AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಚುನಾವಣಾ ಇ-ಪೇಪರ್ ಬಿಡುಗಡೆ

ಜಿಲ್ಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಸೋಮವಾರ(ಏ.3) ಮಂಗಳೂರಿನಲ್ಲಿ SVEEP ಚಟುವಟಿಕೆಗಳ ಭಾಗವಾಗಿ ಅಧಿಕಾರಿಗಳು ‘ಎಲೆಕ್ಷನ್ ಫೋಕಸ್' ಇ-ಪೇಪರ್ ಅನ್ನು ಬಿಡುಗಡೆ ಮಾಡಿದ್ದಾರೆ .

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಚುನಾವಣಾ ಇ-ಪೇಪರ್ ಬಿಡುಗಡೆ
ಇ-ಪೇಪರ್​ ಬಿಡುಗಡೆ
ಕಿರಣ್ ಹನುಮಂತ್​ ಮಾದಾರ್
|

Updated on:Apr 05, 2023 | 10:58 AM

Share

ದಕ್ಷಿಣ ಕನ್ನಡ: ಜಿಲ್ಲೆಯ ಸ್ವೀಪ್ ಸಮಿತಿಯು ಚುನಾವಣೆಗಳ ಕುರಿತು ದೈನಂದಿನ ಇ-ಪೇಪರ್‌ ‘ಎಲೆಕ್ಷನ್ ಫೋಕಸ್’ ಅನ್ನು ಪ್ರಾರಂಭಿಸಿದೆ. ಇ-ಪೇಪರ್ ಅನ್ನು ಬಿಡುಗಡೆ ಮಾಡಿದ SVEEP ಸಮಿತಿಯ ಅಧ್ಯಕ್ಷ ಕುಮಾರ್ ಮಾತನಾಡಿ ‘ ಜನ ಸಾಮಾನ್ಯರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮತದಾರರು ಮತದಾನ ಮಾಡುವಂತೆ ಉತ್ತೇಜಿಸುವುದು ಇ-ಪೇಪರ್ ಅನ್ನು ಪ್ರಸಾರ ಮಾಡುವ ಮುಖ್ಯ ಉದ್ದೇಶವಾಗಿದೆ ಎಂದರು.

ಇ-ಪೇಪರ್‌ ‘ಎಲೆಕ್ಷನ್ ಫೋಕಸ್’ ಅನ್ನು ಪ್ರಾರಂಭಿಸಿದ ಉದ್ದೇಶ

ಇದು ದಕ್ಷಿಣ ಕನ್ನಡ SVEEP ಸಮಿತಿಯ ವಿನೂತನ ಚಟುವಟಿಕೆಯಾಗಿದೆ. ಎಲೆಕ್ಷನ್ ಫೋಕಸ್ ಎನ್ನುವುದು ಕನ್ನಡ ಭಾಷೆಯಲ್ಲಿ 4 ರಿಂದ 5 ಪುಟಗಳನ್ನು ಒಳಗೊಂಡಿರುವ ಎಲೆಕ್ಟ್ರಾನಿಕ್ ಪೇಪರ್ ಆಗಿದೆ. ಇದು ಜಿಲ್ಲೆಯಲ್ಲಿನ SVEEP ಸಮಿತಿಯ ಚಟುವಟಿಕೆಗಳ ವಿವರಗಳು, ಅದರ ಕ್ರಿಯಾ ಯೋಜನೆಗಳು ಜೊತೆಗೆ ಅನುಷ್ಠಾನದ ತಂತ್ರಗಳು ಮತ್ತು ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಲೇಖಕರ ಲೇಖನಗಳು, ಕವನಗಳು, ಕಥೆಗಳು, ಉಲ್ಲೇಖಗಳು, ಅಭಿಪ್ರಾಯಗಳನ್ನು ಹೊಂದಿರುತ್ತದೆ. SVEEP ಚಟುವಟಿಕೆಗಳ ಬಗ್ಗೆ ಮತದಾರರಿಗೆ ಅರಿವು ಮೂಡಿಸುವುದು ಮುಖ್ಯ ಉದ್ದೇಶವಾಗಿದೆ ಎಂದು ಕುಮಾರ್ ಹೇಳಿದರು.

ಇದನ್ನೂ ಓದಿ:‘Ghulam Nabi Azad: ಯಾವುದೇ ರಾಜ್ಯದ ಚುನಾವಣೆ ಗೆಲುವಿನ ಶ್ರೇಯ ಕಾಂಗ್ರೆಸ್​​ ಕೇಂದ್ರ ನಾಯಕತ್ವಕ್ಕೆ ಸಲ್ಲದು; ಗುಲಾಂ ನಬಿ ಆಜಾದ್

 ಸಾಮಾಜಿಕ ಮಾಧ್ಯಮಗಳಿಂದ ಯುವ ಮತದಾರರನ್ನ ತಲುಪುವ ಗುರಿ

ಇ-ಪೇಪರ್ ಅನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ಮೂಲಕ ಮತದಾರರಲ್ಲಿ ಪ್ರಸಾರ ಮಾಡಲಾಗುತ್ತದೆ. ಪಿಯು ಮತ್ತು ಪದವಿ ಕಾಲೇಜು ವಿಭಾಗಗಳ ಮೂಲಕ ಎಲ್ಲ ಯುವ ಮತದಾರರನ್ನು ತಲುಪುವ ಗುರಿ ಹೊಂದಿದ್ದೇವೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್‌ಗಳು, ಡಿಡಿಪಿಐ, ಬಿಇಒಗಳು, ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯಿತಿ ಬಿಇಒಗಳು ಮತ್ತು ಎಲ್ಲಾ ಇಲಾಖೆ ಮುಖ್ಯಸ್ಥರು ಇ-ಪೇಪರ್ ಅನ್ನು ಪ್ರತಿಯೊಬ್ಬ ಮತದಾರರಿಗೆ ತಲುಪುವವರೆಗೆ ಪ್ರಸಾರ ಮಾಡುವ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:45 am, Wed, 5 April 23

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ