡುಗಡೆ

ಜಿಲ್ಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಸೋಮವಾರ(ಏ.3) ಮಂಗಳೂರಿನಲ್ಲಿ SVEEP ಚಟುವಟಿಕೆಗಳ ಭಾಗವಾಗಿ ಅಧಿಕಾರಿಗಳು ‘ಎಲೆಕ್ಷನ್ ಫೋಕಸ್' ಇ-ಪೇಪರ್ ಅನ್ನು ಬಿಡುಗಡೆ ಮಾಡಿದ್ದಾರೆ .

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಚುನಾವಣಾ ಇ-ಪೇಪರ್ ಬಿಡುಗಡೆ
ಇ-ಪೇಪರ್​ ಬಿಡುಗಡೆ
Follow us
|

Updated on:Apr 05, 2023 | 10:58 AM

ದಕ್ಷಿಣ ಕನ್ನಡ: ಜಿಲ್ಲೆಯ ಸ್ವೀಪ್ ಸಮಿತಿಯು ಚುನಾವಣೆಗಳ ಕುರಿತು ದೈನಂದಿನ ಇ-ಪೇಪರ್‌ ‘ಎಲೆಕ್ಷನ್ ಫೋಕಸ್’ ಅನ್ನು ಪ್ರಾರಂಭಿಸಿದೆ. ಇ-ಪೇಪರ್ ಅನ್ನು ಬಿಡುಗಡೆ ಮಾಡಿದ SVEEP ಸಮಿತಿಯ ಅಧ್ಯಕ್ಷ ಕುಮಾರ್ ಮಾತನಾಡಿ ‘ ಜನ ಸಾಮಾನ್ಯರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮತದಾರರು ಮತದಾನ ಮಾಡುವಂತೆ ಉತ್ತೇಜಿಸುವುದು ಇ-ಪೇಪರ್ ಅನ್ನು ಪ್ರಸಾರ ಮಾಡುವ ಮುಖ್ಯ ಉದ್ದೇಶವಾಗಿದೆ ಎಂದರು.

ಇ-ಪೇಪರ್‌ ‘ಎಲೆಕ್ಷನ್ ಫೋಕಸ್’ ಅನ್ನು ಪ್ರಾರಂಭಿಸಿದ ಉದ್ದೇಶ

ಇದು ದಕ್ಷಿಣ ಕನ್ನಡ SVEEP ಸಮಿತಿಯ ವಿನೂತನ ಚಟುವಟಿಕೆಯಾಗಿದೆ. ಎಲೆಕ್ಷನ್ ಫೋಕಸ್ ಎನ್ನುವುದು ಕನ್ನಡ ಭಾಷೆಯಲ್ಲಿ 4 ರಿಂದ 5 ಪುಟಗಳನ್ನು ಒಳಗೊಂಡಿರುವ ಎಲೆಕ್ಟ್ರಾನಿಕ್ ಪೇಪರ್ ಆಗಿದೆ. ಇದು ಜಿಲ್ಲೆಯಲ್ಲಿನ SVEEP ಸಮಿತಿಯ ಚಟುವಟಿಕೆಗಳ ವಿವರಗಳು, ಅದರ ಕ್ರಿಯಾ ಯೋಜನೆಗಳು ಜೊತೆಗೆ ಅನುಷ್ಠಾನದ ತಂತ್ರಗಳು ಮತ್ತು ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಲೇಖಕರ ಲೇಖನಗಳು, ಕವನಗಳು, ಕಥೆಗಳು, ಉಲ್ಲೇಖಗಳು, ಅಭಿಪ್ರಾಯಗಳನ್ನು ಹೊಂದಿರುತ್ತದೆ. SVEEP ಚಟುವಟಿಕೆಗಳ ಬಗ್ಗೆ ಮತದಾರರಿಗೆ ಅರಿವು ಮೂಡಿಸುವುದು ಮುಖ್ಯ ಉದ್ದೇಶವಾಗಿದೆ ಎಂದು ಕುಮಾರ್ ಹೇಳಿದರು.

ಇದನ್ನೂ ಓದಿ:‘Ghulam Nabi Azad: ಯಾವುದೇ ರಾಜ್ಯದ ಚುನಾವಣೆ ಗೆಲುವಿನ ಶ್ರೇಯ ಕಾಂಗ್ರೆಸ್​​ ಕೇಂದ್ರ ನಾಯಕತ್ವಕ್ಕೆ ಸಲ್ಲದು; ಗುಲಾಂ ನಬಿ ಆಜಾದ್

 ಸಾಮಾಜಿಕ ಮಾಧ್ಯಮಗಳಿಂದ ಯುವ ಮತದಾರರನ್ನ ತಲುಪುವ ಗುರಿ

ಇ-ಪೇಪರ್ ಅನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ಮೂಲಕ ಮತದಾರರಲ್ಲಿ ಪ್ರಸಾರ ಮಾಡಲಾಗುತ್ತದೆ. ಪಿಯು ಮತ್ತು ಪದವಿ ಕಾಲೇಜು ವಿಭಾಗಗಳ ಮೂಲಕ ಎಲ್ಲ ಯುವ ಮತದಾರರನ್ನು ತಲುಪುವ ಗುರಿ ಹೊಂದಿದ್ದೇವೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್‌ಗಳು, ಡಿಡಿಪಿಐ, ಬಿಇಒಗಳು, ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯಿತಿ ಬಿಇಒಗಳು ಮತ್ತು ಎಲ್ಲಾ ಇಲಾಖೆ ಮುಖ್ಯಸ್ಥರು ಇ-ಪೇಪರ್ ಅನ್ನು ಪ್ರತಿಯೊಬ್ಬ ಮತದಾರರಿಗೆ ತಲುಪುವವರೆಗೆ ಪ್ರಸಾರ ಮಾಡುವ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:45 am, Wed, 5 April 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!