ಬಂಡಾಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ಉದ್ಧವ್ ಠಾಕ್ರೆಗೆ ನೀಡಿ ನಿರ್ಣಯ ಅಂಗೀಕರಿಸಿದ ಶಿವಸೇನಾ

ಪಕ್ಷಕ್ಕೆ ದ್ರೋಹ ಬಗೆದವರ ವಿರುದ್ಧ ಕ್ರಮ ಕೈಗೊಳ್ಳುವ ಎಲ್ಲಾ ಅಧಿಕಾರವನ್ನು ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರಿಗೆ ನೀಡಿ ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಸಂಜಯ್ ರಾವುತ್ ಹೇಳಿದ್ದಾರೆ.

ಬಂಡಾಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ಉದ್ಧವ್ ಠಾಕ್ರೆಗೆ ನೀಡಿ ನಿರ್ಣಯ ಅಂಗೀಕರಿಸಿದ ಶಿವಸೇನಾ
ಉದ್ಧವ್ ಠಾಕ್ರೆ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Jun 25, 2022 | 7:46 PM

ಮುಂಬೈ: ಶನಿವಾರ ನಡೆದ ತನ್ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಏಕನಾಥ್ ಶಿಂಧೆ (Eknat Shinde)  ಅವರೊಂದಿಗೆ ಬಂಡಾಯ ಪಾಳಯಕ್ಕೆ ಸೇರಿರುವ ಎಲ್ಲಾ ಭಿನ್ನಮತೀಯ ಸಚಿವರನ್ನು ಪದಚ್ಯುತಗೊಳಿಸಲು ಶಿವಸೇನಾ (Shiv Sena) ನಿರ್ಧರಿಸಿದೆ. ಮತ್ತೊಂದು ನಿರ್ಧಾರದಲ್ಲಿ, ಯಾವುದೇ ರಾಜಕೀಯ ಸಂಘಟನೆಯು ಶಿವಸೇನಾ ಹೆಸರನ್ನು ಮತ್ತು ಅದರ ಸಂಸ್ಥಾಪಕ ದಿವಂಗತ ಬಾಳಠಾಕ್ರೆ (Bal Thackeray) ಹೆಸರನ್ನು ಬಳಸುವಂತಿಲ್ಲ ಎಂಬ ನಿರ್ಣಯವನ್ನು ಅಂಗೀಕರಿಸಿದೆ. ಶಿಂಧೆಯವರ ಬಂಡಾಯದಿಂದಾಗಿ ಎಂವಿಎ ನೇತೃತ್ವದ ಸರ್ಕಾರ ರಾಜಕೀಯ ಬಿಕ್ಕಟ್ಟಿಗೆ ಸಿಲುಕಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮತ್ತು ಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ (Uddhav Thackeray) ಅವರು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಕರೆದಿದ್ದರು. ಬಹುಪಾಲು ಸೇನಾ ಶಾಸಕರು, ಅವರಲ್ಲಿ ಕೆಲವರು ಕ್ಯಾಬಿನೆಟ್ ಮಂತ್ರಿಗಳು, ಗುವಾಹಟಿಯಲ್ಲಿ ಬಂಡಾಯ ಗುಂಪನ್ನು ಸೇರಿದ್ದಾರೆ. ಶಿಂಧೆ ಅವರಲ್ಲದೆ, ಕ್ಯಾಬಿನೆಟ್ ಮಟ್ಟದ ‘ಆಯೋಗ್ ಅಧ್ಯಕ್ಷ’ ರಾಜೇಶ್ ಕ್ಷೀರಸಾಗರ್, ದಾದಾ ಭೂಸೆ, ಗುಲಾಬ್ ರಾವ್ ಪಾಟೀಲ್, ಸಂದೀಪ್ ಭೂಮ್ರೆ, ಶಂಭುರಾಜೇ ದೇಸಾಯಿ, ಅಬ್ದುಲ್ ಸತ್ತಾರ್ ಮತ್ತು ಬಚ್ಚು ಕಾಡು ಅವರು ರಾಷ್ಟ್ರೀಯ ಕಾರ್ಯಕಾರಿಣಿಯ ನಿರ್ಧಾರದಂತೆ ಕ್ರಮ ಎದುರಿಸಬೇಕಾಗುತ್ತದೆ. ಶಿಂಧೆ ಮತ್ತು ಪಕ್ಷದ ಮತ್ತೋರ್ವ ಅತೃಪ್ತ ನಾಯಕ ಮತ್ತು ಮಾಜಿ ಸಚಿವ ರಾಮದಾಸ್ ಕದಂ ರಾಷ್ಟ್ರೀಯ ಕಾರ್ಯಕಾರಿಣಿಯ ಭಾಗವಾಗಿದ್ದರು. ಕದಂ ಅವರ ಪುತ್ರ, ಶಾಸಕ ಯೋಗೇಶ್ ಕದಂ ಗುವಾಹಟಿಯಲ್ಲಿ ಬಂಡಾಯ ಪಾಳಯ ಸೇರಿದ್ದಾರೆ. ಬಂಡಾಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲು ಉದ್ಧವ್ ಠಾಕ್ರೆ ಅವರಿಗೆ ಅಧಿಕಾರ ನೀಡುವ ನಿರ್ಣಯವನ್ನು ರಾಷ್ಟ್ರೀಯ ಕಾರ್ಯಕಾರಿಣಿ ಅಂಗೀಕರಿಸಿದೆ.

“ಶಿವಸೇನಾ ಬಾಳಾಠಾಕ್ರೆಯವರದ್ದು. ಹಿಂದುತ್ವ ಮತ್ತು ಮರಾಠಿ ಹೆಮ್ಮೆಯ ಅವರ ಉಗ್ರ ಸಿದ್ಧಾಂತವನ್ನು ಮುಂದಕ್ಕೆ ಕೊಂಡೊಯ್ಯಲು ಬದ್ಧವಾಗಿದೆ ಎಂದು ಕಾರ್ಯಕಾರಿಣಿ ನಿರ್ಧರಿಸಿತು. ಶಿವಸೇನಾ ಎಂದಿಗೂ ಈ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸೇನಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.

ಪಕ್ಷಕ್ಕೆ ದ್ರೋಹ ಬಗೆದವರ ವಿರುದ್ಧ ಕ್ರಮ ಕೈಗೊಳ್ಳುವ ಎಲ್ಲಾ ಅಧಿಕಾರವನ್ನು ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರಿಗೆ ನೀಡಿ ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ
Image
ಮಹಾರಾಷ್ಟ್ರ ಸರ್ಕಾರದ ಇಂದಿನ ರಾಜಕೀಯ ಬಿಕ್ಕಟ್ಟಿಗೆ ಶಿವಸೇನೆಯ ಒಳಜಗಳವೇ ಕಾರಣ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಾಖ್ಯಾನ
Image
ನೀವು ಏನು ಬೇಕಾದರೂ ಮಾಡಿಕೊಳ್ಳಿ ಆದರೆ ಬಾಳಾಸಾಹೇಬ್ ಹೆಸರು ಬಳಸಬೇಡಿ: ಉದ್ಧವ್ ಠಾಕ್ರೆ
Image
1978ರಲ್ಲಿ ಶರದ್ ಪವಾರ್​​ ಬಂಡಾಯ ಗುಂಪಿನ ನೇತೃತ್ವ ವಹಿಸಿ ಮಹಾರಾಷ್ಟ್ರ ಸರ್ಕಾರ ಉರುಳಿಸಿದ್ದರು: ಹಳೇ ಘಟನೆ ನೆನಪಿಸಿದ ಮಾಜಿ ಶಾಸಕ
Image
Maharashtra Crisis: ಮಹಾರಾಷ್ಟ್ರ ಬಿಕ್ಕಟ್ಟು; ಅತೃಪ್ತ ಶಾಸಕರ ಬಣಕ್ಕೆ ಶಿವಸೇನಾ- ಬಾಳಾಸಾಹೇಬ್ ಎಂದು ಹೆಸರಿಟ್ಟ ಏಕನಾಥ್ ಶಿಂಧೆ

ಜೂನ್ 22 ರಂದು ಕೊರೊನಾವೈರಸ್‌ಗೆ ಧನಾತ್ಮಕ ಪರೀಕ್ಷೆ ನಡೆಸಿದ ಠಾಕ್ರೆ, ಅವರ ನಿವಾಸ ‘ಮಾತೋಶ್ರೀ’ ಯಿಂದ ಸಭೆಯ ಅಧ್ಯಕ್ಷತೆ ವಹಿಸಬೇಕಿತ್ತು. ಆದರೆ, ಅವರು ಮಧ್ಯ ಮುಂಬೈನ ದಾದರ್‌ನಲ್ಲಿರುವ ಪಕ್ಷದ ಪ್ರಧಾನ ಕಚೇರಿ ಶಿವಸೇನಾ ಭವನಕ್ಕೆ ಆಗಮಿಸಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

Published On - 7:45 pm, Sat, 25 June 22

ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ