AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡಾಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ಉದ್ಧವ್ ಠಾಕ್ರೆಗೆ ನೀಡಿ ನಿರ್ಣಯ ಅಂಗೀಕರಿಸಿದ ಶಿವಸೇನಾ

ಪಕ್ಷಕ್ಕೆ ದ್ರೋಹ ಬಗೆದವರ ವಿರುದ್ಧ ಕ್ರಮ ಕೈಗೊಳ್ಳುವ ಎಲ್ಲಾ ಅಧಿಕಾರವನ್ನು ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರಿಗೆ ನೀಡಿ ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಸಂಜಯ್ ರಾವುತ್ ಹೇಳಿದ್ದಾರೆ.

ಬಂಡಾಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ಉದ್ಧವ್ ಠಾಕ್ರೆಗೆ ನೀಡಿ ನಿರ್ಣಯ ಅಂಗೀಕರಿಸಿದ ಶಿವಸೇನಾ
ಉದ್ಧವ್ ಠಾಕ್ರೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 25, 2022 | 7:46 PM

Share

ಮುಂಬೈ: ಶನಿವಾರ ನಡೆದ ತನ್ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಏಕನಾಥ್ ಶಿಂಧೆ (Eknat Shinde)  ಅವರೊಂದಿಗೆ ಬಂಡಾಯ ಪಾಳಯಕ್ಕೆ ಸೇರಿರುವ ಎಲ್ಲಾ ಭಿನ್ನಮತೀಯ ಸಚಿವರನ್ನು ಪದಚ್ಯುತಗೊಳಿಸಲು ಶಿವಸೇನಾ (Shiv Sena) ನಿರ್ಧರಿಸಿದೆ. ಮತ್ತೊಂದು ನಿರ್ಧಾರದಲ್ಲಿ, ಯಾವುದೇ ರಾಜಕೀಯ ಸಂಘಟನೆಯು ಶಿವಸೇನಾ ಹೆಸರನ್ನು ಮತ್ತು ಅದರ ಸಂಸ್ಥಾಪಕ ದಿವಂಗತ ಬಾಳಠಾಕ್ರೆ (Bal Thackeray) ಹೆಸರನ್ನು ಬಳಸುವಂತಿಲ್ಲ ಎಂಬ ನಿರ್ಣಯವನ್ನು ಅಂಗೀಕರಿಸಿದೆ. ಶಿಂಧೆಯವರ ಬಂಡಾಯದಿಂದಾಗಿ ಎಂವಿಎ ನೇತೃತ್ವದ ಸರ್ಕಾರ ರಾಜಕೀಯ ಬಿಕ್ಕಟ್ಟಿಗೆ ಸಿಲುಕಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮತ್ತು ಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ (Uddhav Thackeray) ಅವರು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಕರೆದಿದ್ದರು. ಬಹುಪಾಲು ಸೇನಾ ಶಾಸಕರು, ಅವರಲ್ಲಿ ಕೆಲವರು ಕ್ಯಾಬಿನೆಟ್ ಮಂತ್ರಿಗಳು, ಗುವಾಹಟಿಯಲ್ಲಿ ಬಂಡಾಯ ಗುಂಪನ್ನು ಸೇರಿದ್ದಾರೆ. ಶಿಂಧೆ ಅವರಲ್ಲದೆ, ಕ್ಯಾಬಿನೆಟ್ ಮಟ್ಟದ ‘ಆಯೋಗ್ ಅಧ್ಯಕ್ಷ’ ರಾಜೇಶ್ ಕ್ಷೀರಸಾಗರ್, ದಾದಾ ಭೂಸೆ, ಗುಲಾಬ್ ರಾವ್ ಪಾಟೀಲ್, ಸಂದೀಪ್ ಭೂಮ್ರೆ, ಶಂಭುರಾಜೇ ದೇಸಾಯಿ, ಅಬ್ದುಲ್ ಸತ್ತಾರ್ ಮತ್ತು ಬಚ್ಚು ಕಾಡು ಅವರು ರಾಷ್ಟ್ರೀಯ ಕಾರ್ಯಕಾರಿಣಿಯ ನಿರ್ಧಾರದಂತೆ ಕ್ರಮ ಎದುರಿಸಬೇಕಾಗುತ್ತದೆ. ಶಿಂಧೆ ಮತ್ತು ಪಕ್ಷದ ಮತ್ತೋರ್ವ ಅತೃಪ್ತ ನಾಯಕ ಮತ್ತು ಮಾಜಿ ಸಚಿವ ರಾಮದಾಸ್ ಕದಂ ರಾಷ್ಟ್ರೀಯ ಕಾರ್ಯಕಾರಿಣಿಯ ಭಾಗವಾಗಿದ್ದರು. ಕದಂ ಅವರ ಪುತ್ರ, ಶಾಸಕ ಯೋಗೇಶ್ ಕದಂ ಗುವಾಹಟಿಯಲ್ಲಿ ಬಂಡಾಯ ಪಾಳಯ ಸೇರಿದ್ದಾರೆ. ಬಂಡಾಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲು ಉದ್ಧವ್ ಠಾಕ್ರೆ ಅವರಿಗೆ ಅಧಿಕಾರ ನೀಡುವ ನಿರ್ಣಯವನ್ನು ರಾಷ್ಟ್ರೀಯ ಕಾರ್ಯಕಾರಿಣಿ ಅಂಗೀಕರಿಸಿದೆ.

“ಶಿವಸೇನಾ ಬಾಳಾಠಾಕ್ರೆಯವರದ್ದು. ಹಿಂದುತ್ವ ಮತ್ತು ಮರಾಠಿ ಹೆಮ್ಮೆಯ ಅವರ ಉಗ್ರ ಸಿದ್ಧಾಂತವನ್ನು ಮುಂದಕ್ಕೆ ಕೊಂಡೊಯ್ಯಲು ಬದ್ಧವಾಗಿದೆ ಎಂದು ಕಾರ್ಯಕಾರಿಣಿ ನಿರ್ಧರಿಸಿತು. ಶಿವಸೇನಾ ಎಂದಿಗೂ ಈ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸೇನಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.

ಪಕ್ಷಕ್ಕೆ ದ್ರೋಹ ಬಗೆದವರ ವಿರುದ್ಧ ಕ್ರಮ ಕೈಗೊಳ್ಳುವ ಎಲ್ಲಾ ಅಧಿಕಾರವನ್ನು ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರಿಗೆ ನೀಡಿ ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ
Image
ಮಹಾರಾಷ್ಟ್ರ ಸರ್ಕಾರದ ಇಂದಿನ ರಾಜಕೀಯ ಬಿಕ್ಕಟ್ಟಿಗೆ ಶಿವಸೇನೆಯ ಒಳಜಗಳವೇ ಕಾರಣ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಾಖ್ಯಾನ
Image
ನೀವು ಏನು ಬೇಕಾದರೂ ಮಾಡಿಕೊಳ್ಳಿ ಆದರೆ ಬಾಳಾಸಾಹೇಬ್ ಹೆಸರು ಬಳಸಬೇಡಿ: ಉದ್ಧವ್ ಠಾಕ್ರೆ
Image
1978ರಲ್ಲಿ ಶರದ್ ಪವಾರ್​​ ಬಂಡಾಯ ಗುಂಪಿನ ನೇತೃತ್ವ ವಹಿಸಿ ಮಹಾರಾಷ್ಟ್ರ ಸರ್ಕಾರ ಉರುಳಿಸಿದ್ದರು: ಹಳೇ ಘಟನೆ ನೆನಪಿಸಿದ ಮಾಜಿ ಶಾಸಕ
Image
Maharashtra Crisis: ಮಹಾರಾಷ್ಟ್ರ ಬಿಕ್ಕಟ್ಟು; ಅತೃಪ್ತ ಶಾಸಕರ ಬಣಕ್ಕೆ ಶಿವಸೇನಾ- ಬಾಳಾಸಾಹೇಬ್ ಎಂದು ಹೆಸರಿಟ್ಟ ಏಕನಾಥ್ ಶಿಂಧೆ

ಜೂನ್ 22 ರಂದು ಕೊರೊನಾವೈರಸ್‌ಗೆ ಧನಾತ್ಮಕ ಪರೀಕ್ಷೆ ನಡೆಸಿದ ಠಾಕ್ರೆ, ಅವರ ನಿವಾಸ ‘ಮಾತೋಶ್ರೀ’ ಯಿಂದ ಸಭೆಯ ಅಧ್ಯಕ್ಷತೆ ವಹಿಸಬೇಕಿತ್ತು. ಆದರೆ, ಅವರು ಮಧ್ಯ ಮುಂಬೈನ ದಾದರ್‌ನಲ್ಲಿರುವ ಪಕ್ಷದ ಪ್ರಧಾನ ಕಚೇರಿ ಶಿವಸೇನಾ ಭವನಕ್ಕೆ ಆಗಮಿಸಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

Published On - 7:45 pm, Sat, 25 June 22

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ